
ಮಡಿಕೇರಿ ಜೂ.19 NEWS DESK : ಪೊನ್ನಂಪೇಟೆ ತಾಲೂಕಿನ ಮಾಪಿಳೆತೋಡು ಭಾಗಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಮಾಪಿಳೆತೋಡುವಿನಿಂದ ಹುದಿಕೇರಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ಸುಮಾರು 2.80 ಕೋಟಿ ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭ ಪ್ರಮುಖರಾದ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಟಾಟು ಮೊಣ್ಣಪ್ಪ, ಚಂಗುಲಂಡ ಸೂರಜ್, ಹಿರಿಯರು ಮುಕಳೇರ ಕುಶಾಲಪ್ಪ, ತಿತೀರ ಮಂದಣ್ಣ, ಸಾದಲಿ, ಮಲ್ಲಂಡ ಧ್ಯಾನ್ ದೇವಯ್ಯ, ಕೊಣ್ಣಿಯಂಡ ಸೋಮಣ್ಣ, ಮಚ್ಚಾಮಾಡ ಮನು, ಅಣ್ಣಳ್ಳಮಾಡ ಹರೀಶ್, ರವಿ, ಗಿರೀಶ್, ಅಜ್ಜಿಕುಟ್ಟಿರ ಪೊನ್ನಪ್ಪ, ಅಜ್ಜಿಕುಟ್ಟಿರ ಗಿರೀಶ್, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ತಾಣಚ್ಚಿರ ನಿಖಿಲ್ ಸೋಮಣ್ಣ, ಮದನ್ ಮಂದಣ್ಣ, ರೀಕ್ಷಿತ್ ಕಾರ್ಯಪ್ಪ, ಬಿಪಿನ್, ವಚನ್ ನಾಚಪ್ಪ ಇತರರು ಉಪಸ್ಥಿತರಿದ್ದರು.









