Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.18 ರಂದು ಮಿನಿ ಉದ್ಯೋಗ ಮೇಳ*
  • *ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*
  • *ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*
  • *ವಿರಾಜಪೇಟೆ : ಕಟ್ಟಡದ ಹಿಂಭಾಗ ಸಿಲುಕಿದ್ದ ಜಿಂಕೆಯ ರಕ್ಷಣೆ*
  • *ಪರಿಶಿಷ್ಟ ಪಂಗಡಗಳ ಅನುದಾನ ದುರುಪಯೋಗ : ಕೊಡಗು ಜಿಲ್ಲಾ ಜೇನು ಕುರುಬ ಅಭಿವೃದ್ಧಿ ಸಂಘ ಆರೋಪ : ತನಿಖೆಗೆ ಆಗ್ರಹ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಕೊಡಗು ಬಿಜೆಪಿ ಒತ್ತಾಯ : ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ನಿರ್ಧಾರ*
  • *ಆಕ್ಷೇಪಣೆ ಸಲ್ಲಿಸಲು ಚೆಟ್ಟಿಮಾನಿ ಕುಂದಚೇರಿ ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ನಿರ್ಧಾರ*
  • *ಶಾಸಕ ಡಾ.ಮಂತರ್ ಗೌಡರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡಲು ಜೆ.ಎಲ್.ಜನಾರ್ಧನ್ ಒತ್ತಾಯ*
  • *ಮಗ್ಗುಲ ಶ್ರೀ ಶನೇಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*

ಆಗಷ್ಟ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.13 NEWS DESK : ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು, ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಕ್ರಮಗಳು, ಬೀದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವುದು ಸೇರಿದಂತೆ ಹಲವು ಆರೋಪಗಳನ್ನು ಮುಂದಿಟ್ಟುಕೊಂಡು ಕುಶಾಲನಗರ ತಾಲೂಕು ಬಿಜೆಪಿ ಕಾರ್ಯಕರ್ತರು ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪುರಸಭೆಯ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಕಚೇರಿಯಲ್ಲಿ ಕೆಲವು ಮಾಜಿ ಜನಪ್ರತಿನಿಧಿಗಳು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರಿಗಳೊಂದಿಗೆ ಕೈಜೋಡಿಸಿ ಕಚೇರಿಯ ಆಡಳಿತದ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮಧ್ಯವರ್ತಿಗಳ ಮೂಲಕ ಲಂಚ ಪಡೆದು ಸಾರ್ವಜನಿಕರ ಕೆಲಸಗಳನ್ನು ಮಾಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಪುರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ ಎಂದು ಬಿಜೆಪಿ ಪ್ರಮುಖರು ಆರೋಪಿಸಿದರು.
ಹಲವು ವರ್ಷಗಳಿಂದ ಮೀನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡ ಮೀನುಗಾರರಿಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಮೀನು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಈ ವಿಚಾರದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮೀನು ಮಾರಾಟಗಾರರು ತಮ್ಮ ಮೀನಿನ ಬುಟ್ಟಿಗಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಈ ಹಿಂದೆ ಪುರಸಭೆ ಸಿಬ್ಬಂದಿಯೊಬ್ಬರ ಮೇಲೆ ಮಧ್ಯವರ್ತಿಯಿಂದ ಹಲ್ಲೆ ನಡೆದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿತ್ತು ಎಂದು ಪ್ರತಿಭಟನಾಕಾರರು ತಿಳಿಸಿದರು. ಇದೇ ವೇಳೆ ನೂತನವಾಗಿ ನಿರ್ಮಿಸಿರುವ ಪುರಸಭೆ ಕಚೇರಿ ಕಟ್ಟಡದ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಮಾಂಸ ಮಾರಾಟ ಮಳಿಗೆಗಳನ್ನು ಗುರುತಿಸಿ ತೆರವುಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆ ಹಾಗೂ ಸ್ವಚ್ಛತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆಯುತ್ತಿರುವ ಮಾಂಸ ಮಾರಾಟದ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಹಾಗೂ ಪುರಸಭೆಯ ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ನಿತಿನ್ ಚಿಕ್ಕಿ ಅವರು ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ, ಮನವಿಯಲ್ಲಿರುವ ವಿಷಯಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಬಿ. ಭಾರತೀಶ್, ಕುಶಾಲನಗರ ಬಿಜೆಪಿ ಅಧ್ಯಕ್ಷ ಎಂ.ಎಂ. ಚರಣ್, ಕಾರ್ಯದರ್ಶಿ ಮಧುಸೂದನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ್ ನಾಯಕ್, ಪ್ರಮುಖರಾದ ಚಂದ್ರಶೇಖರ್ ಹೇರೂರು, ಕೆ.ಜಿ. ಮನು, ಶಿವಾಜಿ, ಮಂಜುನಾಥ್, ನವನೀತ್, ಸುಮನ್, ದಿನೇಶ್, ಮಹಿಳಾ ಪ್ರಮುಖರಾದ ಕನಕ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಮೀನು ಮಾರಾಟಗಾರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.18 ರಂದು ಮಿನಿ ಉದ್ಯೋಗ ಮೇಳ*

ಆಗಷ್ಟ್ 13, 2026

*ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*

ಆಗಷ್ಟ್ 13, 2026

*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಆಗಷ್ಟ್ 13, 2026

*ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*

ಆಗಷ್ಟ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಆ.13 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ…

*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಆಗಷ್ಟ್ 13, 2026

*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*

ಆಗಷ್ಟ್ 13, 2026

*ವಿರಾಜಪೇಟೆ : ಕಟ್ಟಡದ ಹಿಂಭಾಗ ಸಿಲುಕಿದ್ದ ಜಿಂಕೆಯ ರಕ್ಷಣೆ*

ಆಗಷ್ಟ್ 13, 2026

*ಪರಿಶಿಷ್ಟ ಪಂಗಡಗಳ ಅನುದಾನ ದುರುಪಯೋಗ : ಕೊಡಗು ಜಿಲ್ಲಾ ಜೇನು ಕುರುಬ ಅಭಿವೃದ್ಧಿ ಸಂಘ ಆರೋಪ : ತನಿಖೆಗೆ ಆಗ್ರಹ*

ಆಗಷ್ಟ್ 13, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಕೊಡಗು ಬಿಜೆಪಿ ಒತ್ತಾಯ : ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ನಿರ್ಧಾರ*

ಆಗಷ್ಟ್ 13, 2026

*ಆಕ್ಷೇಪಣೆ ಸಲ್ಲಿಸಲು ಚೆಟ್ಟಿಮಾನಿ ಕುಂದಚೇರಿ ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ನಿರ್ಧಾರ*

ಆಗಷ್ಟ್ 13, 2026

*ಶಾಸಕ ಡಾ.ಮಂತರ್ ಗೌಡರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡಲು ಜೆ.ಎಲ್.ಜನಾರ್ಧನ್ ಒತ್ತಾಯ*

ಆಗಷ್ಟ್ 13, 2026

*ಮಗ್ಗುಲ ಶ್ರೀ ಶನೇಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ*

ಆಗಷ್ಟ್ 12, 2026

*ಕೊಡ್ಲಿಪೇಟೆಯಲ್ಲಿ ಶರಣ ಸಾಹಿತ್ಯ ಕಾರ್ಯಕ್ರಮಕ್ಕೆ ಚಾಲನೆ : ಮಕ್ಕಳ ಸಾತ್ವಿಕ ಬದುಕಿಗೆ ವಚನಗಳು ದಾರಿದೀಪ : ಅಭಿನವಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಮತ*

ಆಗಷ್ಟ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.