Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೋಂಸ್ಟೇ ಮಾಲೀಕರ ಸಭೆ : ಸರ್ಕಾರದ ಮಾರ್ಗಸೂಚಿ ಪಾಲಿಸಲು ಸಲಹೆ*
  • *ಕೊಡಗು : ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*
  • *ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ : ಮಳೆಗಾಲದಲ್ಲಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ನಕ್ಷತ್ರ ಆಮೆ ಮಾರಾಟ ಯತ್ನ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ*
  • *ಎಸಿ ಇಲ್ಲದ ಬಸ್ ಸೇವೆ : 13 ಸಾವಿರ ರೂ. ಪರಿಹಾರ ಪಾವತಿಸಲು ಕೆಎಸ್‌ಆರ್‌ಟಿಸಿಗೆ ಆದೇಶ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಎನ್.ಬಾಲಚಂದ್ರನ್ ನಾಯರ್ ಒತ್ತಾಯ*
  • *ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*
  • *ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*

ಜೂನ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.17 NEWS DESK : ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಕಳೆದ ಹಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಎಸ್.ಗುರುಸ್ವಾಮಿ ಅವರು ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿ, ವರ್ಗಾವಣೆಗೊಂಡಿರುವ ಹಿನ್ನೆಲೆ ಕೈಗಾರಿಕೆ, ಕೈಮಗ್ಗ ಮತ್ತು ಜವಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸೇರಿದಂತೆ ವಿವಿಧ ಇಲಾಖೆ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಶಾಲೂ, ಫಲ ತಾಂಬೂಲ, ಪೇಟ ಹಾಗೂ ಉಡುಗೊರೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಸಿ.ವಿ.ನಾಗೇಶ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಮಟ್ಟದಲ್ಲಿ ಕೈಮಗ್ಗ ಮತ್ತು ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ, ಜವಳಿ ಕೈಗಾರಿಕೆಗೆ ಸಹಾಯಧನ ಸೌಲಭ್ಯ, ಸಾಲ ಆಧಾರಿತ ಬಂಡವಾಳ ಸಹಾಯಧನ, ಬಡ್ಡಿ ಸಹಾಯಧನ, ವಿಮಾ ಯೋಜನೆ, ವಿದ್ಯುತ್ ಮಗ್ಗಕ್ಕೆ ಸಹಾಯಧನ ಹೀಗೆ ಹಲವು ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಶ್ರಮಿಸಿದ್ದಾರೆ ಎಂದು ಅವರು ಸ್ಮರಿಸಿದರು. ಎಲ್ಲರೊಂದಿಗೆ ಆತ್ಮೀಯವಾಗಿ ಸಹೋದ್ಯೋಗಿಗಳ ರೀತಿ ಕೆಲಸ ನಿರ್ವಹಿಸುತ್ತಿದ್ದರು. ಸರ್ಕಾರದ ಸಾಲ ಸೌಲಭ್ಯ ಕೊಡಿಸುವಲ್ಲಿ ಇನ್ನಷ್ಟು ಕೆಲಸ ಮಾಡುವಂತಾಗಲಿ ಎಂದು ಇದೇ ಸಂದರ್ಭದಲ್ಲಿ ನಾಗೇಶ್ ಅವರು ಆಶಿಸಿದರು. ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹನುಮಂತರಾಯ ಅವರು ಮಾತನಾಡಿ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸ್ನೇಹಮಯಿಯಾಗಿ ಕೆಲಸ ನಿರ್ವಹಿಸಿ ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿ ವರ್ಗಾವಣೆಯಾಗಿರುವುದು ಸಂತಸ ತಂದಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಸ್.ಗುರುಸ್ವಾಮಿ ಅವರು ಕಳೆದ 17 ವರ್ಷಗಳ ಸೇವಾವಧಿಯಲ್ಲಿ ಮೂರುವರೆ ವರ್ಷ ಹೊರತುಪಡಿಸಿ ಹದಿಮೂರುವರೆ ವರ್ಷ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿದ್ದಕ್ಕೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕೈಗಾರಿಕೆ ಮತ್ತು ಜವಳಿ ಇಲಾಖೆಯಲ್ಲಿ ಹಲವು ಜನರಿಗೆ ಹೊಲಿಗೆ ತರಬೇತಿ, ಹಲವರಿಗೆ ಸ್ವ ಉದ್ಯೋಗ ಕಲ್ಪಿಸಲು ಪ್ರಯತ್ನ, ಹಾಗೆಯೇ ಕೈಮಗ್ಗ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಮೇಳ ಹೀಗೆ ಹಲವು ಕಾರ್ಯಗಳನ್ನು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಿರ್ವಹಿಸಲಾಗಿದೆ ಎಂದು ಸ್ಮರಿಸಿದರು. ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ, ಸಹಾಯಕ ನಿರ್ದೇಶಕರಾದ ಬಿ.ಎಸ್.ಮುತ್ತಪ್ಪ, ವರದರಾಜು, ಜಿ.ಪಂ.ಲೆಕ್ಕ ವಿಭಾಗದ ಬಲರಾಂ, ಕೈಗಾರಿಕೆ ಇಲಾಖೆಯ ಪ್ರಶಾಂತ್, ಮಧು, ಕೈಗಾರಿಕೆ ಇಲಾಖೆಯ ಸಿಬ್ಬಂದಿಗಳು ಇತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೋಂಸ್ಟೇ ಮಾಲೀಕರ ಸಭೆ : ಸರ್ಕಾರದ ಮಾರ್ಗಸೂಚಿ ಪಾಲಿಸಲು ಸಲಹೆ*

