
ಮಡಿಕೇರಿ ಮೇ 18 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಿರಂತರವಾಗಿ ಮತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಹೇರೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ಮತಾಂತರ ಮಾಡಲು ತಮಿಳುನಾಡಿನಿಂದ ಬಂದು ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಹೇರೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಚರ್ಚ್ ಅನ್ನು ತೆರವುಗೊಳಿಸಿ, ಹೊರರಾಜ್ಯದಿಂದ ಬಂದು ಇಲ್ಲಿಯವರೊಂದಿಗೆ ಸೇರಿಕೊಂಡು ಮತಾಂತರ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭ ಬಿಜೆಪಿ ಮುಖಂಡ ಚಂದ್ರಶೇಖರ್ ಹೇರೂರು, ರಾಜೀವ್ ಕುಶಾಲನಗರ, ಮಾಜಿ ಪಂಚಾಯತಿ ಅಧ್ಯಕ್ಷರಾದ ಜಗನಾಥ್ ಮಂದೊಡಿ, ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಸಂತ ಬಿ ಎಸ್,ಕಾರ್ಯದರ್ಶಿ ನಂಜೇಗೌಡ, ಊರಿನ ಪ್ರಮುಖರಾದ ಅರುಣ್ ಚೆಂಗಪ್ಪ, ಡಿಸಂತ್, ಸುನೀಲ್ ಬಿ ಎಸ್, ಗಣೇಶ್ ಕೆ ಎಸ್,ರಮೇಶ್ ಕೆ ಎಸ್, ರೇಣುಕುಮಾರ್ ಬಿ ಎಸ್, ಜಯಪ್ರಕಾಶ್ ಸಿ ಎಂ, ರಂಜನ್ ಬಿ ಎಸ್, ಚರಣ್ ತೆಕ್ಕಡೆ, ಜಗತ್, ಅಪ್ಪುನು, ಪೃಥ್ವಿರಾಜ್ ಮತ್ತು ಡಯಾನ ಇದ್ದರು.









