Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*
  • *ಡಿಸಿಎಂ ಡಿಕೆಶಿ ಜನ್ಮ ದಿನಾಚರಣೆ : ಮಡಿಕೇರಿಯಲ್ಲಿ ರಕ್ತದಾನ ಶಿಬಿರ*
  • *ದುಬಾರೆಯಲ್ಲಿ ದುರ್ಘಟನೆ : ಸಾಕಾನೆ ಬಿದ್ದು  ಚೆನ್ನೈ ಮೂಲದ ಮಹಿಳೆ ಸಾವು : ಮದವೇರಿದ ಆನೆಯಿಂದ ಎದುರಾದ ಆಪತ್ತು*
  • *ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹ ಕಾರ್ಯಾಚರಣೆ ಅಭ್ಯಾಸ*
  • *ಐಮಂಗಲ, ಮಗ್ಗುಲ ಮತ್ತು ವೈಪಡ ಗ್ರಾಮಗಳ ಭದ್ರಕಾಳಿ ದೇವಿಯ ಬೋಡ್ ನಮ್ಮೆ ಆರಂಭ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*
  • *ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*
  • *ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*
  • *2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*
  • *ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ಮೇ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 18 : ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಬೇಕು ಮತ್ತು ಆದಿಮಸಂಜಾತ ಕೊಡವರನ್ನು ಮರುಸ್ಥಾಪಿಸಿ ದೃಢೀಕರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭ ಕೊಡವರ ಪರವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮನವಿಯಲ್ಲಿ ವಿವರಿಸಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭ ಕೊಡಗು ಭೂಪ್ರದೇಶದಲ್ಲಿರುವ ಅಕ್ರಮ ವಲಸಿಗ ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು. ಆದಿಮಸಂಜಾತ ಕೊಡವರು ಹಾಗೂ ಇಲ್ಲಿ ನೆಲೆಸಿರುವ ಇತರ ನಾಗರೀಕರ ನಡುವಿನ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಕೋರಿದ್ದಾರೆ. ಭಾರತದ ಮುಖ್ಯ ಚುನಾವಣಾ ಆಯೋಗವು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗಳ ಮೂಲಕ 2026 ರ ಜೂನ್ 20 ರಿಂದ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಕೊಡಗು ಭೂಪ್ರದೇಶವು ಭೌಗೋಳಿಕ-ಕಾರ್ಯತಂತ್ರದ ಸೂಕ್ಷö್ಮ ಪ್ರದೇಶವಾಗಿದೆ. ಈ ಭೂಮಿಯು ಮಲಬಾರ್, ಉತ್ತರ ಕೇರಳ, ತುಳುನಾಡು, ದಕ್ಷಿಣ ಕನ್ನಡ ಮತ್ತು ಹಳೆಯ ಮೈಸೂರು ಬಯಲು ಸೀಮೆಯ ಗಡಿಗಳಿಂದ ಆವೃತವಾಗಿದೆ. ಮತ ಬ್ಯಾಂಕ್ ರಾಜಕಾರಣಿಗಳಿಂದಾಗಿ ನುಸುಳುಕೋರರು ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಇತರ ವಾಸಸ್ಥಳ ಪ್ರಮಾಣಪತ್ರಗಳನ್ನು ಪಡೆಯಲು ಪ್ರೋತ್ಸಾಹಿಸಲಾಗಿದೆ, ಅಲ್ಲದೆ ಭೂ ಮಂಜೂರಾತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಅವರಿಗೆ ಟಿಕೆಟ್‌ಗಳನ್ನು ಸಹ ನೀಡಲಾಗಿದೆ ಮತ್ತು ನೀಡಲಾಗುತ್ತಿದೆ. ಮತದಾರರ ಪಟ್ಟಿಯಿಂದ ಆದಿಮಸಂಜಾತ ಕೊಡವರ ಹೆಸರನ್ನು ಕೈಬಿಡುವುದು – ಒಂದು ದುಷ್ಟ ಸಂಚಾಗಿದೆ. ಇದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ, ದಾಖಲೆಗಳಲ್ಲಿ ಕೊಡವರು ಅಸ್ತಿತ್ವದಲ್ಲೇ ಇಲ್ಲ ಎಂಬುವುದನ್ನು ತೋರಿಸಲು ಆದಿಮಸಂಜಾತ, ಕಾನೂನುಬದ್ಧ ನಿವಾಸಿ ಕೊಡವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ವ್ಯವಸ್ಥಿತವಾಗಿ ಕೈಬಿಡಲಾಗುತ್ತಿದೆ. ಡಿಲಿಮಿಟೇಷನ್ (ಕ್ಷೇತ್ರ ಮರುವಿಂಗಡಣೆ) ಆಯೋಗದ ಮುಂದೆ ದಾಖಲೆಗಳಲ್ಲಿ ಜನಸಂಖ್ಯೆಯ ಬೆಳವಣಿಗೆಯ ಬಲವನ್ನು ಪ್ರದರ್ಶಿಸುವ ಮೂಲಕ, ಕಳ್ಳ ಮತ ಬ್ಯಾಂಕುಗಳ ಆಧಾರದ ಮೇಲೆ ಸಂಸತ್ತು ಮತ್ತು ವಿಧಾನಸಭೆ ಸ್ಥಾನಗಳನ್ನು ಹೆಚ್ಚಿಸಲು ಹಕ್ಕು ಸಾಧಿಸುವ ಒಂದು ದುಷ್ಟ ಸಂಚು ಇದಾಗಿದೆ. ಕೊಡವರ ಎಲ್ಲಾ ನಡವಳಿಕೆಗಳು ಮತ್ತು ಆಚರಣೆಗಳನ್ನು ನಕಲು ಮಾಡುವ ಮೂಲಕ ಸಾಂಸ್ಕೃತಿಕ ಅತಿಕ್ರಮಣವನ್ನು ಮಾಡುತ್ತಿದ್ದಾರೆ ಹಾಗೂ ಸರ್ಕಾರಿ ವ್ಯವಸ್ಥೆಯನ್ನು ಗೊಂದಲಕ್ಕೀಡುಮಾಡಲು ವಲಸಿಗರನ್ನು ಕೊಡವರೆಂದು ಬಿಂಬಿಸುತ್ತಿದ್ದಾರೆ. ದೇಶಪ್ರೇಮಿಗಳಾದ ಆದಿಮಸಂಜಾತ ಕೊಡವರು ತಮ್ಮದೇ ತಾಯ್ನಾಡಿನಲ್ಲಿ ಅಭದ್ರತೆ, ಅವಮಾನ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ನೈಸರ್ಗಿಕ ಸಂಪತ್ತು, ಜಲಸಂಪನ್ಮೂಲ ಮತ್ತು ಆರ್ಥಿಕ ಸಂಪತ್ತನ್ನು ರಾಷ್ಟ್ರದ ಬೊಕ್ಕಸಕ್ಕೆ ಹೇರಳವಾಗಿ ಕೊಡುಗೆಯಾಗಿ ನೀಡಿದ್ದಾರೆ. ಭಾರತಕ್ಕಾಗಿ ಜನಸಂಖ್ಯೆಯನ್ನು ನಿಯಂತ್ರಿಸಿದ್ದಕ್ಕಾಗಿ ಕೊಡವರಿಗೆ ಬಹುಮಾನ ನೀಡುವ ಬದಲು, ಅವರಿಗೆ ಶಿಕ್ಷೆ ಮತ್ತು ದಂಡನೆ ವಿಧಿಸಬಾರದು ಎಂದು ಒತ್ತಾಯಿಸಿದ್ದಾರೆ. ಕೊಡವರ ಭವಿಷ್ಯಕ್ಕಾಗಿ ಶಾಸನ ರೂಪಿಸಲು ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೂಲಕ ಐತಿಹಾಸಿಕ ನಿರಂತರತೆ, ಅನನ್ಯತೆ ಮತ್ತು ಅಸ್ತಿತ್ವಕ್ಕೆ ಶಾಸನಬದ್ಧ ದೃಢೀಕರಣಕ್ಕಾಗಿ, ಸರ್ವೋಚ್ಛ ಶಾಸನ ಸಭೆಗಳಲ್ಲಿ ಎಂದರೆ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಧ್ವನಿ ಹಾಗೂ ಸ್ಥಾನವನ್ನು ಆಶಿಸುತ್ತೇವೆ. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕಾಗಿ ಇರುವ ಅದೃಶ್ಯ “ಸಂಘ” ಚುನಾವಣಾ ಕ್ಷೇತ್ರದ ಮಾದರಿಯಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯಕ್ಕಾಗಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಪತ್ರದ ಮೂಲಕ ಎನ್.ಯು.ನಾಚಪ್ಪ ಅವರು ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಿಸಿಎಂ ಡಿಕೆಶಿ ಜನ್ಮ ದಿನಾಚರಣೆ : ಮಡಿಕೇರಿಯಲ್ಲಿ ರಕ್ತದಾನ ಶಿಬಿರ*

