

ಮಡಿಕೇರಿ NEWS DESK ಏ.22 : ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿ ಸಂತೈಸುತ್ತಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕವನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ ರಾಜು ಬಾಯ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎನ್.ಚರಣ್ ಉಪಾಧ್ಯಕ್ಷರಾಗಿ ಷರೀಫ್ ಎಂ.ಯು ಹಾಗೂ ಕಾರ್ಯದರ್ಶಿಯಾಗಿ ತಿಮ್ಮಯ್ಯ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಮಾತನಾಡಿದ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಅವರು ತುರ್ತು ಆರೋಗ್ಯ ಸೇವಾ ಘಟಕದ ಮೂಲಕ ರಸ್ತೆ ಬದಿಯಲ್ಲಿರುವ ನಿರ್ಗತಿಕರು, ಅನಾರೋಗ್ಯ ಪೀಡಿತರು ಹಾಗೂ ಅಸಹಾಯಕರ ಸಮಸ್ಯೆಗಳಿಗೆ ತುರ್ತು ಸ್ಪಂದನೆ ನೀಡಿ ಚಿಕಿತ್ಸೆಯನ್ನು ಒದಗಿಸಲು ಸಹಕಾರ ನೀಡಲಾಗುವುದು. ಅಲ್ಲದೆ ಆರೋಗ್ಯ ಸಂಬoಧಿತ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಮತ್ತು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದರು. ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಿ.ಕರಿಯಪ್ಪ, ಅಧ್ಯಕ್ಷ ನವೀನ್ ಬಿ.ಕೆ ಹಾಗೂ ಗೌರವ ಅಧ್ಯಕ್ಷ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿನಾಜ಼್ ಪ್ರವೀಣ್, ಗೌರವ ಸಲಹೆಗಾರ ಮಹಮ್ಮದ್ ಕೆ.ಕೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಕೆ.ಎ, ಖಜಾಂಚಿ ಪ್ರಮೋದ್, ಸಂಚಾಲಕ ಕವನ್ ಕೊತ್ತೋಳಿ, ದಿನೇಶ್ ಕೆ.ಆರ್, ಕಾರ್ಯದರ್ಶಿ ಡೇವಿಡ್ ಡಿಸೋಜ, ಸಹ ಕಾರ್ಯದರ್ಶಿ ಚಿನ್ಮಯಿ, ಉಪಾಧ್ಯಕ್ಷರುಗಳಾದ ಬಿ.ಎ.ಹರಿಣಾಕ್ಷಿ ಹಾಗೂ ಉಮೇಶ್ ಗೌಡ ಪಿ. ಉಪಸ್ಥಿತರಿದ್ದರು.












