
ಮಡಿಕೇರಿ ಮೇ 16 NEWS DESK : ಆದಿವಾಸಿಗಳ ಹಕ್ಕಿಗಾಗಿ ಹೋರಾಟಗಳನ್ನು ನಡೆಸುತ್ತಿದ್ದ ಕಾರ್ಡ್ ಸಂಸ್ಥೆಯ ಪ್ರಮುಖ ಹಾಗೂ ಸಾಮಾಜಿಕ ಕಾರ್ಯಕರ್ತ ಕುಶಾಲನಗರದ ರಾಯ್ ಡೇವಿಡ್ (70) ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು, ಗಿರಿಜನ ಮುಖಂಡ ಜೆ.ಪಿ.ರಾಜು ಹಾಗೂ ಆದಿವಾಸಿ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.









