Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*
  • *ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*
  • *ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*
  • *ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*

ಮೇ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 28 : ಸರಕಾರ ವಿಧಿಸುತ್ತಿರುವ ತೆರಿಗೆ ಹೊರೆ ದೇಶದ ಜನಸಾಮಾನ್ಯರನ್ನು ಕಂಗಾಲಾಗಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಮಧ್ಯ ಪ್ರಾಚ್ಯದ ಯುದ್ಧದ ಹಿನ್ನೆಲೆ ತೈಲದ ಕೊರತೆ ಇರುವುದರಿಂದ ಬೆಲೆ ಹೆಚ್ಚಳವೆನ್ನಲಾಗುತ್ತ್ತಿದೆ. ಬೆಲೆ ಹೆಚ್ಚಳ ಮಾಡಿದರೆ ಕೊರತೆ ಇರುವ ತೈಲ ಲಭ್ಯವಾಗುತ್ತದೆಯೇ ಎಂದು ಲೇವಡಿ ಮಾಡಿದರು. ತೈಲ ಬೆಲೆ ಹೆಚ್ಚಳದಿಂದ ಬೃಹತ್ ತೈಲ ಕಂಪೆನಿಗಳು ಲಾಭ ಪಡೆಯುತ್ತಿವೆ, ಇಂತಹ ವಿಚಾರಗಳನ್ನು ಜನಸಾಮಾನ್ಯರು ಪ್ರಶ್ನಿಸಬೇಕಿದೆ. ಒಂದು ಟೂತ್ ಪೇಸ್ಟ್ ಕೊಳ್ಳುವಾಗ ಅದಾನಿ ನೀಡುವಷ್ಟೆ ತೆರಿಗೆಯನ್ನು ಸಮಾಜದ ಕೆಳ ಸ್ತರದಲ್ಲಿರುವ ಜನಸಾಮಾನ್ಯರು ಕೂಡ ನೀಡುತ್ತಾರೆ. ಪ್ರಸ್ತುತ ಅತ್ಯಧಿಕ ತೆರಿಗೆ ಪಾವತಿಸುತ್ತಿರುವವರು ಜನಸಾಮಾನ್ಯರೇ ಆಗಿದ್ದಾರೆ. ಇಂದಿನ ತೆರಿಗೆಗಳು ಹೆಚ್ಚಿನ ಹೊರೆಯಾಗುತ್ತಿರುವುದು ಕಳವಳಕಾರಿ ಎಂದರು. ಪ್ರಮುಖ ರಾಜಕೀಯ ಪಕ್ಷಗಳು ಜನ ಹಿತಕ್ಕೆ ಪೂರಕವಾಗಿ ಕಾರ್ಯನಿರ್ವಹಿಸದೆ ಸ್ವಹಿತಾಸಕ್ತಿ ಮತ್ತು ಕುಟುಂಬ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ. ಕೇವಲ ದೇವರು ಧರ್ಮದ ವಿಚಾರಗಳನ್ನಷ್ಟೆ ಮುಂದಿರಿಸಿಕೊAಡು ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಗುಡಿ ಗೋಪುರ ದೇವಸ್ಥಾನಗಳ ಒಳಗಿರುವ ದೇವರನ್ನು ಹೊರ ತಂದು ಅವುಗಳ ಹೆಸರಿನಲ್ಲಿ ಓಟು ಪಡೆಯುವ ಪ್ರಯತ್ನಗಳು ನಡೆಯುತ್ತಿದೆ. ಆಡಳಿತ ಪಕ್ಷದ ಇಂತಹ ಧೋರಣೆಗಳನ್ನು ಜನ ಪ್ರಶ್ನಿಸುವುದು ಅತ್ಯವಶ್ಯಕವಾಗಿದೆ. ಆದರೆ ದೌರ್ಭಾಗ್ಯವೆಂದರೆ ಕೇಂದ್ರ ಸರಕಾರವನ್ನು ಪ್ರಶ್ನಿಸುವುದಕ್ಕೆ ಬದಲಾಗಿ, ಪ್ರತಿ ಪಕ್ಷಗಳನ್ನು ಪ್ರಶ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರವು ಇಂಧನ ಬೆಲೆ ಹೆಚ್ಚಳ ಮಾಡುತ್ತಿದ್ದರೆ, ರಾಜ್ಯದ ಕಾಂಗ್ರೆಸ್ ಪ್ರಮುಖರನ್ನು ನೀವೇಕೆ ಇಂಧನ ದರ ಕಡಿಮೆ ಮಾಡುತ್ತಿಲ್ಲವೆಂದು ಪ್ರಶ್ನಿಸಲಾಗುತ್ತಿದೆ ಎಂದು ವ್ಯಂಗ್ಯವಾಡಿದರು. ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಪಕ್ಷಗಳು ವೈರಿಗಳಲ್ಲ. ಬದಲಾಗಿ ಎದುರಾಳಿಗಳಷ್ಟೆ ಎಂದು ಸ್ಪಷ್ಟಪಡಿಸಿದ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು, ಅದೇ ಬಿಜೆಪಿ ಎಎಪಿಯನ್ನು ಶತ್ರುವಿನಂತೆ, ವೈರಿಯಂತೆ ಕಾಣುತ್ತಿದೆ. ಪ್ರಸ್ತುತ ಕೇವಲ ಅಭಿವೃದ್ಧಿ ಕಾರ್ಯಗಳಿಂದಷ್ಟೆ ಚುನಾವಣೆ ಗೆಲ್ಲುತ್ತೇನೆ ಎನ್ನುವುದು ಮರೀಚಿಕೆ. ಧರ್ಮ ದೇವರುಗಳ ಆಧಾರದಲ್ಲಿ ಮತ ಪಡೆಯುವ ಮೂಲಕ ರಾಜಕೀಯ ಅಧಿಕಾರ ಪಡೆದು ದುಡ್ಡು ಹೊಡೆಯುವ ಪ್ರಯತ್ನವಷ್ಟೆ ನಡೆಯುತ್ತಿದೆಯೆಂದು ಆರೋಪಿಸಿದರು. ಸಂವಿಧಾನದಲ್ಲಿ ಇರುವಂತೆ ಜಾತ್ಯತೀತ ಚಿಂತನೆಗಳನ್ನು ಸಮಾಜದಲ್ಲಿ ಪಸರಿಸುವ, ಗ್ರಾಮ ಸ್ವರಾಜ್ಯವನ್ನು ಸ್ಥಾಪಿಸುವ ಚಿಂತನೆಯನ್ನು ಆಮ್ ಆದ್ಮಿ ಪಾರ್ಟಿ ಹೊಂದಿದೆ. ಜನ ಸಾಮಾನ್ಯರು ತಮ್ಮ ಸಂಕಷ್ಟಗಳನ್ನು ಮತ್ತು ಸಮಸ್ಯೆಗಳನ್ನು ಹೇಳಿಕೊಂಡರೆ ಅದರ ನೈಜತೆಯನ್ನು ಪರಿಶೀಲಿಸಿ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ಅವರು ಮಾತನಾಡಿ ಕೊಡಗು ಜಿಲ್ಲೆಯ ಸಮಸ್ಯೆಗಳು ಹಾಗೂ ಜನಸಾಮಾನ್ಯರ ಮೂಲಭೂತ ಕೊರತೆಗಳ ಬಗ್ಗೆ ಪಕ್ಷ ಚಿಂತನೆ ಹರಿಸಲಿದೆ. ಪಕ್ಷದ ನೂತನ ಕಚೇರಿ ಸಮಸ್ಯೆಗಳ ಪರಿಹಾರಕ್ಕೆ ಸದಾ ಸಕ್ರಿಯವಾಗಿರುತ್ತದೆ ಎಂದು ತಿಳಿಸಿದರು. ಯುವ ಘಟಕದ ಅಧ್ಯಕ್ಷ ಎಂ.ಕೆ.ಆಶಿಕ್ ಮಾತನಾಡಿ, ಪಕ್ಷದ ಸದಸ್ಯತ್ವ ಅಭಿಯಾನವನ್ನು ನಡೆಸಲಿದ್ದು, ಜಿಲ್ಲೆಯ ಜನತೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಹಾಗೂ ಸದಸ್ಯ ಮಂಜುನಾಥ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*

ಮೇ 28, 2026

*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*

ಮೇ 28, 2026

*ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*

ಮೇ 28, 2026

*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*

ಮೇ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 28 : ತಾಲ್ಲೂಕು ಮಟ್ಟದಲ್ಲಿ ನಡೆಯುವ ರೂ.50 ಲಕ್ಷಕ್ಕೆ ಒಳಪಟ್ಟ ಕಾಮಗಾರಿಗಳನ್ನು ಆಯಾ ತಾಲ್ಲೂಕಿನ…

*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*

ಮೇ 28, 2026

*ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*

ಮೇ 28, 2026

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.