Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*

ಜೂನ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.3 : ಕರ್ನಾಟಕ ರಾಜಕೀಯದ ಮಹತ್ವದ ಘಟ್ಟದಲ್ಲಿ, ಜನಪರ ಆಡಳಿತದ ಶಕ್ತಿಯಾಗಿ ನಿಂತಿರುವ ಕಾಂಗ್ರೆಸ್ ಪಕ್ಷದ ನಾಯಕತ್ವ ಹೊಸ ದಿಕ್ಕಿನತ್ತ ಸಾಗುತ್ತಿರುವುದು ಕಾರ್ಯಕರ್ತರಲ್ಲಿ ಹೊಸ ವಿಶ್ವಾಸ ಮೂಡಿಸಿದೆ. ಈ ಸುಸಂದರ್ಭದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಮುಸ್ಲಿಮರಿಗೆ ವಿಧಾನ ಪರಿಷತ್ ನಲ್ಲಿ ಮತ್ತು ನಿಗಮ ಮಂಡಳಿಗಳಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಡವರ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕ, ನುಡಿದಂತೆ ನಡೆದ ಜನನಾಯಕ ಸಿದ್ದರಾಮಯ್ಯನವರು ರಾಜ್ಯ ರಾಜಕಾರಣದಲ್ಲಿ ಮೂಡಿಸಿರುವ ಛಾಪು ಸದಾ ಅಜರಾಮರ. ಅವರ ಅನುಭವ, ದೂರದೃಷ್ಟಿ ಮತ್ತು ಜನಪರ ಚಿಂತನೆ ಮುಂದಿನ ದಿನಗಳಲ್ಲಿಯೂ ಕರ್ನಾಟಕಕ್ಕೆ ದಾರಿದೀಪವಾಗಿರಲಿ ಎಂಬುವುದು ನಮ್ಮ ಹಾರೈಕೆಯಾಗಿದೆ ಎಂದು ತಿಳಿಸಿದ್ದಾರೆ.
ಸಂಕಷ್ಟದ ಸಂದರ್ಭಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಯಾಗಿ ಮುನ್ನಡೆಸಿದ, ಸಂಘಟನೆಯ ಶಕ್ತಿಯಾಗಿ ದುಡಿದ, ಕಾರ್ಯಕರ್ತರ ನಂಬಿಕೆಯ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ನಾಯಕತ್ವದ ಅವಕಾಶ ದೊರೆಯುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಅವರ ಚುರುಕು ಆಡಳಿತ, ಸಂಘಟನೆ ಸಾಮರ್ಥ್ಯ ಮತ್ತು ಅಭಿವೃದ್ಧಿ ಪರ ಚಿಂತನೆ ಕರ್ನಾಟಕವನ್ನು ಇನ್ನಷ್ಟು ಬಲಿಷ್ಠ ದಾರಿಯಲ್ಲಿ ಮುನ್ನಡೆಸಲಿ ಎನ್ನುವುದು ನಮ್ಮ ಆಶಯವಾಗಿದೆ. “ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಹೊಸ ಚೈತನ್ಯ ಮತ್ತು ಹೊಸ ಭರವಸೆ ನೀಡಿರುವ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಜನಮನ ಗೆದ್ದ ನಾಯಕ ಎ.ಎಸ್.ಪೊನ್ನಣ್ಣ ಅವರು ಜನಪರ ಕೆಲಸಗಳು, ಅಭಿವೃದ್ಧಿ ಪರ ಚಿಂತನೆ ಮತ್ತು ನಿಸ್ವಾರ್ಥ ಸೇವೆಯ ಮೂಲಕ ಜನರ ಅಪಾರ ವಿಶ್ವಾಸವನ್ನು ಗಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ಕೊಡಗಿನ ಅಭಿವೃದ್ಧಿಯ ವೇಗ ಹೆಚ್ಚಿಸಲು ಇಬ್ಬರು ಶಾಸಕರಿಗೆ ಸಚಿವ ಸ್ಥಾನ ದೊರೆಯಬೇಕು. ಅದೇ ರೀತಿ, ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ದೃಷ್ಟಿಯಿಂದ ಕೊಡಗಿನ ಮುಸ್ಲಿಂ ಸಮುದಾಯಕ್ಕೂ ಕರ್ನಾಟಕ ಸರಕಾರದಲ್ಲಿ ಗೌರವಯುತವಾಗಿ ವಿಧಾನ ಪರಿಷತ್ ಸ್ಥಾನ ಅಥವಾ ಸಂಪುಟ ದರ್ಜೆಯ ನಿಗಮ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೆ.ಎ.ಯಾಕುಬ್ ಕೋರಿದ್ದಾರೆ. ಇದು ಕೇವಲ ಒಂದು ಆಶಯವಲ್ಲ, ಕೊಡಗಿನ ಎಲ್ಲಾ ಮುಸ್ಲಿಂ ಜಮಾಅತ್‌ಗಳ ಬಹುಕಾಲದ ನ್ಯಾಯಸಮ್ಮತ, ಭಾವನಾತ್ಮಕ ಮತ್ತು ಅತಿ ದೊಡ್ಡ ಬೇಡಿಕೆಯೂ ಆಗಿದ್ದು, ಈ ಬಾರಿ ಪೂರ್ಣಗೊಳ್ಳಬಹುದು ಎನ್ನುವುದು ಮುಸ್ಲಿಂ ಸಮುದಾಯದ ನಂಬಿಕೆಯೂ ಆಗಿದೆ. ನಾಯಕತ್ವ ಬದಲಾಗಬಹುದು, ಆದರೆ ಜನಪರ ಆಡಳಿತ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಹೋರಾಟ ಎಂದಿಗೂ ಬದಲಾಗದು ಎಂದು ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.