Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*
  • *ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*
  • *ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*
  • *ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*
  • *ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*
  • *ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*
  • *ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*
  • *ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*
  • *ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಬಿ.ಎ.ಷಂಶುದ್ದೀನ್ ಮಡಿಕೇರಿ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.25 NEWS DESK  : ಮಹಿಳೆಯರಿಗೆ ರಾಜಕೀಯವಾದ ಸ್ಥಾನಮಾನಗಳನ್ನು ಕಲ್ಪಿಸುವ ಕೇಂದ್ರದ “ನಾರಿ ಶಕ್ತಿ ವಂದನ್ ಅಧಿನಿಯಮ”ಕ್ಕೆ ರಾಷ್ಟ್ರದ ಹಿತ ಚಿಂತನೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ಬೆಂಬಲ ನೀಡುವ ವಿಶ್ವಾಸಗಳು ಹುಸಿಯಾಗುವ ಮೂಲಕ, ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ ಪರಂಪರೆಗಳ ಸಂರಕ್ಷಣೆಯಲ್ಲಿ ಮಹಿಳೆಯರ ಕೊಡುಗೆ ಅತ್ಯಂತ ಮಹತ್ವಪೂರ್ಣವಾದದ್ದು. ಕರ್ನಾಟಕದ ಇತಿಹಾಸ ಪರಂಪರೆಗಳನ್ನು ಅವಲೋಕಿಸಿದಾಗ ಒಡೆಯರ್ ವಂಶದಲ್ಲಿಯೂ ಮಹಿಳೆಯರ ಕೊಡುಗೆ ಅನನ್ಯವಾಗಿದೆ. ಅದರಂತೆಯೇ ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲ ಮಹಿಳೆಯರು ಈ ನೆಲದ ಸಂಸ್ಕೃತಿಯ ಸಂರಕ್ಷಣೆಗೆ ಶ್ರಮಿಸಿರುವುದನ್ನು ಕಾಣುತ್ತೇವೆ. ಇಂತಹ ಮಹಿಳೆಯರಿಗೆ ರಾಜಕೀಯವಾದ ಮೀಸಲಾತಿ ನೀಡುವ ಮಸೂದೆಗೆ ಕಾಂಗ್ರೆಸ್ ಒಳಗೊಂಡ ಮಿತ್ರಪಕ್ಷಗಳ ಇಂಡಿಯಾ ಸಂಘಟನೆ ಉದ್ದೇಶಪೂರ್ವಕವಾಗಿ ವಿರೋಧವನ್ನು ಮಾಡುವ ಮೂಲಕ, ವಿಧೇಯಕ ಜಾರಿಯಾಗದಂತೆ ನೋಡಿಕೊಂಡಿರುವುದಾಗಿ ಆರೋಪಿಸಿದರು. :: ಕ್ಷೇತ್ರ ಪುನರ್ವಿಂಗಡಣೆ ಅಪಪ್ರಚಾರ :: ಮಹಿಳಾ ಮೀಸಲಾತಿಯೊಂದಿಗೆ ಲೋಕಸಭಾ ಸ್ಥಾನಗಳ ಪುನರ್ವಿಂಗಡಣೆಯ ಬಗ್ಗೆ ಕೇಂದ್ರ ಗೃಹ ಸಚಿವರು ಅಗತ್ಯ ಮಾಹಿತಿಗಳನ್ನು ನೀಡಿದ್ದು, ಯಾವುದೇ ರಾಜ್ಯಗಳಿಗೆ ಪುನರ್ವಿಂಗಡಣೆಯಿಂದ ಅನ್ಯಾಯವಾಗದಂತೆ, ಪ್ರಸ್ತುತ ರಾಜ್ಯಗಳಲ್ಲಿ ಇರುವ ಸಂಸತ್ ಕ್ಷೇತ್ರಗಳಿಗೆ ಸರಿ ಸುಮಾರು ಶೇ.50 ರಷ್ಟು ಹೆಚ್ಚುವರಿ ಸ್ಥಾನಗಳ ಸೇರ್ಪಡೆಯಾಗುತ್ತದೆಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಲೋಕಸಭಾ ಸ್ಥಾನಗಳು