Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.22 ರಂದು ಭಾಗಮಂಡಲದಲ್ಲಿ 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ : ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ*
  • *ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಮನವಿ*
  • *ಆ.17 ರಂದು ಸಿಎನ್‌ಸಿ ‘ಕೊಡವ ಜನಸಂಪರ್ಕ ಅಭಿಯಾನ’ ಮರೇನಾಡಿನ ಬಿರುನಾಣಿಯಿಂದ ಆರಂಭ*
  • *ಎನ್‌ಎಂಸಿಯಲ್ಲಿ ಸಂಭ್ರಮದ ಆಟಿ ಆಚರಣೆ : ಸಂಸ್ಕೃತಿ – ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕೆಲಸ ಯುವಜನತೆಯಿಂದಾಗಲಿ” : ಕೆ.ಸಿ.ಅಕ್ಷಯ್ *
  • *ಆ.15 ರಂದು ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ*
  • *ಆ.14 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಕೊಡಗಿಗೆ ಭೇಟಿ*
  • *ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ*
  • *ಆ.18 ರಂದು ಮಿನಿ ಉದ್ಯೋಗ ಮೇಳ*
  • *ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*
  • *ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.22 ರಂದು ಭಾಗಮಂಡಲದಲ್ಲಿ 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ : ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.22 ರಂದು ಭಾಗಮಂಡಲದಲ್ಲಿ 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ : ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ*

ಆಗಷ್ಟ್ 14, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.14 : ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ, ಜಿಲ್ಲಾಡಳಿತ, ಕೊಡಗು ಜಿಲ್ಲೆ ಯುವ ಸಬಲೀಕರಣ ಮತ್ತು ಮತ್ತು ಕ್ರೀಡಾ ಇಲಾಖೆ, ಮಡಿಕೇರಿ. ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ, ವಿರಾಜಪೇಟೆ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯುವಕ ಸಂಘ, ಅಯ್ಯಂಗೇರಿ ಇದರ ಸಂಯುಕ್ತಾಶ್ರದಲ್ಲಿ 2026-27ನೇ ಸಾಲಿನ 34ನೇ ವರ್ಷದ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳನ್ನು ಆ.22 ರಂದು ಆಯೋಜಿಸಲಾಗಿದೆ. ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳ ಕುರಿತು ಕ್ರೀಡಾ ಇಲಾಖೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ದಿನಾಂಕವನ್ನು ನಿಗಧಿ ಮಾಡಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ಅವರು ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು. ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಜಿಲ್ಲಾ ಯುವ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪಿ.ಪಿ.ಸುಕುಮಾರ್, ಕೆ.