Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗ್ಯಾರಂಟಿ ಯೋಜನೆಗಳ ಮಡಿಕೇರಿ ತಾಲ್ಲೂಕು ಸಮಿತಿ ಸಭೆ : ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ*
  • *ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬಕ್ ವಿತರಣೆ*
  • *ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ  ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ*
  • *ಜು.3 ರಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಕೆ.ಎನ್.ಪಣೀಂದ್ರ ಕೊಡಗಿಗೆ ಭೇಟಿ*
  • *ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ : ಮನೆ-ಮನೆ ಪರಿಶೀಲನೆ ಆರಂಭ, ದಾಖಲೆ ಕಡ್ಡಾಯ*
  • *ವಿಬಿಜಿ ರಾಮ್ ಜಿ ಯೋಜನೆ : ವಿರಾಜಪೇಟೆಯಲ್ಲಿ ಅನುಷ್ಠಾನಕ್ಕೆ ಸಿದ್ಧತೆ*
  • *ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*
  • *ಕಾನ್‍ಬೈಲ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ : ಸಾಬು ವರ್ಗಿಸ್ ಕರೆ*
  • *ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬಕ್ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬಕ್ ವಿತರಣೆ*

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.1 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಸಂಭ್ರಮದಿಂದ ನಡೆಯಿತು. ಕುಶಾಲನಗರ ಎಸ್‌‌.ಎಲ್.ವಿ.ಬುಕ್ ಹೌಸ್ ಮಾಲೀಕರಾದ ದಿವಾಕರ ದಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಪತ್ರಿಕೋದ್ಯಮದ ಗೌರವ, ಘನತೆ, ಜವಬ್ದಾರಿ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದುವ ಅಗತ್ಯವಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳು ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿದ ಉದಾಹರಣೆಗಳಿದೆ. ಸಾಮಾಜಿಕ ಬದಲಾವಣೆಗೆ ಪತ್ರಿಕೋದ್ಯಮ ಆಯ್ಕೆ ಕೂಡ ವಿದ್ಯಾರ್ಥಿಗಳಿಗಿದೆ. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಭವಿಷ್ಯದ ಗುರಿ ಈಡೇರಿಕೆಗೆ ಶ್ರಮವಹಿಸಿದಲ್ಲಿ ಮುಂದೆ ಸಾಧಕರಾಗಬಹುದು ಎಂದು ಕಿವಿ ಮಾತು ಹೇಳಿದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದಮೋಹನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಧೇಯತೆ, ವಿನಯವಂತಿಕೆ ಮೈಗೂಡಿಸಿಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡು ದಿನನಿತ್ಯದ ಆಗುಹೋಗುಗಳ ಬಗ್ಗೆ ಅರಿವು ಹಾಗೂ ಪ್ರಪಂಚ ಜ್ಞಾನ ವೃದ್ದಿಸಿಕೊಳ್ಳಲು ಕರೆ ನೀಡಿದರು. ಹಿರಿಯ ಪತ್ರಿಕಾ ವಿತರಕ ವಿ.ಪಿ.ಪ್ರಕಾಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಳೆಗಾಲಕ್ಕೆ ಅನುಕೂಲವಾಗುವಂತೆ ರೈನ್ ಕೋಟ್ ವಿತರಿಸಲಾಯಿತು. ಎಸ್.ಎಲ್.ವಿ.ಬುಕ್ ಹೌಸ್ ವತಿಯಿಂದ ಶಾಲೆಯ 103 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಪೆನ್ ಕೊಡುಗೆ ನೀಡಲಾಯಿತು.
ಪತ್ರಿಕಾ ದಿನದ ಅಂಗವಾಗಿ ಒಂದು ವರ್ಷದ ಅವಧಿಗೆ ಶಾಲೆಗೆ ವಿವಿಧ ದಿನಪತ್ರಿಕೆ ಒದಗಿಸುವ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಕೆ.ಬಿ.ಶಂಶುದ್ಧೀನ್‌ ಮಾತನಾಡಿ, ಪತ್ರಿಕೆಗಳ ಓದಿನಿಂದ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ರಾಜಕೀಯ, ಸಿನಿಮಾ, ಸಾಧನೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅಪಾರವಾದ ಜ್ಞಾನ ಬೆಳೆಸಿಕೊಳ್ಳಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಆಶಾ, ದಾನಿಗಳಾದ ರಾಮದಾಸ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಪೆರುಮಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್, ತಾಲೂಕು ಸಂಘದ ಖಜಾಂಚಿ ವಿನೋದ್, ನಿರ್ದೇಶಕ ಜಯಪ್ರಕಾಶ್, ಸದಸ್ಯರಾದ ಭೋಜಣ್ಣ ರೆಡ್ಡಿ, ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಇದ್ದರು.
ಶಾಲಾ ಶಿಕ್ಷಕಿ ತುಳಸಿ ಸ್ವಾಗತಿಸಿದರು. ಸದಸ್ಯರಾದ‌ ಭೋಜನ ರೆಡ್ಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷೆ ವನಿಯಾ ಚಂದ್ರಮೋಹನ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗ್ಯಾರಂಟಿ ಯೋಜನೆಗಳ ಮಡಿಕೇರಿ ತಾಲ್ಲೂಕು ಸಮಿತಿ ಸಭೆ : ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ*

ಜುಲೈ 1, 2026

*ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ  ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ*

ಜುಲೈ 1, 2026

*ಜು.3 ರಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಕೆ.ಎನ್.ಪಣೀಂದ್ರ ಕೊಡಗಿಗೆ ಭೇಟಿ*

ಜುಲೈ 1, 2026

*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬಕ್ ವಿತರಣೆ*

ಜುಲೈ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಜು.1 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ…

*ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ  ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ*

ಜುಲೈ 1, 2026

*ಜು.3 ರಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಕೆ.ಎನ್.ಪಣೀಂದ್ರ ಕೊಡಗಿಗೆ ಭೇಟಿ*

ಜುಲೈ 1, 2026

*ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ : ಮನೆ-ಮನೆ ಪರಿಶೀಲನೆ ಆರಂಭ, ದಾಖಲೆ ಕಡ್ಡಾಯ*

ಜುಲೈ 1, 2026

*ವಿಬಿಜಿ ರಾಮ್ ಜಿ ಯೋಜನೆ : ವಿರಾಜಪೇಟೆಯಲ್ಲಿ ಅನುಷ್ಠಾನಕ್ಕೆ ಸಿದ್ಧತೆ*

ಜುಲೈ 1, 2026

*ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*

ಜುಲೈ 1, 2026

*ಕಾನ್‍ಬೈಲ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಜುಲೈ 1, 2026

*ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ : ಸಾಬು ವರ್ಗಿಸ್ ಕರೆ*

ಜುಲೈ 1, 2026

*ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*

ಜುಲೈ 1, 2026

*ಕೊಡವ ಭಾಷಿಕ ಜನಾಂಗದವರನ್ನು ಕಡೆಗಣಿಸಿದರೆ ತೀವ್ರ ಹೋರಾಟ : ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆಯಲ್ಲಿ ನಿರ್ಧಾರ*

ಜುಲೈ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.