
ಮಡಿಕೇರಿ NEWS DESK ಜು. 22- ರೋಟರಿ ವುಡ್ಸ್ ಸಂಸ್ಥೆಯ ವತಿಯಿಂದ ಜುಲೈ 26 ರಂದು ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧನಮನ ಕಾಯ೯ಕ್ರಮ ಆಯೋಜಿಸಲಾಗಿದೆ. ನಗರದ ರೋಟರಿ ಸಭಾಂಗಣದಲ್ಲಿ ಜು. 26 ರಂದು ಭಾನುವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಎಸ್. ಬಿಂದುಮಣಿ ಅವರು ಉದ್ಘಾಟಿಸಲಿದ್ದಾರೆ. ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ನ ಕ್ಲಬ್ನಿ ವಿಸ್ತರಣಾ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ಎಂ.ಡಿ. ರಂಗಸ್ವಾಮಿ, ವಲಯ ಸೇನಾನಿ ಕೆ.ವಸಂತ್ ಕುಮಾರ್ , ರೋಟರಿ ವುಡ್ಸ್ ಕಾಯ೯ದಶಿ೯ ಸ್ಮಿತಾಚಂಗಪ್ಪ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ದಲ್ಲಿ ಸೈನಿಕ ದಂಪತಿಗೆ ಸನ್ಮಾನ ನೆರವೇರಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷೆ ಪ್ರಮೀಳಾ ಕೆ.ಶೆಟ್ಟಿ ತಿಳಿಸಿದ್ದಾರೆ.








