
ಮಡಿಕೇರಿ ಜೂ.23 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ವಿಭಾಗದಿಂದ ಪಾಲಿಬೆಟ್ಟ ಟಾಟಾ ಕಂಪನಿ ಲಿಮಿಟೆಡ್ ಪಾಲಿಬೆಟ್ಟ ಕ್ಯಾಂಪೇನ್ ನಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ 100 ದಿನಗಳ ಕ್ಷಯ ಮುಕ್ತ ಅಭಿಯಾನ ಸಂಬಂಧ ಶಿಬಿರ ನಡೆಯಿತು. ಕ್ಷಯ ಗುರುತಿಸುವ ಸಂಬಂಧ ಕಫ ಸಂಗ್ರಹಣೆ ಹಾಗೂ ಹ್ಯಾಂಡ್ ಹೆಲ್ಡ್ ಎಕ್ಸ್-ರೇ ಅಂದರೆ ಕ್ಷಯ ರೋಗಾಣುಗಳು ಸೋಂಕಿತ ವ್ಯಕ್ತಿಯು ಕೆಮ್ಮಿದಾಗ ಹೊರಬಂದ ರೋಗಾಣುಗಳು ಗಾಳಿಯ ಮುಖಾಂತರ ಆರೋಗ್ಯವಂತ ವ್ಯಕ್ತಿಯ ಮೂಗು ಮತ್ತು ಬಾಯಿಯ ಮುಖಾಂತರ ಶ್ವಾಸಕೋಶ ಕ್ಷಯ ಪ್ರವೇಶ ಮಾಡಿ ಸೋಂಕುಂಟು ಮಾಡುತ್ತದೆ ಎಂದರು. ಸೋಂಕನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸುವ ಒಂದು ಸುಲಭ ವಿಧಾನ ಹಾಗೂ ಸೋಂಕುಳ್ಳ ವ್ಯಕ್ತಿ ಆರೋಗ್ಯ ಸಂಸ್ಥೆಯಲ್ಲಿ ತಲುಪದೇ ವ್ಯಕ್ತಿಯ ವಾಸಸ್ಥಳ ಅಥವಾ ಅನುಕೂಲವಾಗುವ ನಿಗದಿತ ಜಾಗದಲ್ಲಿ ಎಕ್ಸರೇ ಮಾಡಿ ಕ್ಷಯ ಗುರುತಿಸಬಹುದಾಗಿದೆ ಎಂದು ಹೇಳಿದರು. ಆಡಳಿತ ವೈದ್ಯಾಧಿಕಾರಿ ಡಾ.ಶಿವಪ್ಪ ಹಾಗೂ ಟಾಟಾ ಕಂಪನಿಯ ಆರ್ಐಎಚ್ಪಿ ವೈದ್ಯಾಧಿಕಾರಿಗಳಾದ ಡಾ.ಚಂದ್ರು ಅವರು ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಸಂಬಂಧ ಹಾಗೂ ಕ್ಷಯ ರೋಗ ಕಾರ್ಯಕ್ರಮ 100 ದಿನಗಳ ಅಭಿಯಾನ ಸಂಬಂಧ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಟಾಟಾ ಕಂಪನಿ ಲಿಮಿಟೆಡ್ ವರ್ಷಿಣಿ ಹಾಗೂ ಎನ್ಟಿಇಪಿ ಸಿಬ್ಬಂದಿಗಳಾದ ನವೀನ್ ಶ್ರೀಧರ್ ಲೋಕೇಶ್ ಹಾಗೂ ಜ್ಯೋತಿ, ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಆಶಾ ಹಾಜರಿದ್ದರು. ಶಿಬಿರದಲ್ಲಿ ಹ್ಯಾಂಡ್ ಹೆಲ್ಡ್ ಎಕ್ಸ್-ರೇ ಸಿಕ್ಕಲ್ ಸೆಲ್ ಪರೀಕ್ಷೆ ಮಾಡಲಾಯಿತು.









