ಮಡಿಕೇರಿ NEWS DESK ಜು.7 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜು.8 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರೀ ಗಾಳಿ ಮಳೆಯಿಂದಾಗಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನದಿ ನೀರು ರಸ್ತೆಯನ್ನು ಆವರಿಸಿದೆ. ಜಿಲ್ಲಾ ಕೇಂದ್ರ್ರ ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹಳೇ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳುವ ಇಳಿಜಾರು ರಸ್ತೆಯ ಒಂದು ಪಾರ್ಶ್ವದಲ್ಲಿನ ಕಾಲ್ನಡಿಗೆಯ ಹಾದಿ ಕುಸಿದು ಹೋಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿನ ವಾಹನ ಸಂಚಾರವನ್ನು ಸೀಮಿತಗೊಳಿಸಲಾಗಿದ್ದು, ಬಸ್ಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ.
ಈ ಭೂ ಕುಸಿತದ ಹಿನ್ನೆಲೆ ಮುಖ್ಯ ರಸ್ತೆ ಅಪಾಯಕ್ಕೆ ಸಿಲುಕಿದ್ದು, ರಸ್ತೆಯಲ್ಲಿ ಏಕಮುಖ ಸಂಚಾರ ಜಾರಿ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ಗಳು ಕೈಗಾರಿಕಾ ಬಡಾವಣೆ ಮೂಲಕ, ರಾಜಾಸೀಟ್ ಮಾರ್ಗವಾಗಿ ಹಾದು ಹೋಗಲು ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಕುಸಿದ ರಸ್ತೆ- ದಕ್ಷಿಣ ಕೊಡಗಿನ ಹಾತೂರು ಗ್ರಾಮ ಪಂಚಾಯ್ತಿಯ ಕೊಳತ್ತೊಡು ಬೈಗೋಡು ಗ್ರಾಮದ ಮುಖ್ಯ ರಸ್ತೆಯ ಒಂದು ಪಾರ್ಶ್ವ ಭಾರೀ ಮಳೆಯಿಂದ ಸಂಪೂರ್ಣ ಕುಸಿದಿದ್ದು, ಗ್ರಾಮೀಣರ ಸಂಚಾರಕ್ಕೆ ತೊಡಕುಂಟಾಗಿದೆ.
ಮನೆಯ ಮೇಲಕ್ಕೆ ಉರುಳಿದ ಮರ- ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ ನಾಲ್ಕೇರಿ ವೃತ್ತದ ಬೊಮ್ಮಾಡುವಿನಲ್ಲಿ ದಾಸಿ ಎಂಬವರ ವಾಸದ ಮನೆಯ ಮೇಲೆ ನಿನ್ನೆ ಸುರಿದ ಗಾಳಿ ಮಳೆಗೆ ಮರ ಬಿದ್ದು, ಮನೆಯ ಹೆಂಚುಗಳು ಒಡೆದು ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಮೈದುಂಬಿಕೊಳ್ಳುತ್ತಿರುವ ಜಲ ಮೂಲಗಳು- ಮುಂಗಾರಿನ ಆರಂಭವಾದರು ಜೂನ್ ತಿಂಗಳಿನಲ್ಲಿ ಕಾಣಿಸಿಕೊಳ್ಳದ ಮಳೆ, ಜುಲೈನಲ್ಲಿ ತನ್ನ ಪ್ರತಾಪ ತೋರಲಾರಂಭಿಸಿದೆ. ಕಳೆದ ಕೆಲ ದಿನಗಳಿಂದ ಕೊಡಗಿನ ಬಹುತೇಕ ಭಾಗಗಳಲ್ಲಿ ಸುರಿಯುತ್ತಿರುವ ಮಳೆೆಯಿಂದ ಜೀವನದಿ ಕಾವೇರಿ ಸೇರಿದಂತೆ, ಕಿರು ತೊರೆಗಳು ಮೈದುಂಬಿಕೊಳ್ಳಲಾರAಭಿಸಿದೆ.

ಕಾವೇರಿ ಕ್ಷೇತ್ರದಲ್ಲಿ 6 ಇಂಚಿಗೂ ಹಚ್ಚಿನ ಮಳೆ- ಕಾವೇರಿಯ ಕ್ಷೇತ್ರ ಭಾಗಮಂಡಲ ಮತ್ತು ತಲಕಾವೇರಿ ವಿಭಾಗದಲ್ಲಿ ಕಳೆದೊಂದು ಅವಧಿಯಲ್ಲಿ ಭಾರೀ ಮಳೆಯಾಗಿದ್ದು, ಸರಿ ಸುಮಾರು 165 ಮಿ.ಮೀ. ಮಳೆÉ ದಾಖಲಾಗಿದೆ. ಇದರಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿಯ ನೀರಿನ ಮಟ್ಟ ಏರಿಕೆಯನ್ನು ಕಂಡಿದೆ.
ನದಿ ಪಾತ್ರದ ನಾಪೋಕ್ಲು, ಮೂರ್ನಾಡು. ಸಿದ್ದಾಪುರ ವಿಭಾಗಗಳಲ್ಲು ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಉತ್ತರ ಕೊಡಗಿನ ಶಾಂತಳ್ಳಿ, ಕೊಡ್ಲಿಪೇಟೆ ವಿಭಾಗಗಳಲ್ಲು ಉತ್ತಮ ಮಳೆÉಯಾಗುತ್ತಿದೆ.
ಜಲಪಾತಗಳಿಗೆ ಜೀವಕಳೆ -ಉತ್ತಮ ಮಳೆÉಯ ಹಿನ್ನೆಲೆಯಲ್ಲಿ ಮಡಿಕೇರಿ ಅಂಚಿನ ಅಬ್ಬಿ ಜಲಪಾತ, ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತ ಸೇÉರಿದಂತೆ ವಿವಿಧ ಜಲಪಾತಗಳು ಮೈದುಂಬಿ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದೆ. ಇಂತಹ ಜಲಪಾತಗಳು ಪ್ರವಾಸಿ ಆಕರ್ಷಣೆಯ ತಾಣಗಳಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ದಿನದ ಹಿಂದಷ್ಟೆ ಮಲ್ಲಳ್ಳಿಯಲ್ಲಿ ಪ್ರವಾಸಿಗರಿಬ್ಬರು ಮಲ್ಲಳ್ಳಿ ಜಲಪಾತದ ಪ್ರದೇಶದಲ್ಲಿ ಜಲ ದಿಗ್ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಈಗಾಗÀಲೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.







