Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 4 NEWS DESK : ವಿಷು ಹಬ್ಬದ ಪ್ರಯುಕ್ತ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಪ್ರಥಮ ವರ್ಷದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವೇದಿಯ ಮುಂಭಾಗದಲ್ಲಿ ವಿಶು ಕಣಿ ಪೂಜೆಯನ್ನು ಹಿರಿಯರು ಮಾಡಿದರು. ಬಳಿಕ ಮಲಯಾಳಿ ಬಾಂಧವರಿಗೆ ಕೈನೀಟಂ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಷು ಹಬ್ಬದ ಮಹತ್ವ ಸೇರಿದಂತೆ ಹಬ್ಬದ ವಿಷು ಕಣಿ ಮಡಗುವ ರೀತಿ, ದೀಪವನ್ನು ಹಚ್ಚುವುದು, ಸಾಂಪ್ರಾದಾಯಿಕವಾಗಿ ವಿಷು ಕಣಿ ಇಡುವ ಮತ್ತು ಆಚರಿಸುವ ರೀತಿಯನ್ನು ಪ್ರಸ್ತುತ ಪಡಿಸಲಾಯಿತು. ಮತ್ತು ಇಂದಿನ ಯುವಜನತೆಗೆ ವಿಷು ಹಬ್ಬದ ಮಹತ್ವವನ್ನು ತಿಳಿಯಪಡಿಸಿದರು. ಬಳಿಕ ಮೈದಾನದ ಮಧ್ಯಭಾಗದಲ್ಲಿ ದೇಪವನ್ನು ಬೆಳಗುವ ಮೂಲಕ ತಿರುವಾದಿರ ನೃತ್ಯ ಪ್ರದರ್ಶನಕ್ಕೆ ಅತಿಥಿ ಗಣ್ಯರು ಚಾಲನೆ ನೀಡಿದರು. ವಿಶು ಹಬ್ಬದ ಅಂಗವಾಗಿ ಹಿಂದೂ ಮಹಿಳಾ ಮಲಯಾಳಿ ಬಂಧುಗಳಿಂದ ಮೆಗಾ(100ಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿರುವ) ತಿರುವಾದಿರ ನೃತ್ಯವನ್ನು ಪ್ರಸ್ತುತ ಪಡಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ವಿಜಯನ್, ಸುಖ ಸಮೃದ್ಧಿ ಸಂದೇಶದೊಂದಿಗೆ ವರ್ಷವಿಡೀ ಐಶ್ವರ್ಯದ ಸಂಕೇತವಾಗಿ ಕೇರಳೀಯರ ವಿಷು ಹಬ್ಬ ಏ.15ರಂದು ಆಚರಿಸಲಾಗುವುದು. ಇದರ ಅಂಗವಾಗಿ ಕೊಡಗಿನಲ್ಲಿ ನೆಲೆ ನಿಂತಿರುವ ಮಲಯಾಳಿಗಳು ವಿಶು ಹಬ್ಬವನ್ನು ಅತ್ಯಂತ ವಿಜೃಂಬಣೆಯಿಂದ ಇಲ್ಲಿ ಆಚರಿಸುತ್ತಾರೆ. ಕೊಡಗು ಕೇರಳದ ಗಡಿಭಾಗದಲ್ಲಿರುವುದರಿಂದ ಹೆಚ್ಚಿನ ಮಲಯಾಳಿಗಳು ಕೊಡಗಿನಲ್ಲಿದ್ದು ಅವಿನಾಭಾವ ಸಂಬಂಧ ಹೊಂದಿದ್ದಾರೆ. ಮೆಗಾ ತಿರುವಾದಿರ ನೃತ್ಯ ಪ್ರದರ್ಶನ ನಿಜಕ್ಕೂ ಶ್ಲಾಘನೀಯ. ಮಲಯಾಳಿಗಳಿಗೆ ಓಣಂ ಹಾಗೂ ವಿಶು ಹಬ್ಬ ಪ್ರಮುಖವಾದದ್ದು. ತುಳುನಾಡಿನಲ್ಲಿ ಬಿಸು ಪರ್ಬವಾಗಿಯೂ, ಕಾಸರಗೋಡಿನಲ್ಲಿ ತುಳುನಾಡಿನ ಹಾಗೂ ಕೇರಳೀಯ ಸಂಸ್ಕೃತಿಯೂ ಸೇರಿಕೊಂಡಿರುವುದಕ್ಕೆ ವಿಷು ಹಬ್ಬಕ್ಕೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ‘ಕಣಿ ಕಾಣುವ ಹಬ್ಬ’ ಎಂದೇ ವಿಶೇಷತೆಯನ್ನು ಹೊಂದಿದೆ. ವರ್ಷದ ಆರಂಭದಲ್ಲಿ ಮೊದಲ ನೋಟದಲ್ಲಿ ಆರಾಧ್ಯ ದೇವರನ್ನು ನೋಡುವ ಕ್ರಮವೇ ಕಣಿ ಕಾಣುವುದಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆ ತಾಲೂಕು ಬಿಲ್ಲಸ ಸೇವಾ ಸಮಾಜದ ಅಧ್ಯಕ್ಷ ಬಿ.