Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
  • *ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.16 NEWS DESK : ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಹೊಸ ಮತದಾರರನ್ನು ಸೇರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ. ಆದ್ದರಿಂದ ಬೂತ್‍ಮಟ್ಟದ ಏಜೆಂಟರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಆರ್.ಶ್ರೀಧರ್ ಅವರು ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮತಗಟ್ಟೆ ಏಜೆಂಟರುಗಳಿಗೆ ಎಸ್‍ಐಆರ್ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಏಜೆಂಟರು ಎಸ್‍ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಪಾರದರ್ಶಕವಾಗಿ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಹಕರಿಸಬೇಕು, ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು. ಕೈಬಿಟ್ಟ ಹೆಸರುಗಳನ್ನು ಮತ್ತೆ ಸೇರಿಸಲು ನಮೂನೆ ಭರ್ತಿ ಮಾಡಲು ಸಹಾಯ ಮಾಡಬೇಕು, ಮತಗಟ್ಟೆ ಹಂತದಲ್ಲಿನ ದೋಷಗಳನ್ನು ಗುರುತಿಸಿ, ಚುನಾವಣಾ ಅಧಿಕಾರಿಗಳಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡಬೇಕು ಎಂದು ಆರ್.ಶ್ರೀಧರ್ ಅವರು ತಿಳಿಸಿದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಮತದಾರರ ಮಾಹಿತಿ ನವೀಕರಣ, ಹೊಸ ಮತದಾರರ ನೋಂದಣಿ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳ ತಿದ್ದುಪಡಿ ಮತ್ತಿತರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ವಿವರವಾದ ತರಬೇತಿ ನೀಡಲಾಯಿತು. ತರಬೇತುದಾರರಾದ ಎಸ್.ಡಿ.ಪ್ರಶಾಂತ್ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಭಾರತೀಯ ಚುನಾವಣಾ ಆಯೋಗದ ವತಿಯಿಂದ ನಡೆಯುವ ಮಹತ್ವದ ಕಾರ್ಯವಾಗಿದೆ. ಮತಗಟ್ಟೆ ಮಟ್ಟದ ಏಜೆಂಟರುಗಳು ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು, ತಪ್ಪುಗಳನ್ನು ತಿದ್ದಲು ಮತ್ತು ಅರ್ಹರಲ್ಲದ ಮತದಾರರನ್ನು ತೆಗೆದುಹಾಕುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು. ಮತದಾರರಾಗಲು ಭಾರತದ ಪ್ರಜೆಯಾಗಿರಬೇಕು, ಅರ್ಹತಾ ದಿನಾಂಕಗಳಲ್ಲಿ 18 ವರ್ಷಕ್ಕಿಂತ ಕಡಿಮೆಯಾಗಿರಬಾರದು, ಆ ಮತಗಟ್ಟೆಯ ಸಾಮಾನ್ಯ ನಿವಾಸಿಯಾಗಿರಬೇಕು ಎಂದರು. ಅಧಿಕಾರಿಗಳು ನಿರ್ದಿಷ್ಟ ಅವಧಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಪರಿಶೀಲಿಸಬೇಕು, 18 ವರ್ಷ ತುಂಬಿದ ಯುವಕ-ಯುವತಿಯರು ಮತ್ತು ಹೊಸದಾಗಿ ಸ್ಥಳಾಂತರಗೊಂಡ ಅರ್ಹ ನಾಗರಿಕರಿಂದ ಫಾರ್ಮ್-6 ಅನ್ನು ಭರ್ತಿ ಮಾಡಿಸಿ ನೋಂದಾಯಿಸಿಕೊಳ್ಳಬೇಕು, ಮೃತಪಟ್ಟವರು, ಬೇರೆಡೆ ಸ್ಥಳಾಂತರಗೊಂಡವರು ಅಥವಾ ನಕಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್-7 ಅನ್ನು ಸ್ವೀಕರಿಸಬೇಕು, ಹೆಸರು, ವಿಳಾಸ, ವಯಸ್ಸು ಅಥವಾ ಭಾವಚಿತ್ರ ತಪ್ಪಾಗಿದ್ದರೆ ಅವುಗಳನ್ನು ಸರಿಪಡಿಸಲು ಹಾಗೂ ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಿಳಾಸ ಬದಲಾವಣೆಗೆ ಫಾರ್ಮ್-8 ಅನ್ನು ಸಂಗ್ರಹಿಸಬೇಕು ಎಂದು ಹೇಳಿದರು. ಗಣತಿ ಪ್ರಕ್ರಿಯೆಯಲ್ಲಿ ಅಗತ್ಯವಿರುವ ರಿಜಿಸ್ಟರ್‍ಗಳು ಮತ್ತು ಇತರ ಯಾವುದೇ ಅಗತ್ಯ ಲೇಖನ ಸಾಮಾಗ್ರಿಗಳನ್ನು ಹೊಂದಿರುವ ವಿಶೇಷ ತೀವ್ರ ಪರಿಷ್ಕರಣೆ ಎಂದು ಲೇಬಲ್ ಮಾಡಲಾದ ಕಿಟ್ ಬ್ಯಾಗ್, ಯಾವುದೇ ಸೂಚಿಸಿದ ದಿನಾಂಕದದಂದು ಅಸ್ತಿತ್ವದಲ್ಲಿರುವ ಪ್ರತಿಯೊಬ್ಬ ಮತದಾರರಿಗೆ ಅಸ್ತಿತ್ವದಲ್ಲಿರುವ ಮತದಾರರ ಪೂರ್ವ ಮುದ್ರಿತ ವಿವರಗಳೊಂದಿಗೆ ಎಣಿಕೆ ನಮೂನೆಗಳ ಜೆರಾಕ್ಸ್ ಪ್ರತಿಗಳು, ಎಣಿಕೆಯ ಸಮಯದಲ್ಲಿ ಯಾವುದೇ ಮನೆಗೆ ಬೀಗ ಹಾಕಲಾಗಿದೆ ಅಥವಾ ಮುಚ್ಚಲಾಗಿದೆ ಎಂದು ಬಿಎಲ್‍ಒ ಕಂಡುಕೊಂಡರೆ, ಅವನು/ಅವಳು ಎಣಿಕೆ ನಮೂನೆಗಳನ್ನು ಮನೆಯಲ್ಲಿ ಅಳವಡಿಸಬೇಕು ಮತ್ತು ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಲು ಕನಿಷ್ಟ ಮೂರು ಸಲ ಮನೆಗೆ ಭೇಟಿ ನೀಡಬೇಕು ಎಂದರು.
ಮೊದಲೇ ಭರ್ತಿ ಮಾಡಿದ ಎಣಿಕೆ ನಮೂನೆಯನ್ನು ಡೌನ್ಲೋಡ್ ಮಾಡಬಹುದು ಮತ್ತು ಭರ್ತಿ ಮಾಡಿದ ನಮೂನೆಗಳು ಮತ್ತು ದಾಖಲೆಗಳನ್ನು ಆನ್‍ಲೈನ್ ಮೋಡ್ ಮೂಲಕ ಅಪ್ಲೋಡ್ ಮಾಡಬಹುದು ಎಂದು ಬಿಎಲ್‍ಒ ಮತದಾರರಿಗೆ ತಿಳಿಸಬೇಕು ಎಂದು ಹೇಳಿದರು. ಬಿಎಲ್‍ಒಗಳು ಅಗತ್ಯ ದಾಖಲೆಗಳೊಂದಿಗೆ ಎಣಿಕೆ ನಮೂನೆಯ ಒಂದು ಪ್ರತಿಯನ್ನು ತನ್ನೊಂದಿಗೆ ಇಟ್ಟುಕೊಳ್ಳಬೇಕು ಮತ್ತು ಅರ್ಜಿದಾರರು ಇಟ್ಟುಕೊಳ್ಳಬೇಕಾದ ಎಣಿಕೆ ನಮೂನೆಯ ಇನ್ನೊಂದು ಪ್ರತಿಯ ಮೇಲೆ ನಮೂನೆ ಮತ್ತು ದಾಖಲೆಯ ಸ್ವೀಕೃತಿಯನ್ನು ನೀಡಬೇಕು ಎಂದು ವಿವರಿಸಿದರು. ಕಾರ್ಯಾಗಾರದಲ್ಲಿ ಚುನಾವಣಾ ಶಿರಸ್ತೆದಾರರು ಹಾಗೂ ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು ಮತ್ತು ಏಜೆಂಟರುಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.16 NEWS DESK : ಕೊಡಗು ಜಿ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ…

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026

*ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*

ಜೂನ್ 15, 2026

*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ : ಸ್ನೇಹಿತರ ಒಕ್ಕೂಟದ ಕಾರ್ಯವನ್ನು ಶ್ಲಾಘಿಸಿದ ಗಣ್ಯರು*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.