
ಕುಶಾಲನಗರ ಜೂ.10 NEWS DESK : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಜೂ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಬಳಿಕ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಕೊಡಲು ಇಚ್ಛಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜೂನ್ ತಿಂಗಳ 15 ನೆ ದಿನಾಂಕದೊಳಗೆ ತಮ್ಮ ಹೆಸರುಗಳನ್ನು ನೊಂದಾಯಿಸಲು ಸಮ್ಮೇಳನ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್.ನಂದೀಶ್ ತಿಳಿಸಿದ್ದಾರೆ. ಶರಣರ ವಚನ ಗೀತೆಗಳು, ಜನಪದ ಗೀತೆಗಳು, ಭರತ ನಾಟ್ಯ, ಸಮೂಹ ನೃತ್ಯ, ಶರಣರ ಛದ್ಮ ವೇಶಗಳು, ಶರಣರ ರೂಪಕಗಳು ಹಾಗೂ ಕಿರು ನಾಟಕಗಳಿಗೆ ಅವಕಾಶ ಇರುತ್ತದೆ. ಆಸಕ್ತರು ತಮ್ಮ ಹೆಸರನ್ನು ಎಸ್.ನಂದೀಶ್, ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರು, ಕುಶಾಲನಗರ. ಮೊಬೈಲ್ ಸಂಖ್ಯೆ 94810 72372 ಇಲ್ಲಿ ನೊಂದಾಯಿಸಬೇಕೆಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಕೋರಿದ್ದಾರೆ.








