Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 
  • *ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*
  • *ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*
  • *ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*
  •  *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ  | ಮೊಬೈಲ್ ಗಿಂತ ಶಿಕ್ಷಣಕ್ಕೆ ಮಹತ್ನ ನೀಡಿ  ಭೋಜಮ್ಮ ಕಿವಿಮಾತು*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ | ಹಿರಿಯರ ಮಾಗ೯ದಶ೯ನವಿದ್ದಾಗ ಜೀವನ ಪರಿಪೂಣ೯ – ಎಂ.ಪಿ. ಮುತ್ತಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜು.30 NEWS DESK : ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಪರಿಪಾಠವು ಪ್ರತಿಯೊಂದು ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲೇ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದರೆ ಸಮಾಜದಲ್ಲೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು. ವಿರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳ ಪಾಲನೆ-ಪೋಷಣೆ ಮಾಡುವುದೂ ಅಷ್ಟೇ ಮುಖ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ, ಪರಿಸರ ಜಾಗೃತಿ ಮೂಡಿಸುವಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಪಾತ್ರ ಶ್ಲಾಘನೀಯವಾಗಿದೆ. ಮರಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ಭೂಮಿಯನ್ನು ರಕ್ಷಿಸಿದರೆ ಭೂತಾಯಿ ನಮ್ಮನ್ನು ರಕ್ಷಿಸುತ್ತಾಳೆ. ಪರಿಸರವನ್ನು ಕಲುಷಿತಗೊಳಿಸದಂತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ವನಮಹೋತ್ಸವದಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಿ.ಕೆ.ನಾಚಪ್ಪ ಮಾತನಾಡಿ, ಪಟ್ಟಣದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪುರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಪ್ರದೀಪ್ ಕುಮಾರ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್, ನ್ಯೂಸ್ 3 ಡಿಜಿಟಲ್ ಮೀಡಿಯಾದ ಸಂಪಾದಕ ಶಶಿ ಅಚ್ಚಪ್ಪ, ಆಪ್ತಬ್, ಮಹಮದ್ ನಯಾಜ್, ಮಾಚಯ್ಯ ಸುಬ್ರಮಣಿ, ಮಂಜುನಾಥ್, ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಎನ್‌ಎಸ್‌ಎಸ್ ಸ್ವಯಂಸೇವಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಸೀಬೆ, ಹಿಪ್ಪೆ, ನೇರಳೆ, ಲಿಂಬೆ, ಬಟರ್‌ಫ್ರೂಟ್ ಸೇರಿದಂತೆ ಐವತ್ತಕ್ಕೂ ಅಧಿಕ ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.21-ವಿಶೇಷ ಚೇತನರ ಕುಂದುಕೊರತೆ ಅಹವಾಲು ಆಲಿಸುವ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ…

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 21, 2026

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*

ಆಗಷ್ಟ್ 21, 2026

 *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 21, 2026

*ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*

ಆಗಷ್ಟ್ 21, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ  | ಮೊಬೈಲ್ ಗಿಂತ ಶಿಕ್ಷಣಕ್ಕೆ ಮಹತ್ನ ನೀಡಿ  ಭೋಜಮ್ಮ ಕಿವಿಮಾತು*

ಆಗಷ್ಟ್ 21, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ | ಹಿರಿಯರ ಮಾಗ೯ದಶ೯ನವಿದ್ದಾಗ ಜೀವನ ಪರಿಪೂಣ೯ – ಎಂ.ಪಿ. ಮುತ್ತಪ್ಪ*

ಆಗಷ್ಟ್ 21, 2026

*ರೋಟರಿ ಮಡಿಕೇರಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ದೇಶ ಸೇವೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲು ನಿವೃತ್ತ ಕರ್ನಲ್ ಸಿ.ಎಂ.ತಿಮ್ಮಣ್ಣ ಕರೆ*

ಆಗಷ್ಟ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.