ಪುನರ್ವಿಂಗಡಣೆಯೊಂದಿಗೆ 43 ಆಗುತಿತ್ತೆಂದು ಮಾಹಿತಿಯನ್ನು ನೀಡಿದರು. :: ಮಹಿಳಾ ಕಲ್ಯಾಣಕ್ಕೆ ಅಗತ್ಯ ಕ್ರಮ :: ವಿಧೇಯಕಕ್ಕೆ ಅನುಮೋದನೆ ದೊರಕದಿದ್ದರು ಮಹಿಳೆಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿಕೊಂಡು ಬರುತ್ತಿದೆ. ಈ ಹಿಂದೆಯೇ ಜಾರಿ ಮಾಡಿರುವ ಮುದ್ರಾ ಯೋಜನೆಯಡಿ ಇಲ್ಲಿಯವರೆಗೆ ಶೇ.69 ರಷ್ಟು ಮಹಿಳಾ ಫಲಾನುಭವಿಗಳು ಪ್ರಯೋಜನವನ್ನು ಪಡೆದುಕೊಂಡಿರುವುದಾಗಿ ತಿಳಿಸಿದ ಯದುವೀರ್ ಅವರು, ಉಜ್ವಲ ಸೇರಿದಂತೆ ಮಹಿಳಾ ಸ್ವಾವಲಂಬನೆಗೆ ಪೂರಕವಾದ ಯೋಜನೆಗಳ ಪ್ರಯೋಜನವನ್ನು ಶೇ.84 ರಷ್ಟು ಮಹಿಳೆಯರು ಪಡೆದುಕೊಳ್ಳುತ್ತಿರುವ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು. :: ಕೊಡಗಿಗೆ ಲೋಕಸಭಾ ಸ್ಥಾನದ ಅವಕಾಶವಿತ್ತು :: ಲೋಕಸಭಾ ಸ್ಥಾನಗಳ ಪುನರ್ವಿಂಗಡಣೆಯ ಸಂದರ್ಭ ಸಾಂಸ್ಕøತಿಕವಾಗಿ, ಭೌಗೋಳಿವಾಗಿ ವಿಭಿನ್ನವಾಗಿರುವ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಸ್ಥಾನ ದೊರಕುವ ನಿರೀಕ್ಷೆ ಇತ್ತೆಂದು ಯದುವೀರ್ ತಿಳಿಸಿದರು. ಈ ಹಿಂದೆ ದಕ್ಷಿಣ ಕನ್ನಡ ಲೋಕಸಭಾ ಸ್ಥಾನಕ್ಕೆ ಸೇರಿದ್ದ ಕೊಡಗು , ಬಳಿಕ ಮೈಸೂರಿಗೆ ಸೇರ್ಪಡೆಗೊಂಡಿತ್ತು. ಕೊಡಗು-ಮೈಸೂರು ಕ್ಷೇತ್ರ ಭೌಗೊಳಿಕವಾಗಿ ತುಂಬಾ ವಿಸ್ತಾರವಾಗಿದ್ದು, ಸುಮಾರು 22 ಲಕ್ಷ ಮತದಾರರನ್ನು ಹೊಂದಿದೆ. ಇಂತಹ ದೊಡ್ಡ ಕ್ಷೇತ್ರದ ಭಾಗವಾದ ಕೊಡಗು ಜಿಲ್ಲೆಗೆ ಪ್ರತೇಕ ಲೋಕಸಭಾ ಕ್ಷೇತ್ರ ದೊರಕುವ ನಿರೀಕ್ಷೆ ಇತ್ತಾದರು, ಪ್ರಸ್ತುತ ವಿಧೇಯಕಕ್ಕೆ ವಿಪಕ್ಷಗಳು ಅನಗತ್ಯವಾದ ತಾಂತ್ರಿಕ ಕಾರಣಗಳನ್ನು ನೀಡುತ್ತಾ ಬೆಂಬಲ ನೀಡದಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆಂದು ಹೇಳಿದರು. :: ಮಹಿಳೆಯರ ಕನಸು ನುಚ್ಚು ನೂರು :: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರೀನಾ ಪ್ರಕಾಶ್ ಅವರು ಮಾತನಾಡಿ, ಮಹಿಳೆಯರಿಗೆ ರಾಜಕೀಯ ಸ್ಥಾನ ಮಾನಗಳನ್ನು ನೀಡುವ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ವಿರೋಧಿಸುವ ಮೂಲಕ ದೇಶದ 70 ಕೋಟಿ ಮಹಿಳೆಯರ ಕನಸು ನುಚ್ಚು ನೂರಾಗಿದೆ.ಇದಕ್ಕೆ ಕಾರಣವಾದ ಕಾಂಗ್ರೆಸ್‍ಗೆ ಧಿಕ್ಕಾರವಿರುವುದಾಗಿ ತೀಕ್ಷ್ಣವಾಗಿ ನುಡಿದರು. ಪ್ರಧಾನಿ ಮೋದಿ ಅವರು ಮಹಿಳೆಯರ ಕಲ್ಯಾಣ ಮತ್ತು ಅವರ ಸ್ವಾವಲಂಬನೆಯ ಚಿಂತನೆಗಳಡಿ ನಾರಿ ಶಕ್ತಿ ಅಧಿನಿಯಮದ ಜಾರಿಗೆ ಮುಂದಾಗಿದ್ದರು.