Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಹಾಗೂ ಇತರ ಕೃಷಿ ಪರಿಕರಗಳ ಆಳವಡಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಮಧುವನ, ಪಾಲಿಹೌಸ್ ಹಾಗೂ ತೆರೆದ ಸಭಾಂಗಣವನ್ನು ಉದ್ಘಾಟಿಸಿದರು. ಕೇಂದ್ರದಲ್ಲಿ ಬೆಳೆದ ಅರ್ಕಾ ಸುಪ್ರೀಮ್, ಅರ್ಕಾ ಕೂರ್ಗ್ ಬಟರ್ಫ್ರೂಟ್ ಸೇರಿದಂತೆ ವಿವಿಧ ಹಣ್ಣು-ಹಂಪಲುಗಳು, ಕ್ರಷಿಯನ್ನು ಬಾಧಿಸುವ ವಿವಿಧ ಕೀಟಗಳು,ಸಾವಯವ ಗೊಬ್ಬರಗಳು, ಪೋಷಕಾಂಶಗಳು, ಹಣ್ಣಿನ ಗಿಡಗಳು ಹಾಗೂ ಕೃಷಿಕರ ತಾಜಾ ಜೇನು ಪ್ರದರ್ಶನಕ್ಕಿಡಲಾಗಿತ್ತು. ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಮುರಳಿಧರ ಬಿ.ಎಂ. ಸ್ವಾಗತಿಸಿ, ಸಂಸ್ಥೆಯ 80ನೇ ವರ್ಷದ ಸ್ಥಾಪನಾ ಹಿನ್ನೆಲೆ ಕುರಿತು ಮಾಹಿತಿ ನೀಡಿದರು. ಈ ವರ್ಷ ಒಂದು ಲಕ್ಷಕ್ಕೂ ಹೆಚ್ಚು ತೋಟಗಾರಿಕಾ ಗಿಡಗಳು, 60 ಸಾವಿರ ಬಟರ್ಫ್ರೂಟ್ ಗಿಡಗಳು ಹಾಗೂ 10 ಸಾವಿರ ಕೊಡಗಿನ ಕಿತ್ತಳೆ ಗಿಡಗಳನ್ನು ಮಾರಾಟ ಮಾಡಿ ಸುಮಾರು ರೂ.1.20 ಕೋಟಿ ಆದಾಯ ಗಳಿಸಿರುವುದಾಗಿ ತಿಳಿಸಿದರು. ಬೆಂಗಳೂರು ಐಸಿಏಆರ್ ನಿರ್ದೇಶಕರಾದ ಡಾ. ಎಸ್.ಎನ್.ಸುಶೀಲ್ ಮಾತನಾಡಿ, ಕೃಷಿ ಅಭಿವೃದ್ಧಿಯಲ್ಲಿ ತೋಟಗಾರಿಕೆ ಕ್ಷೇತ್ರದ ಪಾತ್ರ ಮಹತ್ವದ್ದಾಗಿದ್ದು, ರಾಸಾಯನಿಕ ಕೀಟನಾಶಕಗಳ ಬದಲಾಗಿ ಜೈವಿಕ ಕೀಟನಾಶಕಗಳನ್ನು ಬಳಸುವಂತೆ ರೈತರಿಗೆ ಸಲಹೆ ನೀಡಿದರು. ಐಸಿಏಆರ್‌ನ ಮತ್ತೊಬ್ಬ ನಿರ್ದೇಶಕರಾದ ಡಾ. ಅರ್ಥಬಂಧು ಸಾಹು, ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಪದಾರ್ಥಗಳ ಬಳಕೆ ಅಗತ್ಯವೆಂದರು. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಮಣ್ಣಿನ ಗುಣಮಟ್ಟ ಹಾನಿ ಮಾಡುವುದಾಗಿ ಎಚ್ಚರಿಸಿದರು. ದ್ವಿತೀಯ ಕೃಷಿ ನಿರ್ದೇಶನಾಲಯದ ನಿರ್ದೇಶಕರಾದ ವೆಂಕಟರಾಮ ರೆಡ್ಡಿ ಜೆ. ಪಾಟೀಲ್, ಚೆಟ್ಟಳ್ಳಿಯ ಕೇಂದ್ರವು ಇತರೆ ಕೃಷಿ ಕೇಂದ್ರಗಳಿಗೆ ಮಾದರಿಯಾಗಿದ್ದು, ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ ₹3 ಲಕ್ಷದಿಂದ ರೂ.15 ಲಕ್ಷದವರೆಗೆ ಸಬ್ಸಿಡಿ ದೊರೆಯಲಿದೆ ಎಂದು ಹೇಳಿದರು. ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷ ಹಾಗೂ ಪ್ರಗತಿಪರ ಬೆಳೆಗಾರ ಬೋಸ್ ಮಂದಣ್ಣ ಮಾತನಾಡಿ, ಜಾಗತಿಕ ಪರಿಸ್ಥಿತಿಗಳ ಪರಿಣಾಮವಾಗಿ ಗೊಬ್ಬರ ಹಾಗೂ ಇತರ ಉತ್ಪನ್ನಗಳ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದರು. ಕೊಡಗಿನ ಹವಾಮಾನದಲ್ಲಿ ಬದಲಾವಣೆ ಕಾಣಿಸುತ್ತಿದ್ದು, ನುರಿತ ಕಾರ್ಮಿಕರ ಕೊರತೆ ಕೃಷಿಗೆ ಸವಾಲಾಗಿದೆ ಎಂದು ಅಭಿಪ್ರಾಯಪಟ್ಟರು. ಕೃಷಿ ನಿರ್ದೇಶಕರಾದ ಡಾ. ಪುತ್ರ ಜಿ.ಟಿ. ಅವರು, ಯೂರಿಯಾ, ಡಿಎಪಿ, ಎಂಒಪಿ ಗೊಬ್ಬರಗಳ ಕಚ್ಚಾ ವಸ್ತುಗಳಿಗೆ ವಿದೇಶ ಅವಲಂಬನೆ ಹೆಚ್ಚಿರುವುದರಿಂದ ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನಿರ್ದೇಶಕರಾದ ಡಾ. ತುಷಾರ್ ಕಾಂತಿ ಬೆಹೆರಾ ಮಾತನಾಡಿ, ಕೃಷಿ ಕೇಂದ್ರಗಳ ಅಭಿವೃದ್ಧಿಯಿಂದ ರೈತರ ಪ್ರಗತಿ ಸಾಧ್ಯವಾಗುತ್ತದೆ. ಕೊಡಗಿನ ಹವಾಮಾನಕ್ಕೆ ಅನುಕೂಲಕರವಾದ ಆಫ್-ಸೀಜನ್ ಲಿಚಿ ಬೆಳೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಹೊಂದಿದ್ದು, ಅದರ ಬೆಳವಣಿಗೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪೌಷ್ಟಿಕ ಕೈತೋಟ ಹಾಗೂ ವೈಜ್ಞಾನಿಕ ಜೇನುಸಾಕಾಣಿಕೆ ಕುರಿತ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಎಸಿ, ಎಸ್ಪಿ ಹಾಗೂ ಟಿಎಸ್ಪಿ ಯೋಜನೆಯ ಫಲಾನುಭವಿಗಳಿಗೆ ಗಿಡಗಳು ಹಾಗೂ ಕೃಷಿ ಪರಿಕರಗಳನ್ನು ವಿತರಿಸಲಾಯಿತು. ಇದೇ ವೇಳೆ ನಿವೃತ್ತ ಸಿಬ್ಬಂದಿ, ಪ್ರಗತಿಪರ ಕೃಷಿಕರು, ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗಳಾ ಸಿ.ಎಂ ಮೋಹನ್,ಎ.ಎಂ ಜಗದೀಶ್ ಹಾಗೂ ಪತ್ರಕರ್ತ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಮುರುಳಿ ಬಿ.ಎಂ. ಸ್ವಾಗತಿಸಿದರು. ವಿಜ್ಞಾನಿ ಡಾ. ರಮೇಶ್ ಬಾಬು ವಂದಿಸಿದರು. ಡಾ. ಎ.ಟಿ. ರಾಣಿ ಕಾರ್ಯಕ್ರಮ ನಿರೂಪಿಸಿದರು.

ವರದಿ : ಪುತ್ತರಿರ ಕರುಣ್ ಕಾಳಯ್ಯ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.