ಎಂ. ಗಣೇಶ್ ಮಾತನಾಡಿ, ವಿಷು ದಿನವನ್ನು ಕೇರಳದಾದ್ಯಂತ ವಿಷು ಹಬ್ಬವನ್ನಾಗಿ ಸಂಭ್ರಮದಿಂದ ಆಚರಿಸುತ್ತಾರೆ. ವಿಷು ಎಂದರೆ ಕಣಿಕಾಣುವ ಹಬ್ಬ. ಮೇಷ ಮಾಸದ ಮೊದಲ ದಿನವೇ ವಿಷು ಕಣಿ. ಹೊಸ ವರ್ಷದ ಆರಂಭದ ದಿನ ಒಳ್ಳೆಯ ಕಣಿ ಕಂಡರೆ ವರ್ಷವಿಡೀ ಶ್ರೇಯಸ್ಸು ಉಂಟಾಗುತ್ತದೆ ಎಂಬ ನಂಬಿಕೆ ಇದರ ಹಿಂದಿದೆ ಎಂದರು. ವಿರಾಜಪೇಟೆ ತಾಲೂಕು ಗೌಡ ಸಮಾಜದ ಉಪಾಧ್ಯಕ್ಷ ಪಿ.ಟಿ. ರಮೇಶ್ ಹಾಗೂ ಮಹಿಳಾ ಆಯೋಗದ ಸದಸ್ಯರಾದ ಶರತ್ ಕಾರ್ಯಕ್ರಮಕ್ಕೆ ಶುಭ ಕೋರಿದರು. ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ ರವಿ ಉತ್ತಪ್ಪ ಮಾತನಾಡಿ ಓಣಂ ಕೊಯ್ಲಿನ ಹಬ್ಬವಾದರೆ, ವಿಷು ಬಿತ್ತನೆಯ ಹಬ್ಬ ಎಂಬುದು ಹಿಂದಿನ ಪರಂಪರಾಗತ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ. ಹಿಂದೆ ವಿಷು ಹಬ್ಬದ ದಿನ ಗದ್ದೆ ಹೂಳುವ, ಬಿತ್ತುವ ಮೂಲಕ ಕೃಷಿಗೆ ಪ್ರಾರಂಭ ನಡೆಸುತ್ತಿದ್ದರು ಎಂದರು. ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ.ಎ. ಮಂಜುನಾಥ್ ಹಾಗೂ ವಿರಾಜಪೇಟೆ ಲಿಟಲ್ ಸ್ಕಾಲರ್ ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ಮಾತನಾಡಿ ವಿಷು ಹಬ್ಬದ ಪ್ರಯುಕ್ತ ನಡೆಸುತ್ತಿರುವ ಗ್ರಾಮೀಣ ಕ್ರೀಡಾಕೂಟ ಹಾಗೂ ಮೆಗಾ ತಿರುವಾದಿರ ನೃತ್ಯ ಪ್ರದರ್ಶನ ನಿಜವಾಗಲೂ ಮೆಚ್ಚುವಂತದ್ದು. ವಿಷು ಹಬ್ಬ ಇಂದು ಆಚರಣೆಯಾದ ಹಾಗೆ ಭಾಷವಾಗುತ್ತಿದೆ. ಇಲ್ಲಿ ವಿಷು ಕಣಿಯ ಬಗ್ಗೆ ತಿಳಿಯಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಆಯೋಜನೆಗೊಳ್ಳಬೇಕು. ಇದಕ್ಕೆ ತಮ್ಮಿಂದ ಆದ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ ದೂರವಾಗುತ್ತಿರುವ ಸಾಂಪ್ರದಾಯಿಕ ಉತ್ಸವಗಳ ಕ್ರಮ, ಬದಲಾಗುತ್ತಿರುವ ಜೀವನ ರೀತಿಯ ನಡುವೆಯೂ ವಿಷು ಹಬ್ಬವನ್ನು ನೆನಪಿಸುವ ಹಿಂದಿನ ಸಾಂಪ್ರದಾಯಿಕ ಆಟಗಳ ಮಹತ್ವ ವಿಶೇಷತೆಯನ್ನು ಪಡೆದಿದೆ. ವಿಷು ದಿನದಂದು ಮನೆ ಮನೆಗಳಲ್ಲಿ, ದೇವಾಲಯಗಳಲ್ಲಿ ತಮ್ಮದೇ ಆದ ಶೈಲಿಯಲ್ಲಿ ಆಚರಿಸಿಕೊಳ್ಳುವ ಸಂಪ್ರದಾಯವಾಗಿದೆ. ಮೋಜಿನ ಆಟದೊಂದಿಗೆ, ವಿಶೇಷ ಔತಣದೊಂದಿಗೆ ಆಚರಿಸುವ ವಿಷು ಹಬ್ಬ, ಸೌರಮಾನ ಯುಗಾದಿ ಮೇಷ ಸಂಕ್ರಮಣದ ಮರು ದಿನ ಹೊಸ ವರ್ಷ ಆರಂಭ. ಇದೇ ಸೌರಮಾನ ಯುಗಾದಿ ಅಥವಾ ವಿಷು ಆಗಿದೆ ಎಂದರಲ್ಲದೆ ಹಬ್ಬದ ಮಹತ್ವ, ತಿರುವಾದಿರ ನೃತ್ಯ ಆಯೋಜನೆ ಹಾಗೂ ಸಮಾಜದ ಮುಖಾಂತರ ಮಾಡುತ್ತಾ ಬಂದಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು, ಸೇವೆಯನ್ನು ವಿವರಿಸಿದರು. ವೇದಿಕೆಯಲ್ಲಿ ವಿರಾಜಪೇಟೆ ಎಸ್ ಎನ್ ಡಿಪಿ ಅಧ್ಯಕ್ಷ ನಾರಾಯಣನ್, ಯೋಗ ಶಿಕ್ಷಕರಾದ ಸುಶೀಲ, ಮುತ್ತಪ್ಪ ದೇವಾಲಯದ ಗೌರವಾಧ್ಯಕ್ಷ ಗೋವಿಂದನ್, ಬಾಬು, ಹಿರಿಯರಾದ ಕಲ್ಲುಬಾಣೆ ಮುತ್ತಪ್ಪ ಸೇವಾ ಸಮಿತಿಯ ಗೌರವಾಧ್ಯಕ್ಷ ಟಿ.ಕೆ. ನಾರಾಯಣ ಇದ್ದರು. ಬಳಿಕ ಪುರುಷರಿಗೆ, ಮಹಿಳೆಯರಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಬಳಿಕ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತಿರುವಾದಿರ ನೃತ್ಯ ಪ್ರಧರ್ಶನ ನೀಡಿದವರಿಗೆ ಪರಿತೋಷಕ ನೀಡಿದರು. ಮರಗಾ ತಿರುವಾದಿರ ನೃತ್ಯವನ್ನು ಮಹಿಳೆಯರು ಹಾಗೂ ಮಕ್ಕಳಿಗೆ ಎರಡುವರೆ ತಿಂಗಳುಗಳ ಕಾಲ ಹೆಗ್ಗಳ ಗ್ರಾಮದ ಕವಿತಾ ಪ್ರಸಾದ್ ಅವರು ತರಬೇತಿ ನೀಡಿದ್ದರು. ಇದೇ ಸಂದರ್ಭ ಕವಿತಾ ಅವರನದನು ಸಮಾಜದ ವತಿಯಿಂದ ಗೌರವಿಸಲಾಯಿತು. ಮಲಯಾಳಿ ಸಮಾಜದ ಉಪಾಧ್ಯಕ್ಷರಾದ ಸಿ.ಆರ್ ಸಜೀವನ್ ಹಾಗೂ ಆಡಳಿತ ಮಂಡಳಿಯವರ ನೇತೃತ್ವದಲ್ಲಿ ವಿಷು ಕಣಿ ಇಡಲಾಗಿತ್ತು. ಇದರ ಅಂಗವಾಗಿ ವಿಷು ಕೈನೀಟಂ ಅನ್ನು ಹಿರಿಯರುಗಳಾದ ರುಕ್ಮಿಣಿ, ಕಾತ್ಯಾಯಿನಿ, ಟಿ.ಕೆ. ನಾರಾಯಣನ್, ಗೋವಿಂದನ್, ಹಾಗೂ ಪದ್ಮನಾಭ ಅವರುಗಳಿಂದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಸರ್ವ ಪದಾಧಿಕಾರಿಗಳು, ಹಾಗೂ ವಿವಿದೆಡೆಗಳಿಂದ ಆಗಮಿಸಿದ ಮಲಯಾಳಿ ಬಾಂಧವರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ…

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.