
ಮಡಿಕೇರಿ ಮೇ 19 NEWS DESK : ಕೇರಳದಲ್ಲಿ (ಯುಡಿಎಫ್ ) ದಾಖಲಿಸಿದ ಐತಿಹಾಸಿಕ ಜಯದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ.ಯಾಕುಬ್ ಅವರು ಅಭಿನಂದನೆ ಸಲ್ಲಿಸಿದರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು ಹಾಗೂ ಕೇರಳ ಮುಸ್ಲಿಂ ಲೀಗ್ ಅಧ್ಯಕ್ಷ ಸೈಯದ್ ಸಾದಿಕ್ ಆಲಿ ಶಿಹಾಬ್ ತಂಗಳ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಸಮಾಲೋಚಿಸಿದರು.
ನಂತರ ಮಾತನಾಡಿದ ಕೆ.ಎ.ಯಾಕುಬ್ 2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಇದು 1977ರ ನಂತರದ ಅತಿದೊಡ್ಡ ಜನಾದೇಶವಾಗಿದ್ದು, ಸುಮಾರು ಒಂದು ದಶಕದ LDF ಆಡಳಿತಕ್ಕೆ ತೆರೆ ಎಳೆದಿದೆ ಎಂದರು. ಈ ಐತಿಹಾಸಿಕ ವಿಜಯದಲ್ಲಿ ಕಾಂಗ್ರೆಸ್ 63 ಸ್ಥಾನಗಳನ್ನು ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ 22 ಸ್ಥಾನಗಳನ್ನು ಗೆದ್ದು ಮೈತ್ರಿಕೂಟದ ಬಲಿಷ್ಠ ಏಕತೆ ಹಾಗೂ ಜನರ ವಿಶ್ವಾಸವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. “ಕೇರಳ ಜನತೆ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟದ ಮೇಲೆ ತೋರಿದ ವಿಶ್ವಾಸ ದೇಶದಾದ್ಯಂತ ಪ್ರಜಾಪ್ರಭುತ್ವ ಶಕ್ತಿಗಳಿಗೆ ಸ್ಫೂರ್ತಿದಾಯಕವಾಗಿದೆ. ಸಯ್ಯದ್ ಸ್ವಾದಿಕ್ ಅಲಿ ಶಿಹಾಬ್ ತಂಗಳ್ ಅವರ ಮಾರ್ಗದರ್ಶನ ಮತ್ತು IUML ನ ಸಮರ್ಪಿತ ಕಾರ್ಯಕರ್ತರ ಪರಿಶ್ರಮ ಈ ವಿಜಯದಲ್ಲಿ ಮಹತ್ವದ ಪಾತ್ರ ವಹಿಸಿದೆ,” ಎಂದು ಹೇಳಿದರು. ಕರ್ನಾಟಕ ಮತ್ತು ಕೇರಳದ ಕಾಂಗ್ರೆಸ್ ನಾಯಕರ ನಡುವಿನ ಈ ಸ್ನೇಹ ಹಾಗೂ ಸಹಕಾರ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಏಕತೆ ಮತ್ತು ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದೆ ಎಂದು ಯಾಕುಬ್ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭ ಕಾಂಗ್ರೆಸ್ ಯುವ ನಾಯಕ ಅಬ್ದುಲ್ ನೌಶಾದ್, ನಾಸಿರ್, ನೌಶಾದ್ ದುಬೈ, ಅಝಾನ್, ನಿಜಾಮ್, ಮೊಹಮ್ಮದ್ ಗುಂಡ್ಲುಪೇಟೆ ಉಪಸ್ಥಿತರಿದ್ದರು.










