
ಮಡಿಕೇರಿ NEWS DESK ಜೂ.9 : ಮುಂಬೈನ ಎನ್ಎಫ್ಡಿಸಿ-ಎಫ್ಡಿ ಕ್ಯಾಂಪಸ್ನಲ್ಲಿ ಜೂ.15 ರಿಂದ ಜೂ.21 ರವರೆಗೆ ನಡೆಯುವ 19ನೇ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಆಯ್ಕೆಯಾಗಿದೆ. ದಕ್ಷಿಣ ಏಷ್ಯಾದ ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಮತ್ತು ಅನಿಮೇಷನ್ ಚಿತ್ರಗಳಿಗಾಗಿ ಮೀಸಲಾದ ಅತ್ಯಂತ ದೊಡ್ಡ ಚಲನಚಿತ್ರೋತ್ಸವ ಇದಾಗಿದೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್
ಕೊಡವ ಚಿತ್ರರಂಗದ ಖ್ಯಾತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆಯ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಸ್ವಸ್ತಿಕ್ ಎಂಟರ್ಟೈನ್ಮೆoಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರದ ಮೇಲೆ ಬೆಳಕು ಚೆಲ್ಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ‘ಯೂ’ ಅರ್ಹತಾಪತ್ರ ಪಡೆದಿರುವ ‘ಉಮ್ಮತ್ತಾಟ್’ ಜನಪದದಲ್ಲಿ ಸಿಬಿಎಫ್ಸಿ ದಾಖಲಾತಿ ಹೊಂದಿದ ಸಾಕ್ಷ್ಯಚಿತ್ರವಾಗಿದೆ. ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಉಮ್ಮತ್ತಾಟ್’ ಸಿನಿ ಪ್ರಿಯರನ್ನು ಆಕರ್ಷಿಸಲಿದೆ ಎಂದು ಸಾಕ್ಷ್ಯಚಿತ್ರದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ಮುಟ್ಲುವಿನಿಂದ ಕುಟ್ಟದವರೆಗಿನ ವಿವಿಧೆಡೆಯ ಸುಂದರ ಪ್ರದೇಶದಲ್ಲಿ ‘ಉಮ್ಮತ್ತಾಟ್’ ಸಾಕ್ಷ್ಯಚಿತ್ರ ಚಿತ್ರೀಕರಣಗೊಂಡಿದ್ದು, ಛಾಯಾಗ್ರಾಹಕ ವಿನಾಯಕ ರೇವಡಿ ಅವರ ಛಾಯಾಗ್ರಹಣ ಹಾಗೂ ಟಿ.ಮುತ್ತುರಾಜು ಅವರ ಸಂಕಲನವಿದೆ. ತಂತಿಪಾಲ, ದೇವಸ್ತೂರು, ಬಲಂಬೇರಿ, ಕಾಕೋಟುಪರಂಬು, ನೀರುಕೊಲ್ಲಿ, ಮುಟ್ಲು, ಬಾಳೆಲೆ ಆದೆಂಗಡ ಐನ್ ಮನೆ, ಗುಹ್ಯ ಅಗಸ್ತೇಶ್ವರ ದೇವಾಲಯ, ಚೇರಂಬಾಣೆಯ ಗೋಪಾಲಕೃಷ್ಣ ದೇವಾಲಯ ಮುಂತಾದೆಡೆ ಚಿತ್ರೀಕರಿಸಲಾಗಿದೆ. ಈ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ ಅಯ್ಯಪ್ಪ ಅವರ ಸಹ ನಿರ್ದೇಶನವಿದ್ದು, ನಿರೂಪಣೆಯನ್ನು ಕೂಡ ಮಾಡಿದ್ದಾರೆ. ಅಲ್ಲದೆ ವಸ್ತç ವಿನ್ಯಾಸ ಮತ್ತು ನೃತ್ಯ ಪ್ರದರ್ಶನಕ್ಕೆ ಸಹಕಾರ ನೀಡಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತೆ, ನೃತ್ಯ ಮತ್ತು ನೃತ್ಯ ಸಂಗೀತ ಭರತನಾಟ್ಯದ ಕುರಿತು ಮಂಡಿಸಿದ ಪ್ರಬಂಧಕ್ಕೆ ಕೇಂದ್ರ ಸರಕಾರದ ಜೂನಿಯರ್ ಫೆಲೋಶಿಪ್ ಪಡೆದಿರುವ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಭರತನಾಟ್ಯ ಕಲಾವಿದೆ ಮುಕ್ಕಾಟಿರ ಶಿಲ್ಪ ನಂಜಪ್ಪ ಅವರು ನೃತ್ಯ ಪ್ರಕಾರಗಳನ್ನು ನಿರೂಪಣೆ ಮಾಡಿದ್ದಾರೆ. *ಮೊದಲ ಸಾಕ್ಷ್ಯಚಿತ್ರ* ಕಳೆದ ವರ್ಷ ಗೋವಾದಲ್ಲಿ ನಡೆದ 56ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ‘ಉಮ್ಮತ್ತಾಟ್’ ಇಂಡಿಯನ್ ಪನೋರಮಾಗೆ ಆಯ್ಕೆಯಾದ ಮೊದಲ ಕೊಡವ ಭಾಷಾ ಸಾಕ್ಷ್ಯಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ನಂತರ ಇದೇ ಜನವರಿಯಲ್ಲಿ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್









