Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 26 NEWS DESK : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಮಾತ್ರವಲ್ಲದೇ ತನ್ನ 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ವೇದಿಕೆ ನೀಡಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಉಪ ಕಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ವಾರ್ಷಿಕೋತ್ಸವ, ಕ್ರೀಡೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂತಹ ಮಹಾನ್ ಕಾಲೇಜನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ಕೆಲಸವನ್ನು ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಕಾಲೇಜಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. :: ವಿದ್ಯಾರ್ಥಿಗಳು ದೇಶದ ಶಕ್ತಿ ::  ಹಿರಿಯ ಪತ್ರಕರ್ತ, ಕೊಡಗು ಚಾನಲ್ ಪ್ರಧಾನ ಸಂಪಾದಕ ಜಿ.ವಿ ರವಿಕುಮಾರ್ ಮಾತಾಡಿ, ವಿದ್ಯಾರ್ಥಿಗಳಿಗೆ ಗುರಿ ಮತ್ತು ಪರಿಶ್ರಮ ಅತೀ ಮುಖ್ಯ. ಸೋಮಾರಿತನ ಬಿಟ್ಟು ಸಮಾಜದ ತಿಳುವಳಿಕೆ ಹೊಂದಬೇಕು. ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿ ಎಂಬುದನ್ನು ಮನಗಾಣಬೇಕು ಎಂದು ತಮಿಳುನಾಡು ಚುನಾವಣೆಯನ್ನು ಉದಾಹರಿಸಿ ಎಂದು ಸಲಹೆ ನೀಡಿದರು. ಪ್ರಪಂಚ ವೇಗವಾಗಿ ಬದಲಾಗುತ್ತಿದ್ದು, ವಿದ್ಯಾರ್ಥಿಗಳು ಕೂಡ ಅದರಲ್ಲಿ ಒಂದಾಗಬೇಕು. ಸಮಯ ಬಹಳ ಮುಖ್ಯವಾಗಿದ್ದು ಬದುಕಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರತಿ ವಿಷಯವನ್ನು ಅಧ್ಯಯನ ಮಾಡಬೇಕು. ಯಾವ ವಿಷಯದ ಬಗ್ಗೆಯೂ ಕೀಳರಿಮೆ ಸಲ್ಲದು ಎಂದು ಕಿವಿ ಮಾತು ಹೇಳಿದರು. ಸಾಮಾಜಿಕ ಜವಾಬ್ದಾರಿಯ ಜೊತೆಯಲ್ಲಿ ಮಾನವೀಯತೆ ಬೆಳೆಸಿಕೊಂಡ ಮುನ್ನಡೆಯಿರಿ ಎಂದು ರವಿ ಕುಮಾರ್ ಹೇಳಿದರು.
ಕೆನರಾ ಬ್ಯಾಂಕ್‍ನ ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮತ್ತು ಕೆನರಾ ಬ್ಯಾಂಕ್ ನಡುವೆ ಸುದೀರ್ಘ ಸೇವೆಯ ಇತಿಹಾಸವಿದೆ. ಬ್ಯಾಂಕ್ ಸೇವೆ ಮತ್ತು ಕಾಲೇಜಿನ ಅಗತ್ಯತೆಗಳನ್ನು ತಿಳಿಸಿದಲ್ಲಿ ಮತ್ತಷ್ಟು ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. :: ‘ಝೆಂಜಿ’ಗಳಿಂದ ಬದಲಾವಣೆ :: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ಮಾತನಾಡಿ, ಝೆಂಜಿಗಳಿಂದ ದೇಶದಲ್ಲಿ ಬದಲಾವಣೆ ತರಲು ಸಾಧ್ಯವಿದೆ. 77 ಸಂವತ್ಸರಗಳನ್ನು ಕಂಡಿರುವ ಕಾಲೇಜು ಕಟ್ಟಡ ಇಂದು ಶಿಥಿಲಾವಸ್ಥೆಯಲ್ಲಿದೆ. ಕೊಡಗಿನ ವಿದ್ಯಾರ್ಥಿಗಳು ವಲಸೆ ಹೋಗುತ್ತಿರುವ ಕಾರಣದಿಂದ ಹಲವು ಕೋರ್ಸ್‍ಗಳು ಕಡಿತವಾಗುತ್ತಿದೆ ಎಂದು ವಿಷಾಧಿಸಿದರು. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದರಲ್ಲದೇ, ಹೋರಾಟದ ಮೂಲಕವಾದರೂ ಯುವ ಸಮೂಹ ಕಾಲೇಜನ್ನು ಉಳಿಸಿಕೊಳ್ಳಬೇಕು. ಆ ದಿಸೆಯಲ್ಲಿ ಝೆಂಜಿ ಪೀಳಿಗೆ ನಿರ್ಧಾರ ಮಾಡಬೇಕು ಎಂದು ಕರೆ ನೀಡಿದರು. ಝೆಂಜಿ ಪೀಳಿಗೆ ರೀಲ್ಸ್ ಬಿಟ್ಟು ತಮ್ಮ ಭವಿಷ್ಯ ಕಟ್ಟಿಕೊಳ್ಳುವ ಕಡೆ ಗಮನ ಹರಿಸಬೇಕು. ಆಧುನಿಕ ಯುಗದಲ್ಲಿ ಸುಲಭವಾಗಿ ಸಿಗುವ ವಿಫುಲ ಅವಕಾಶಗಳನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಬೇಕು. ಕಲಿಕೆಯನ್ನು