ಜೂನ್ 17, 2026

*ಕೊಡಗು : ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 2026

*ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಜೂನ್ 17, 2026

*ಕೊಡಗು : ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.17 NEWS DESK : ಇದೇ ಜೂನ್, 21 ರಂದು ನಡೆಯುವ ನೀಟ್ ಯುಜಿ-2026 ಮರುಪರೀಕ್ಷೆ ಸಿದ್ಧತೆ ಬಗ್ಗೆ…

*ಸೋಮವಾರಪೇಟೆ : ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಜೂನ್ 17, 2026

*ಉಪ ನಿರ್ದೇಶಕರಾಗಿ ಬಡ್ತಿ : ವಿವಿಧ ಇಲಾಖೆಯಿಂದ ಜಿ.ಎಸ್.ಗುರುಸ್ವಾಮಿಗೆ ಬೀಳ್ಕೊಡುಗೆ*

ಜೂನ್ 17, 2026

*ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ : ಮಳೆಗಾಲದಲ್ಲಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 2026

*ನಕ್ಷತ್ರ ಆಮೆ ಮಾರಾಟ ಯತ್ನ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ*

ಜೂನ್ 17, 2026

*ಎಸಿ ಇಲ್ಲದ ಬಸ್ ಸೇವೆ : 13 ಸಾವಿರ ರೂ. ಪರಿಹಾರ ಪಾವತಿಸಲು ಕೆಎಸ್‌ಆರ್‌ಟಿಸಿಗೆ ಆದೇಶ*

ಜೂನ್ 17, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಎನ್.ಬಾಲಚಂದ್ರನ್ ನಾಯರ್ ಒತ್ತಾಯ*

ಜೂನ್ 17, 2026

*ಜೂ.20 ರಂದು ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಮಳೆಗಾಗಿ ಪರ್ಜನ್ಯ ಜಪ*

ಜೂನ್ 17, 2026

*ಎಸ್‌ಐಆರ್ ನ್ನು ವಿರೋಧಿಸುವುದು ಹಾಸ್ಯಾಸ್ಪದ : ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ಅಸಮಾಧಾನ*

ಜೂನ್ 17, 2026

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.