
ಮಡಿಕೇರಿ ಜೂ.14 NEWS DESK : ಸಹಾರ ಫ್ರೆಂಡ್ಸ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರದ ನಡೆಯಿತು. ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ರಕ್ತದಾನವೇ ಶ್ರೇಷ್ಠದಾನ ವಾಗಿದ್ದು, ಇನ್ನೊಬ್ಬರ ಜೀವ ಉಳಿಸುವ ಈ ಕಾರ್ಯ ಎಲ್ಲರಿಗೂ ಮಾದರಿಯಾಗಬೇಕು. ರಕ್ತದಾನ ಮಹಾದಾನವಾಗಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಹಾಗೂ ಬಡ ಜನತೆಯ ಅವಶ್ಯಕತೆಗಳು ಪೂರೈಕೆಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಡಾ. ಕರುಂಬಯ್ಯ ,ಸಹಾರ ಫ್ರೆಂಡ್ಸ್ ಸದಸ್ಯರು ಅಬ್ದುಲ್ ರೌಫ್, ಮೊಹಸಿನ್, ಮಹಮ್ಮದ್ ಖಾಜಾ, ಸಮಿಉಲ, ಇರ್ಷಾದ್, ಆರ್ಚಿಪ್, ಪ್ರಮುಖರಾದ ಸೂರಜ್ ಹೊಸುರು, ಮಹಾದೇವ, ಮಹಮ್ಮದ್ ನಯಾಜ್, ಶಶಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.