ಶ್ರದ್ಧೆಯಿಂದ ಮಾಡಬೇಕು ಎಂದು ಹೇಳಿದರಲ್ಲದೇ, ಸಮಾಜ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕಾರಾತ್ಮಕ ಬದಲಾವಣೆ ತರಲು ಝೆಂಜಿ ಪೀಳಿಗೆಯಿಂದ ಮಾತ್ರವೇ ಸಾಧ್ಯ ಎಂದು ಪ್ರತಿಪಾದಿಸಿದರು. :: ಶ್ರಮದಿಂದ ‘ಇತಿಹಾಸ’ ಸಾಧ್ಯ ::  ಕಾಲೇಜು ಹಳೇ ವಿದಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಾಧಕರ ಕಾಲೇಜು. ಅಷ್ಟೋಂದು ದೊಡ್ಡ ಮಟ್ದದ ಸಾಧಕರು ಈ ಕಾಲೇಜಿನ ಮೂಲಕ ವಿದ್ಯಾರ್ಜನೆ ಮಾಡಿದ್ದಾರೆ. ರಾಜಕೀಯ, ಸೇನೆ, ನಾಗರಿಕ ಸೇವೆಯಲ್ಲಿ ಇಂದಿಗೂ ಈ ಕಾಲೇಜಿನ ಮಾಜಿ ವಿದ್ಯಾರ್ಥಿಗಳಿದ್ದಾರೆ. ಕಾಲೇಜು ದಿನಗಳಲ್ಲಿ ಶ್ರಮ ವಹಿಸಿದವರು ಮಾತ್ರವೇ ಇಂತಹ ಸಾಧನೆಯ ಇತಿಹಾಸ ಬರೆಯುತ್ತಾರೆ ಎಂದು ಸಲಹೆ ನೀಡಿದರು. ಕಷ್ಟಪಟ್ಟರೆ ಮಾತ್ರವೇ ಗುರಿ ತಲುಪಲು ಸಾಧ್ಯ ಎಂದು ಹೇಳಿದರು. :: ಸಾಧನೆಯೇ ಜೀವಂತ :: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೋ. ಬಿ.ರಾಘವ ಮಾತನಾಡಿ, ಓರ್ವ ವ್ಯಕ್ತಿಯ ಸಾಧನೆ ಮಾತ್ರವೇ ಆತ ಸತ್ತ ಮೇಲೂ ಜೀವಂತವಿರುತ್ತದೆ. ಅಂತಹ ಸಾಧಕರ ಸಾಲಿನಲ್ಲಿ ಈ ಕಾಲೇಜು ವಿದ್ಯಾರ್ಥಿಗಳ ಹೆಸರು ಇರಬೇಕು ಎಂದು ಆಶಿಸಿದರು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಹೇಳಿದರು. :: ಸನ್ಮಾನದ ಗೌರವ: ಕೆನರಾ ಬ್ಯಾಂಕ್‍ನ ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ ವಿನಾಯಕ, ಕಾಲೇಜು ಹಳೇ ವಿದಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ, ಮಾಜಿ ವಿದ್ಯಾರ್ಥಿ ಹರ್ಷ್ ದೇವಯ್ಯ, ಪ್ರಾಣಿ ಶಾಸ್ತ್ರ ವಿಭಾಗದ ಕೃಷ್ಣ, ಗ್ರಂಥಾಲಯ ಮೇಲ್ವಿಚಾರಕಿ ಡಾ.ವಿಜಯಲತಾ, ಎನ್‍ಸಿಸಿ ಜೂನಿಯರ್ ಅಂಡರ್ ಆಫೀಸರ್ ಚರಿಷ್ಮ ರೈ, ಮೇಜರ್ ಪ್ರೋ. ಬಿ.ರಾಘವ, ಕೊಡಗು ವಿ.ವಿ ಉಪ ಕುಲಪತಿ ಪ್ರೋ. ಅಶೋಕ್ ಸಂಗಪ್ಪ ಆಲೂರ, ಹಿರಿಯ ಪತ್ರಕರ್ತ ಜಿ.ವಿ ರವಿಕುಮಾರ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಶೈಕ್ಷಣಿಕ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಪ್ರತಿಭಾ ಪುರಸ್ಕಾರ, ಎನ್‍ಸಿಸಿ, ಎನ್‍ಎಸ್‍ಎಸ್ ಹಾಗೂ ಕ್ರೀಡೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿ ಗೌರವಕ್ಕೆ ಪಾತ್ರರಾದವರಿಗೆ ಗಣ್ಯರು ಪ್ರೋತ್ಸಾಹ ಧನ, ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರಗಳನ್ನು ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿದರು. ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. :: ಸಾಂಸ್ಕೃತಿಕ  ಕಾರ್ಯಕ್ರಮ :: ಸಭಾ ಕಾರ್ಯಕ್ರಮದ ಬಳಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸಮೂಹ ನೃತ್ಯ, ಹಾಡುಗಾರಿಕೆ ಮತ್ತಿತ್ತರ ಸಾಂಸ್ಕøತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಲೇಜು ವಾರ್ಷಿಕೋತ್ಸವಕ್ಕೆ ಮೆರುಗು ತುಂಬಿದರು. ಸಭಾಂಗಣದಲ್ಲಿದ್ದ ವಿದ್ಯಾರ್ಥಿಗಳು ಚಪ್ಪಾಳೆ, ಶಿಳ್ಳೆ ಸಹಿತ ಹರ್ಷೊದ್ಘಾರಗಳಿಂದ ಕಲಾವಿದ ವಿದ್ಯಾರ್ಥಿ ಪ್ರತಿಭೆಗಳನ್ನು ಪ್ರೋತ್ಸಾಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.