Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ರಿಯೇಟಿವ್‍ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*
  • *ಬಿಳುಗುಂದ : ಪಿ.ಎಸ್.ಭವ್ಯಗೆ ಸನ್ಮಾನ*
  • *ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಪುರಸ್ಕಾರ* 
  • *ಮತಾಂತರ ಪ್ರಕರಣ : ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ್ನು ಗುರಿ ಮಾಡದಂತೆ ಮನವಿ*
  • *ಜಾಗ ಮಾರಾಟ ಮಾಡಲು ಅಥವಾ ಅರಣ್ಯ ಇಲಾಖೆಗೆ ಒಪ್ಪಿಸಲು ಸಿದ್ಧ : ಆಧ್ಯಾತ್ಮ ಗುರು ಶ್ರೀ ಎಂ ಸ್ಪಷ್ಟನೆ*
  • *ನೀಟ್ ಪರೀಕ್ಷೆ ಹಗರಣ : ಕೇಂದ್ರ ಸರಕಾರದ ಬೇಜವಾಬ್ದಾರಿತನ ಕಾರಣ : ಕೊಡಗು ಕಾಂಗ್ರೆಸ್ ಆರೋಪ*
  • *ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಜಾಗ ಹಸ್ತಾಂತರಿಸಲು ಕೊಡವಾಮೆರ ಕೊಂಡಾಟ ಒತ್ತಾಯ*
  • *ಮರಗಳ ಹನನ ಮತ್ತು ಪರಿಸರಕ್ಕೆ ಹಾನಿ : ಅರಣ್ಯ, ಗಣಿ ಇಲಾಖೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*
  • *ಕೊಡಗು ಜಿಲ್ಲಾ ಡೆಕೋರೇಶನ್ ಅಸೋಸಿಯೇಷನ್ ಅಸ್ತಿತ್ವಕ್ಕೆ*
  • *ಸಿಎನ್‌ಸಿ ರಾಷ್ಟ್ರೀಯ ವಿಚಾರ ಸಂಕಿರಣ : ಕೊಡವರಿಗೆ ಸಾಂವಿಧಾನಿಕ ರಕ್ಷಣೆಯನ್ನು ನೀಡುವ ಅಗತ್ಯವಿದೆ : ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಪ್ರತಿಪಾದನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗಳ ಹನನ ಮತ್ತು ಪರಿಸರಕ್ಕೆ ಹಾನಿ : ಅರಣ್ಯ, ಗಣಿ ಇಲಾಖೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗಳ ಹನನ ಮತ್ತು ಪರಿಸರಕ್ಕೆ ಹಾನಿ : ಅರಣ್ಯ, ಗಣಿ ಇಲಾಖೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*

