
ಮಡಿಕೇರಿ NEWS DESK ಏ.19 : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು, ಇವರ ಕುಟುಂಬದವರಿಗೆ ಸರಕಾರದಿಂದ ನೀಡುವ ಪರಿಹಾರ ಮತ್ತದ ಉಳಿಕೆ ₹15 ಲಕ್ಷಗಳ ಚೆಕ್ಕನ್ನು ಇಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಸ್ತಾಂತರಿಸಿದರು. ಈ ಹಿಂದೆ ಆನೆ ದಾಳಿಯಾದ ಸಂದರ್ಭದಲ್ಲಿ ಮೃತನ ಕುಟುಂಬಕ್ಕೆ ರೂ 5 ಲಕ್ಷದ ಚೆಕ್ಕನ್ನು ಹಸ್ತಾಂತರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂದರ್ಭ ಮಿದೇರಿರ ನವೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.








