Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
  • *ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*
  • *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ : ಸ್ನೇಹಿತರ ಒಕ್ಕೂಟದ ಕಾರ್ಯವನ್ನು ಶ್ಲಾಘಿಸಿದ ಗಣ್ಯರು*
  • *ಈಜುಕೊಳಕ್ಕೆ ಇಳಿದ ಪ್ರವಾಸಿಗ ಸಾವು : ವಿರಾಜಪೇಟೆಯಲ್ಲಿ ಘಟನೆ*
  • *ಜೂ.17 ರಂದು ಯೋಗ ಭಾರತಿ ರಜತ ಮಹೋತ್ಸವ*
  • *ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*
  • *ಕೊಡಗಿನ ರಸ್ತೆಗಳ ಅವ್ಯವಸ್ಥೆಗೆ ಶಾಸಕರುಗಳ ನಿರ್ಲಕ್ಷ್ಯವೇ ಕಾರಣ : ಸೋಮವಾರಪೇಟೆ ಬಿಜೆಪಿ ಟೀಕೆ*
  • *ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ*
  • *ಕೊಡಗು ಜಿಲ್ಲೆಯ ಮಳೆ ವಿವರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*

ಜೂನ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.15 NEWS DESK : ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯು ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರದಂತೆ ಕಂಡು ಬಂದಿದ್ದು, ಜನಸಾಮಾನ್ಯರು ಜಾಗೃತರಾಗಬೇಕೆಂದು ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ ಕರೆ ನೀಡಿದೆ. ಒಕ್ಕೂಟದ ವತಿಯಿಂದ ಜೂ.20 ರಂದು “ಎಸ್‍ಐಆರ್ ವಿರೋಧಿ ಸಮಾವೇಶ” ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯಲಿದೆ. ಇದಕ್ಕೆ ಪೂರಕವಾಗಿ ರಾಜ್ಯದ ವಿವಿಧೆಡೆ ಆಯೋಜಿಸಲಾಗಿರುವ “ಎದ್ದೇಳು ಕರ್ನಾಟಕ” ಆಂದೋಲನದ ಭಾಗವಾಗಿ ಜನಜಾಗೃತಿ ಅಭಿಯಾನ ಮಡಿಕೇರಿಗೆ ಆಗಮಿಸಿತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖರು ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ಆದರೆ ಈ ಹಕ್ಕನ್ನು ಪರಿಶಿಷ್ಟರು, ಅಲ್ಪಸಂಖ್ಯಾತರು ಹಾಗೂ ಆದಿವಾಸಿಗಳಿಂದ ಕಸಿದುಕೊಳ್ಳುವ ಪ್ರಯತ್ನವಾಗಿ ಎಸ್‍ಐಆರ್ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣೆಗೂ ಪೂರ್ವದಲ್ಲೆ ಬಿಹಾರದಲ್ಲಿ ಎಸ್‍ಐಆರ್ ಜಾರಿ ಮಾಡುವ ಮೂಲಕ ಸುಮಾರು 65 ಲಕ್ಷ ಮಂದಿಯ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಆದರೆ, ಮತದಾನ ವಂಚಿತರು ಬಾಂಗ್ಲಾ, ಪಾಕಿಸ್ತಾನದ ನುಸುಳುಕೋರರೆಂದು ಸಾಬೀತು ಪಡಿಸಲು ಚುನಾವಣಾ ಆಯೋಗಕ್ಕೆ ಸಾಧ್ಯವಾಗಿಲ್ಲ. ಅಲ್ಲಿ ಅಧಿಕೃತವಾಗಿ ಕೇವಲ ಇಬ್ಬರು ಬಾಂಗ್ಲಾದೇಶಿಗರನ್ನಷ್ಟೆ ಗುರುತಿಸಲಾಗಿದೆ. ರಾಜ್ಯದಲ್ಲಿ ಎಸ್‍ಐಆರ್ ಇದೇ ಜೂ.20 ರಿಂದ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಜನ ಸಾಮಾನ್ಯರಿಂದ ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿ,. ಪಾಸ್ ಪೋರ್ಟ್, ರೇಷನ್ ಕಾರ್ಡ್‍ಗಳನ್ನು ಕೇಳಲಾಗುತ್ತಿದೆ. ಆದರೆ, ಈ ದಾಖಲೆಗಳಿಂದ ವಂಚಿತರಾಗಿರುವ ಆದಿವಾಸಿ ಸಮೂಹ ಮತದಾನದಿಂದ ವಂಚಿತರಾಗುವ ಎಲ್ಲಾ ಅಪಾಯವಿದೆ. ಈ ನೆಲದ ಯಾರೇ ಒಬ್ಬರ ಮತದಾನದ ಹಕ್ಕನ್ನು ತೆಗೆದು ಹಾಕಿದಲ್ಲಿ ಅದರ ಹೊಣೆಗಾರಿಕೆಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಬೇಕು ಎಂದು ಅಮೀನ್ ಮೊಹಿಸಿನ್ ಆಗ್ರಹಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಹಾಗೂ ಸಿಪಿಐ(ಎಂಎಲ್)ನ ರಾಜ್ಯ ಪ್ರತಿನಿಧಿ ಡಿ.ಎಸ್.ನಿರ್ವಾಣಪ್ಪ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯ 9 ರಾಜ್ಯಗಳಲ್ಲಿ ನಡೆದಿದ್ದು, ಸುಮಾರು 6 ಕೋಟಿ ಜನ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಸ್‍ಐಆರ್‍ನಿಂದಾಗಿ 97 ಲಕ್ಷ, ಬಿಹಾರದಲ್ಲಿ 45 ಲಕ್ಷ ಮಂದಿ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಇದು ಬಿಜೆಪಿ ಪರವಾಗಿ ಮತಹಾಕದ ಮಂದಿಯನ್ನು ಮತದಾನದಿಂದಲೇ ಹೊರಗಿಡುವ ಷಡ್ಯಂತ್ರವೆಂದು ಆರೋಪಿಸಿದರು. ಒಕ್ಕೂಟದ ಪ್ರಮುಖರು ಹಾಗೂ ನಿವೃತ್ತ ಪ್ರಾಂಶುಪಾಲ ಜೆ.ಸೋಮಣ್ಣ ಅವರು ಮಾತನಾಡಿ ದೇಶದೊಳಗೆ ನುಸುಳಿರುವ ವಿದೇಶಿ ನುಸುಳುಕೋರರ ಪತ್ತೆಗಾಗಿ ಎಸ್‍ಐಆರ್ ಎನ್ನಲಾಗುತ್ತಿದೆ. ಅಂದರೆ, ಕೇಂದ್ರದಲ್ಲಿ ಕಳೆದ ಹದಿನಾಲ್ಕು ವರ್ಷಗಳಿಂದ ಅಧಿಕಾರ ನಡೆಸಿರುವ ಬಿಜೆಪಿ ತನ್ನ ಈ ಅವಧಿಯಲ್ಲಿ, ನುಸುಳುಕೋರರನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ನ್ಯಾಯಾಲಯವು ಎಸ್‍ಐಆರ್‍ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಕ್ರಮಗಳಿಗೆ ಸಮ್ಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಎಎಐಆರ್ ನಡೆಯುವ ಸಂದರ್ಭ ಅದು ಸೂಚಿಸಿರುವ ಹನ್ನೊಂದು ದಾಖಲಾತಿಗಳಲ್ಲಿ ಜನಸಾಮಾನ್ಯರ, ಆದಿವಾಸಿಗಳ, ಬಡವರ್ಗದ ಕೈಯಲ್ಲಿ ಒಂದಾದರು ದಾಖಲೆ ಇರುವಂತೆ ನೋಡಿಕೊಳ್ಳುವ ಹಾಗೂ ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದರು. ಸಂವಿಧಾನ ಸಂರಕ್ಷಣಾ ಪಡೆಯ ಪ್ರಮುಖ ಸುರೇಶ್ ಅವರು ಮಾತನಾಡಿ, ಜೂ.20 ರಂದು ಬೆಂಗಳೂರು ತಲುಪುವಂತೆ ಬೀದರ್, ವಿಜಯಪುರ, ಉತ್ತರ ಕನ್ನಡ, ತುಮಕೂರು ಮತ್ತು ಉಡುಪಿ ಜಿಲ್ಲೆಯಿಂದ ಜಾಗೃತಿ ಅಭಿಯಾನ ಆರಂಭಗೊಂಡಿದೆ. ಉಡುಪಿಯಿಂದ ಆರಂಭಗೊಂಡ ಅಭಿಯಾನ ದಕ್ಷಿಣ ಕನ್ನಡವನ್ನು ಹಾದು ಇಂದು ಕೊಡಗಿದೆ ಆಗಮಿಸಿದೆ. ಮುಂದೆ ಈ ಅಭಿಯಾನ ಮೈಸೂರು, ಚಾಮರಾಜನಗರ, ಮಂಡ್ಯ ಮೂಲಕ ಬೆಂಗಳೂರಿಗೆ ತೆರಳಲಿದೆ ಎಂದು ತಿಳಿಸಿದರು. ಜಾಗೃತಿ ಅಭಿಯಾನದಲ್ಲಿ ಪ್ರಗತಿಪರ ಒಕ್ಕೂಟದ ಖಲೀಲ್ ಬಾಷ, ಎಂ.ಕೆ.ಮನ್ಸೂರ್ ಆಲಿ, ಮೇರಿ ವೇಗಸ್, ಅಲ್ಲಾರಂಡ ವಿಠಲ್ ನಂಜಪ್ಪ, ಹೇಮಂತ್, ಹೆಚ್.ಜೆ.ಪ್ರಕಾಶ್, ವೈ.ಎಂ.ಸುರೇಶ್ ಮೊದಲಾದವರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026

*ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.15 NEWS DESK : ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗ ಬಳಿ ನಿರ್ಮಾಣವಾಗುತ್ತಿರುವ ‘ಕ್ರೀಡಾ ತರಬೇತಿ ಕೇಂದ್ರ’ದ ಆಡಳಿತ ಕಟ್ಟಡ…

*ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*

ಜೂನ್ 15, 2026

*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ : ಸ್ನೇಹಿತರ ಒಕ್ಕೂಟದ ಕಾರ್ಯವನ್ನು ಶ್ಲಾಘಿಸಿದ ಗಣ್ಯರು*

ಜೂನ್ 15, 2026

*ಈಜುಕೊಳಕ್ಕೆ ಇಳಿದ ಪ್ರವಾಸಿಗ ಸಾವು : ವಿರಾಜಪೇಟೆಯಲ್ಲಿ ಘಟನೆ*

ಜೂನ್ 15, 2026

*ಜೂ.17 ರಂದು ಯೋಗ ಭಾರತಿ ರಜತ ಮಹೋತ್ಸವ*

ಜೂನ್ 15, 2026

*ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*

ಜೂನ್ 15, 2026

*ಕೊಡಗಿನ ರಸ್ತೆಗಳ ಅವ್ಯವಸ್ಥೆಗೆ ಶಾಸಕರುಗಳ ನಿರ್ಲಕ್ಷ್ಯವೇ ಕಾರಣ : ಸೋಮವಾರಪೇಟೆ ಬಿಜೆಪಿ ಟೀಕೆ*

ಜೂನ್ 15, 2026

*ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ*

ಜೂನ್ 15, 2026

*ಕೊಡಗು ಜಿಲ್ಲೆಯ ಮಳೆ ವಿವರ*

ಜೂನ್ 15, 2026

*ಕಾಲೂರು ಮಾಂದಲಪಟ್ಟಿ ರಸ್ತೆ ದುರಸ್ತಿ ಕಾರ್ಯ ಆರಂಭ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.