
ಗೋಣಿಕೊಪ್ಪ ಮೇ 4 NEWS DESK : ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಫಲಿತಾಂಶ ಕಂಡುಕೊಂಡ ಹಿನ್ನೆಲೆ ಗೋಣಿಕೊಪ್ಪಲು ನಗರ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಶಕ್ತಿ ಕೇಂದ್ರದ ಪ್ರಮುಖ್ ಸುರೇಶ್ ರೈ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮತ್ತುಕಾರ್ಯಕರ್ತರು ನಗರದ ಬಸ್ಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಉಪಾಧ್ಯಕ್ಷಗುಮ್ಮಟ್ಟಿರ ಕಿಲನ್ ಗಣಪತಿಇದೊಂದು ಐತಿಹಾಸಿಕ ದಾಖಲೆಯಾಗಿದೆ. 15 ವರ್ಷಗಳ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪಥನವಾಗಿ ಆ ನೆಲದಲ್ಲಿ ಹಿಂದುತ್ವಧ್ವಜ ಹಾರಾಡುತ್ತಿದೆ. ಕಮಿನ್ಯುಸ್ಟ್ ಆಡಳಿತದಲ್ಲಿದ್ದ ಪಶ್ಚಿಮ ಬಂಗಾಳ ಇಂದು ಮೋದಿ, ಷಾ ಜೋಡಿಯತಂತ್ರಗಾರಿಕೆಗೆ ಒಲಿದಿದೆ. ಇದು ದಶಕಗಳ ಕನಸ್ಸಾಗಿತ್ತು ಎಂದು ಹೇಳಿದರು. ಪ್ರಮುಖರುಗಳಾದ ಸುಬ್ರಮಣಿ, ಕೊಣಿಯಂಡ ಬೋಜಮ್ಮ, ಚೈತ್ರ ಬಿ. ಚೇತನ್, ಚೇತನ್, ಪ್ರಭಾಕರ್ ನೆಲ್ಲಿತ್ತಾಯ, ದೀಪಕ್, ನೂರೇರರಂಜಿ, ಸುಬ್ರಮಣಿ, ಸುನೀಲ್ರೈ, ಧನಲಕ್ಷ್ಮಿ, ವಿವೇಕ್, ರಾಜೇಶ್ ಕೆ, ಅಖಿಲ್, ಸಾಜಿ ಇದ್ದರು.









