Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
  • *ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*
  • *ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*
  • *ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*
  • *ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*
  • *ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
  • *ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80 ರಷ್ಟು ಪೂರ್ಣಗೊಂಡಿದ್ದು, ಇದೇ ಜುಲೈ, 28 ರೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್‍ಐಆರ್ ಪ್ರಗತಿ ಸಂಬಂಧ ನೋಡಲ್ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‍ಐಆರ್ ಸಂಬಂಧ ಗಣತಿ ನಮೂನೆ ವಿತರಣಾ ಕಾರ್ಯವು ಶೇ.100 ರಷ್ಟು ಪೂರ್ಣಗೊಂಡಿದೆ. ಆದರೂ ಸಹ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆ ಪಡೆದು, ಡಿಜಟಲೀಕರಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಪ್ರತೀ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆಯನ್ನು ಪಡೆದು ಡಿಜಿಟಲೀಕರಣದ ಪ್ರಗತಿ ಸಾಧಿಸಬೇಕು. ಅರ್ಹ ಮತದಾರರು ಎಸ್‍ಐಆರ್ ಪ್ರಕ್ರಿಯೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ತಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಗಣತಿ ನಮೂನೆ ವಿತರಣೆ ಜೊತೆಗೆ ಡಿಜಿಟಲೀಕರಣ ಪ್ರಕ್ರಿಯೆಯು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಎಚ್ಚರಿಸಿದರು. ಎಸ್‍ಐಆರ್ ಪ್ರಕ್ರಿಯೆಯಲ್ಲಿ ಡಿಜಿಟಲೀಕರಣ ಮಾಡುವುದರ ಜೊತೆಗೆ ಗುಣಮಟ್ಟ ಪರೀಕ್ಷೆ ಮಾಡಬೇಕು. ಮತದಾರರು ಶಾಶ್ವತ ಸ್ಥಳಾಂತರ, ಮರಣ ಹೊಂದಿದ್ದಲ್ಲಿ, ಎರಡು ಕಡೆ ಹೆಸರು ಹೊಂದಿರುವ, ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದಿರುವ ಮತದಾರರ ಬಗ್ಗೆಯೂ ಸಹ ವಿಶೇಷ ಗಮನಹರಿಸಬೇಕು. ಈ ಸಂಬಂಧ ಜಿಲ್ಲೆಯಲ್ಲಿ 45,897 ಮಂದಿ ಮತದಾರರು ಇದ್ದು, ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ತಮ್ಮ ಹಂತದಲ್ಲಿ ಬಿಎಲ್‍ಒ ಮತ್ತು ಬಿಎಲ್‍ಎಗಳ ಸಭೆಯನ್ನು ಜೊತೆಗೂಡಿ ನಡೆಸಿ ಎಸ್‍ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಲ್ಲಿ ಶ್ರಮಿಸಬೇಕಿದೆ. ಎಲ್ಲರೂ ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮೃತಪಟ್ಟ ಮತದಾರರ ಸಂಖ್ಯೆಯು 12,323, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಸಂಖ್ಯೆ 24,676, ಎರಡು ಕಡೆ ಹೆಸರು ಹೊಂದಿರುವ ಮತದಾರರ ಸಂಖ್ಯೆ 3,484, ಗೈರು ಮತದಾರರ ಸಂಖ್ಯೆ 5,339, ಹಾಗೆಯೇ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದಿರುವ ಮತದಾರರ ಸಂಖ್ಯೆ 75 ಇದ್ದು, ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿ 4,68,657 ಮತದಾರರು ಇದ್ದು, ಇಷ್ಟು ಮಂದಿ ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಇದರಲ್ಲಿ 3,68,524 ನಮೂನೆ ಡಿಜಿಟಲೀಕರಣವಾಗಿದ್ದು, ಮತ್ತಷ್ಟು ಪ್ರಗತಿಗೆ ಸೂಚಿಸಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಮತಗಟ್ಟೆ ಅಧಿಕಾರಿಯು ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಆಗಸ್ಟ್, 08 ರವರೆಗೆ ನಡೆಯಲಿದೆ. ಮತಗಟ್ಟೆ ಪುನರ್ ವಿಂಗಡಣೆ ಕಾರ್ಯಕ್ರಮವು ಆಗಸ್ಟ್, 08 ರಂದು ನಡೆಯಲಿದೆ. ಕರಡು ಮತದಾರರ ಪಟ್ಟಿಯು ಆಗಸ್ಟ್, 17 ರಂದು ಪ್ರಕಟವಾಗಲಿದೆ. ಮತದಾರರ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆಗಸ್ಟ್, 17 ರಿಂದ ಸೆಪ್ಟೆಂಬರ್, 16 ರವರೆಗೆ ಕಾಲಾವಕಾಶ ನೀಡಲಾಗಿದೆ. ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ತೀರುವಳಿಯು ಆಗಸ್ಟ್, 17 ರಿಂದ ಅಕ್ಟೋಬರ್, 15 ರವರೆಗೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್, 19 ರಂದು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ನೋಡಲ್ ಅಧಿಕಾರಿಗಳಾದ ಮಂಜುನಾಥ್, ಶೇಖರ್, ಭಾಸ್ಕರ್, ಎಚ್.ಆರ್.ರಮೇಶ್, ಮಿಲನ ಭರತ್, ಬಾಲಕೃಷ್ಣ ರೈ, ಆಶಾ, ಗೌರಿ, ಗಿರೀಶ, ಗೋಪಿ, ನಾಚಪ್ಪ, ವಿ.ಟಿ.ವಿಸ್ಮಯಿ, ಕೃಷ್ಣಪ್ರಸಾದ್, ಸಿದ್ದರಾಜು, ಚುನಾವಣಾ ಶಿರಸ್ತೆದಾರರಾದ ಮಹೇಶ್, ಅನಿಲ್ ಕುಮಾರ್ ಇತರರು ತಮ್ಮ ತಮ್ಮ ವ್ಯಾಪ್ತಿಯ ಡಿಜಿಟಲೀಕರಣ ಪ್ರಗತಿ ಸಂಬಂಧ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.15 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ…

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026

*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*

ಆಗಷ್ಟ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.