
ಮಡಿಕೇರಿ ಮೇ 30 NEWS DESK : ತಮಿಳುನಾಡು ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಟಿವಿಕೆ ಪಕ್ಷದ ವಿಜಯ್ ನೇತೃತ್ವದ ಹೊಸ ಸರಕಾರ ರಚನೆಯಾದ ಹಿನ್ನೆಲೆಯಲ್ಲಿ ಅಲ್ಲಿನ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಪುತ್ರ ಉದಯ್ ನಿಧಿ ಸ್ಟಾಲಿನ್ ಅವರುಗಳು ಕೊಡಗು ಪ್ರವಾಸ ಹಮ್ಮಿಕೊಂಡಿದ್ದರು. ಮೇ 28ರಂದು ತಮಿಳುನಾಡಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ್ದ ಮಾಜಿ ಸಿ.ಎಂ. ಸ್ಟಾಲಿನ್ ಮತ್ತವರ ಪುತ್ರ ಉದಯ್ ನಿಧಿ ಸ್ಟಾಲಿನ್ ಅವರು ಮಡಿಕೇರಿ ಹೊರ ವಲಯದ ಲೀಲಾ ಪ್ಯಾಲೇಸ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದರು. ಮೇ 30ರಂದು ರೆಸಾರ್ಟ್ ವಾಸ್ತವ್ಯ ಪೂರ್ಣಗೊಳಿಸಿ ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದಲ್ಲಿ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ.