ಜೂನ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK : ಮಲ್ಮ ಬೆಟ್ಟ ಸಮೀಪದ ಜಾಗದಲ್ಲಿ ನಡೆದಿರುವ ಮರಗಳ ಹನನ ಮತ್ತು ಪರಿಸರ ಹಾನಿಯ ವಿರುದ್ಧ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಬೃಹತ್ ಹೋರಾಟವನ್ನು ರೂಪಿಸುವುದಾಗಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ನ ಅಧ್ಯಕ್ಷ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಅವರು ಶ್ರೀ ಇಗ್ಗುತ್ತಪ್ಪ ದೇವರ ನೆಲೆ ಕೊಡವರ ಹಾಗೂ ಕೊಡವ ಮೂಲ ನಿವಾಸಿಗಳ ಆಸ್ಮಿತೆ, ನಂಬಿಕೆ ಮತ್ತು ಸಂಸ್ಕøತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಪವಿತ್ರ ಸ್ಥಳವಾಗಿದೆ. ದೇವಾಲಯ ವ್ಯಾಪ್ತಿಯ ಮಲ್ಮ ಬೆಟ್ಟ ಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಕೊಡವ ಪರಂಪರೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಈಗಾಗಲೇ ಸಾಕಷ್ಟು ಮರಗಳು, ಬೆತ್ತ ಮತ್ತಿತರ ಸಸ್ಯ ರಾಶಿಗಳನ್ನು ಕಡಿಯಲಾಗಿದ್ದು, ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಸಾಮಾನ್ಯ ಜನರು ಸ್ವಂತ ಬಳಕೆಗಾಗಿ ಸಣ್ಣ ಮರಗಳನ್ನು ಕಡಿದರೂ ತಕ್ಷಣ ಪ್ರಕರಣ ದಾಖಲಿಸುವ ಅರಣ್ಯ ಅಧಿಕಾರಿಗಳು ಈ ಪ್ರಕರಣದಲ್ಲಿ ಮೌನ ವಹಿಸಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ಅರಣ್ಯ ಪ್ರದೇಶದಲ್ಲಿ ಅಥವಾ ಸಂರಕ್ಷಿತ ಪ್ರದೇಶದಲ್ಲಿ ಮರಗಳು, ಬೆತ್ತ ಮತ್ತಿತರ ಅರಣ್ಯ ಸಂಪತ್ತನ್ನು ಅನುಮತಿಯಿಲ್ಲದೆ ಕಡಿಯುವುದು, ನಾಶಪಡಿಸುವುದು ಅಥವಾ ಸಾಗಾಟ ಮಾಡುವುದು ಕಾನೂನುಬಾಹಿರವಾಗಿದೆ. ಇದೇ ಪ್ರದೇಶದಲ್ಲಿ ಬಂಡೆಗಳನ್ನು ಒಡೆದು ಭೂಮಿಯ ಸ್ವರೂಪವನ್ನು ಬದಲಾಯಿಸಿರುವುದು ಕೂಡ ಕಂಡು ಬಂದಿದ್ದು ಇದಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಸೂಕ್ತ ಪರವಾನಗಿ ಪಡೆಯಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದ್ದರೆ, ಕಣ್ಣುಮುಚ್ಚಿ ಕುಳಿತಿರುವುದರ ಹಿಂದಿನ ಕಾರಣವೇನು ಮತ್ತು ಪರವಾನಗಿ ನೀಡಿದ್ದರೆ, ಯಾವ ಕಾನೂನಿನಡಿಯಲ್ಲಿ ನೀಡಿದ್ದೀರ ಎಂದು ಇಲಾಖೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಅಕ್ರಮ ಕಾಮಗಾರಿಗಳ ವಿರುದ್ಧ ಸ್ಥಳೀಯ ಜನರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ತಮ್ಮ ಆತಂಕ ಮತ್ತು ಆಕ್ಷೇಪಣೆಗಳನ್ನು ಹಲವು ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸ್ಥಳೀಯರ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಸೂಕ್ಷ್ಮ ಪರಿಸರ ಪಶ್ಚಿಮಘಟ್ಟ ಪ್ರದೇಶದಲ್ಲಿ ಮರಗಳನ್ನು ಕಡಿಯಲು, ಬೆಟ್ಟಗುಡ್ಡಗಳನ್ನು ಕೊರೆಯಲು ಅಥವಾ ಇನ್ಯಾವುದೇ ವಾಣಿಜ್ಯ ಉದ್ದೇಶಗಳಿಗೆ ಬಳಸಲು ಕಾನೂನು ಪ್ರಕಾರ ಅನುಮತಿ ಇದೆಯೇ ಎಂದು ಮಾಧ್ಯಮದ ಮೂಲಕ ಜಿಲ್ಲಾಧಿಕಾರಿಗಳಿಂದ ಸ್ಪಷ್ಟ ಸಂದೇಶವನ್ನು ಬಯಸಿದ್ದೆವು. ಆದರೆ ಇಲ್ಲಿಯವರೆಗೆ ಜಿಲ್ಲಾಧಿಕಾರಿಗಳು ಈ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿಲ್ಲ ಎಂದು ರಾಜೀವ್ ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಕೊಡವರ ಭಾವನೆಗೆ ವಿರುದ್ಧವಾಗಿ ಮಲ್ಮ ಬೆಟ್ಟ ಸಮೀಪ ನಡೆದಿರುವ ಪರಿಸರ ಹಾನಿಯ ಕುರಿತು ಜಿಲ್ಲೆಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಕೂಡ ಗಮನ ಹರಿಸಿ ಕ್ರಮಕ್ಕೆ ಮುಂದಾಗಬೇಕು. ಸರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ನ ಉಪಾಧ್ಯಕ್ಷ ಅಚ್ಚಾಂಡಿರ ಕುಶಾಲಪ್ಪ, ಕಾರ್ಯದರ್ಶಿ ಅಣ್ಣಿರ ಹರೀಶ್ ಮಾದಪ್ಪ, ಖಜಾಂಚಿ ಜಮ್ಮಡ ಗಣೇಶ್ ಅಯ್ಯಣ್ಣ ಹಾಗೂ ಪ್ರಮುಖರಾದ ಅಪ್ಪಂಡೇರಂಡ ಯಶವಂತ್ ಉಪಸ್ಥಿತರಿದ್ದರು.


Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ್ರಿಯೇಟಿವ್‍ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*

ಜೂನ್ 26, 2026

*ಬಿಳುಗುಂದ : ಪಿ.ಎಸ್.ಭವ್ಯಗೆ ಸನ್ಮಾನ*

ಜೂನ್ 26, 2026

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಪುರಸ್ಕಾರ* 

ಜೂನ್ 26, 2026

*ಬಿಳುಗುಂದ : ಪಿ.ಎಸ್.ಭವ್ಯಗೆ ಸನ್ಮಾನ*

ಜೂನ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.26 NEWS DESK : ಬಿಳುಗುಂದ ಸರಕಾರಿ ಪ್ರೌಢಶಾಲೆಯಲ್ಲಿ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 2025-26ನೇ ಸಾಲಿನ…

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಪುರಸ್ಕಾರ* 

ಜೂನ್ 26, 2026

*ಮತಾಂತರ ಪ್ರಕರಣ : ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ್ನು ಗುರಿ ಮಾಡದಂತೆ ಮನವಿ*

ಜೂನ್ 26, 2026

*ಜಾಗ ಮಾರಾಟ ಮಾಡಲು ಅಥವಾ ಅರಣ್ಯ ಇಲಾಖೆಗೆ ಒಪ್ಪಿಸಲು ಸಿದ್ಧ : ಆಧ್ಯಾತ್ಮ ಗುರು ಶ್ರೀ ಎಂ ಸ್ಪಷ್ಟನೆ*

ಜೂನ್ 26, 2026

*ನೀಟ್ ಪರೀಕ್ಷೆ ಹಗರಣ : ಕೇಂದ್ರ ಸರಕಾರದ ಬೇಜವಾಬ್ದಾರಿತನ ಕಾರಣ : ಕೊಡಗು ಕಾಂಗ್ರೆಸ್ ಆರೋಪ*

ಜೂನ್ 26, 2026

*ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಜಾಗ ಹಸ್ತಾಂತರಿಸಲು ಕೊಡವಾಮೆರ ಕೊಂಡಾಟ ಒತ್ತಾಯ*

ಜೂನ್ 26, 2026

*ಮರಗಳ ಹನನ ಮತ್ತು ಪರಿಸರಕ್ಕೆ ಹಾನಿ : ಅರಣ್ಯ, ಗಣಿ ಇಲಾಖೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*

ಜೂನ್ 26, 2026

*ಕೊಡಗು ಜಿಲ್ಲಾ ಡೆಕೋರೇಶನ್ ಅಸೋಸಿಯೇಷನ್ ಅಸ್ತಿತ್ವಕ್ಕೆ*

ಜೂನ್ 26, 2026

*ಸಿಎನ್‌ಸಿ ರಾಷ್ಟ್ರೀಯ ವಿಚಾರ ಸಂಕಿರಣ : ಕೊಡವರಿಗೆ ಸಾಂವಿಧಾನಿಕ ರಕ್ಷಣೆಯನ್ನು ನೀಡುವ ಅಗತ್ಯವಿದೆ : ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಪ್ರತಿಪಾದನೆ*

ಜೂನ್ 26, 2026

*ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಕೊಡಗು ಜಿಲ್ಲಾ ಪ್ರವಾಸ ಮುಂದೂಡಿಕೆ*

ಜೂನ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.