
ಮಡಿಕೇರಿ ಏ.13 NEWS DESK : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಎಸ್.ಆರ್.ರಮ್ಯಾ ಅವರನ್ನು ಸನ್ಮಾನಿಸಲಾಯಿತು. ಕುಶಾಲನಗರ ತಾಲ್ಲೂಕಿನ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಆರ್.ರಮ್ಯಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 582 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಹಿನ್ನೆಲೆ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್, ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ, ಗೌರವಾಧ್ಯಕ್ಷರಾದ ಚಂದ್ರು, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಶಿವು, ಪ್ರಧಾನ ಕಾರ್ಯದರ್ಶಿ ಸಚಿನ್ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.