ಮೇ 18, 2026

*ದುಬಾರೆಯಲ್ಲಿ ದುರ್ಘಟನೆ : ಸಾಕಾನೆ ಬಿದ್ದು  ಚೆನ್ನೈ ಮೂಲದ ಮಹಿಳೆ ಸಾವು : ಮದವೇರಿದ ಆನೆಯಿಂದ ಎದುರಾದ ಆಪತ್ತು*

ಮೇ 18, 2026

*ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹ ಕಾರ್ಯಾಚರಣೆ ಅಭ್ಯಾಸ*

ಮೇ 16, 2026

*ಡಿಸಿಎಂ ಡಿಕೆಶಿ ಜನ್ಮ ದಿನಾಚರಣೆ : ಮಡಿಕೇರಿಯಲ್ಲಿ ರಕ್ತದಾನ ಶಿಬಿರ*

ಮೇ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 18 : ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜನ್ಮ…

*ದುಬಾರೆಯಲ್ಲಿ ದುರ್ಘಟನೆ : ಸಾಕಾನೆ ಬಿದ್ದು  ಚೆನ್ನೈ ಮೂಲದ ಮಹಿಳೆ ಸಾವು : ಮದವೇರಿದ ಆನೆಯಿಂದ ಎದುರಾದ ಆಪತ್ತು*

ಮೇ 18, 2026

*ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹ ಕಾರ್ಯಾಚರಣೆ ಅಭ್ಯಾಸ*

ಮೇ 16, 2026

*ಐಮಂಗಲ, ಮಗ್ಗುಲ ಮತ್ತು ವೈಪಡ ಗ್ರಾಮಗಳ ಭದ್ರಕಾಳಿ ದೇವಿಯ ಬೋಡ್ ನಮ್ಮೆ ಆರಂಭ*

ಮೇ 16, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*

ಮೇ 16, 2026

*ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*

ಮೇ 16, 2026

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 2026

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.