
ಮಡಿಕೇರಿ ಜೂ.18 NEWS DESK : ಕರ್ನಾಟಕ ವಿಧಾನಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿ ತಮ್ಮ ಮತವನ್ನು ಚಲಾಯಿಸಿದರು. ನಂತರ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾದದು ಎಂದು ಶಾಸಕರು ಹೇಳಿದರು.









