
ಮಡಿಕೇರಿ ಮೇ 11 NEWS DESK : ಪ್ಯಾಕೇಜ್ ನಂಬರ್ 808-ಇಂಪ್ರೂಮೆಂಟ್ಸ್ ಟು ಬೆಂಗಳೂರು-ಜಾಲ್ಸೂರು ರಸ್ತೆ ಎಸ್ಎಚ್-85 ರಿಂದ ಸಿಎಚ್ 239.76 ಕಿ.ಮೀ. ರಿಗೆ 254.71 ಕಿ.ಮೀ.(ಇನ್ ಸೆಲೆಕ್ಟೆಡ್ ರೀಚಸ್) ಇನ್ ಸೋಮವಾರಪೇಟೆ (ಸರಪಳಿ 239.76 ರಿಂದ 241.00 ಕಿ.ಮೀ.) ಸಿಸಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮೇ, 13 ರಿಂದ ಜೂನ್, 12 ರವರೆಗೆ ಸೋಮವಾರಪೇಟೆ ತಾಲ್ಲೂಕು-ಬೆಂಗಳೂರು ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ಸೋಮವಾರಪೇಟೆ-ಹಾನಗಲ್ಲು-ತಲ್ತಾರಶೆಟ್ಟಳ್ಳಿ-ತಾಕೇರಿ ಮಾರ್ಗ, ಮಾವಿನಕಟ್ಟೆ-ತಲ್ತಾರಶೆಟ್ಟಳಿ ಮಾರ್ಗವಾಗಿ ಬಳಸುವುದು. ಈ ಬಗ್ಗೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.