ಈ ಮಸೂದೆಗೆ ಅನುಮೋದನೆ ದೊರಕಿದ್ದಲ್ಲಿ ವಿಶ್ವ ಮಟ್ಟದಲ್ಲಿ ಭಾರತ ಗಮನ ಸೆಳೆಯುತಿತ್ತು. ಇದಕ್ಕೆ ಬದಲಾಗಿ, ವಿಧೇಯಕವನ್ನು ವಿರೋಧಿಸಿ, ಅದು ಜಾರಿಯಾಗದಂತೆ ನೊಡಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ವಿಪಕ್ಷಗಳು ಕಗ್ಗೊಲೆ ಮಾಡಿರುವುದಾಗಿ ಕಟುವಾಗಿ ನುಡಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ನಾರಿ ವಂದನ್ ಅಧಿನಿಯಮವನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಒಳಗೊಂಡ ವಿಪಕ್ಷಗಳು ಮಹಿಳೆಯರಿಗೆ ದ್ರೋಹ ಬಗೆದಿರುವುದಾಗಿ ಟೀಕಿಸಿದರು. ಗೋಷ್ಠಿಯಲ್ಲಿ ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್‍ಸಿ ಸುನಿಲ್ ಸುಬ್ರಮಣಿ, ಮಡಿಕೇರಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಪಕ್ಷದ ಪ್ರಮುಖರಾದ ವಿ.ಕೆ.ಲೋಕೇಶ್, ಯಮುನಾ ಚಂಗಪ್ಪ, ಲೋಕೇಶ್ವರಿ ಗೋಪಾಲ್, ಬಿ.ಕೆ. ಜಗದೀಶ್, ಕನ್ನಿಕೆ ಮೊದಲಾದವರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*

ಏಪ್ರಿಲ್ 25, 2026

*ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*

ಏಪ್ರಿಲ್ 25, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*

ಏಪ್ರಿಲ್ 25, 2026

*ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*

ಏಪ್ರಿಲ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.25 NEWS DESK : ಕೆದಮುಳ್ಳೂರು ಗ್ರಾಮ ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರೀ ಪಾಷಾಣಮೂರ್ತಿ, ಗುಳಿಗ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ…

*ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*

ಏಪ್ರಿಲ್ 25, 2026

*ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*

ಏಪ್ರಿಲ್ 25, 2026

*ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*

ಏಪ್ರಿಲ್ 25, 2026

*ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*

ಏಪ್ರಿಲ್ 25, 2026

*ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*

ಏಪ್ರಿಲ್ 25, 2026

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 2026

*ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಬಿ.ಎ.ಷಂಶುದ್ದೀನ್ ಮಡಿಕೇರಿ ಆಯ್ಕೆ*

ಏಪ್ರಿಲ್ 25, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.26 ರಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*

ಏಪ್ರಿಲ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.