ಮಧು ಮೋಹನ್, ಶ್ರೀಕೃಷ್ಣ ಯುವಕ ಸಂಘದ ಅಧ್ಯಕ್ಷ ಲತೇಶ್, ಗೌರವ ಅಧ್ಯಕ್ಷ ಜೀವನ್ ಕುಮಾರ್, ಉಪಾಧ್ಯಕ್ಷ ರೀತನ್, ಸದಸ್ಯರಾದ ಪ್ರತೀಶ್ ಹಾಗೂ ಮಂಜು ಉಪಸ್ಥಿತರಿದ್ದರು. *ಬೆಳಿಗ್ಗೆ 9 ಗಂಟೆಯಿಂದ ಹಗ್ಗಜಗ್ಗಾಟ ಸ್ಪರ್ಧೆ* ಸಾರ್ವಜನಿಕ ಪುರುಷರ ವಿಭಾಗ 7 ಜನರ ತಂಡ, ಹಗ್ಗ ಜಗ್ಗಾಟ ಸಾರ್ವಜನಿಕ ಮಹಿಳೆಯರ ವಿಭಾಗ 7 ಜನರ ತಂಡ, ವಾಲಿಬಾಲ್ ಸಾರ್ವಜನಿಕ ಪುರುಷರ ವಿಭಾಗ 4 ಜನರ ತಂಡ, ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗ 6 ಜನರ ತಂಡ. *ಬೆಳಿಗ್ಗೆ 11 ಗಂಟೆಯಿಂದ ಕೆಸರು ಗದ್ದೆ ಓಟದ ಸ್ಪರ್ಧೆಗಳು* ಕಿರಿಯರ ಪ್ರಾಥಮಿಕ ಶಾಲಾ ಬಾಲಕರು ಹಾಗೂ ಬಾಲಕಿಯರಿಗೆ (1 ರಿಂದ 4ನೇ ತರಗತಿಯವರೆಗೆ), ಹಿರಿಯರ ಪ್ರಾಥಮಿಕ ಶಾಲಾ ಬಾಲಕ ಹಾಗೂ ಬಾಲಕಿಯರಿಗೆ (5 ರಿಂದ 7 ತರಗತಿಯವರೆಗೆ), ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ (8 ರಿಂದ 10ನೇ ತರಗತಿಯವರೆಗೆ), ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರಿಗೆ, ಪದವಿ ಕಾಲೇಜು ಬಾಲಕ ಹಾಗೂ ಬಾಲಕಿಯರಿಗೆ, ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಮುಕ್ತ ಓಟ, ಆಯೋಜಕರಿಗೆ ಓಟದ ಸ್ಪರ್ಧೆ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ವಿ.ಟಿ.ವಿಸ್ಮಯಿ ಮಾಹಿತಿ ನೀಡಿದರು. ಹಗ್ಗ-ಜಗ್ಗಾಟಕ್ಕೆ ಸಾರ್ವಜನಿಕ (ಪುರುಷರ ವಿಭಾಗ) ತಂಡಗಳಿಗೆ ಪ್ರವೇಶ ಶುಲ್ಕ ರೂ.1,500, ಸಾರ್ವಜನಿಕ (ಮಹಿಳೆಯರ ವಿಭಾಗಕ್ಕೆ ಹಗ್ಗ-ಜಗ್ಗಾಟ ತಂಡಗಳಿಗೆ ಪ್ರವೇಶ ಶುಲ್ಕ 1,000 ಆಗಿರುತ್ತದೆ. ತಂಡಗಳು ಆ.21 ಸಂಜೆ 5 ಗಂಟೆಯ ಒಳಗಾಗಿ ತಂಡದ ಹೆಸರು ನೋಂದಾವಣೆ ಮಾಡಿ ಭಾಗವಹಿಸುವಿಕೆಯನ್ನು ಖಾತರಿಪಡಿಸಬೇಕು. ವಾಲಿಬಾಲ್ ಸಾರ್ವಜನಿಕ (ಪುರುಷರ ವಿಭಾಗ) ತಂಡಗಳಿಗೆ ಪ್ರವೇಶ ಶುಲ್ಕ ರೂ.1,000. ಥ್ರೋಬಾಲ್ ಸಾರ್ವಜನಿಕ (ಮಹಿಳೆಯರ ವಿಭಾಗ) ತಂಡಗಳಿಗೆ ಪ್ರವೇಶ ಶುಲ್ಕ ರೂ.1,000 ಆಗಿರುತ್ತದೆ. ತಂಡಗಳು ಆ.21 ಸಂಜೆ 5 ಗಂಟೆಯ ಒಳಗಾಗಿ ತಂಡದ ಹೆಸರು ನೋಂದಾವಣೆ ಮಾಡಿ ಭಾಗವಹಿಸುವಿಕೆಯನ್ನು ಖಾತರಿಪಡಿಸಬೇಕು ಭಾಗವಹಿಸುವ ತಂಡಗಳು ಕಡ್ಡಾಯವಾಗಿ ಸಮಯ ಪರಿಪಾಲನೆ ಮಾಡಬೇಕು. ಕ್ರೀಡಾ ಸ್ಪರ್ಧೆಗಳನ್ನು ಬೆಳಗ್ಗೆ 9 ಗಂಟೆಯಿAದ ಪ್ರಾರಂಭಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ (ಪ್ರಥಮ ಹಾಗೂ ದ್ವಿತೀಯ ಸ್ಥಾನಗಳಿಗೆ) ಪಾರಿತೋಷಕ ಮತ್ತು ನಗದು ಬಹುಮಾನಗಳನ್ನು ನೀಡಲಾಗುವುದು. ಓಟದ ಸ್ಪರ್ಧೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಪಾರಿತೋಷಕ ಮತ್ತು ನಗದು ಹಾಗೂ ಪ್ರಶಂಸನಾ ಪತ್ರವನ್ನು ನೀಡಲಾಗುವುದು. ತೀರ್ಪುಗಾರರ ಹಾಗೂ ಆಯೋಜಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ತಿಳಿಸಿದರು. ವಾಲಿಬಾಲ್, ಥ್ರೋಬಾಲ್ ನೋಂದಣಿ ಮಾಡುವವರು ಅಭಿಷೇಕ್ 6361621643/ 7337779833 (ಶುಲ್ಕ ರೂ.1000), ಹಗ್ಗಜಗ್ಗಾಟ ಬಿದ್ದಿಯಂಡ ಸುಭಾಷ್ 9845053501/ 8431816593 (ಶುಲ್ಕ ರೂ.1500). *ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ* ಬಾಳಾಡಿ ದಿಲೀಪ್ ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ-8618568173, ಪಿ.ಪಿ.ಸುಕುಮಾರ್ ನಿಕಟಪೂರ್ವ ಅಧ್ಯಕ್ಷರು, ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ-9481213920, ಲತೇಶ್, ಅಧ್ಯಕ್ಷರು, ಶ್ರೀ ಕೃಷ್ಣ ಯುವಕ, ಸಂಘ, ಅಯ್ಯಂಗೇರಿ-9483662610, ಜೀವನ್ ಕುಮಾರ್, ಗೌರವ ಅಧ್ಯಕ್ಷರು, ಶ್ರೀ ಕೃಷ್ಣ ಯುವಕ, ಸಂಘ, ಅಯ್ಯಂಗೇರಿ -9353426073, ರಿತನ್ ಬಿ.ಪಿ ಉಪಾಧ್ಯಕ್ಷರು, ಶ್ರೀ ಕೃಷ್ಣ ಯುವಕ, ಸಂಘ, ಅಯ್ಯಂಗೇರಿ- 7337779833, ಪ್ರತೀಶ್, ಸದಸ್ಯರು, ಶ್ರೀ ಕೃಷ್ಣ ಯುವಕ, ಸಂಘ(ರಿ), ಅಯ್ಯಂಗೇರಿ- 8217801336, ಮಂಜು ಬಿ.ಪಿ., ಸದಸ್ಯರು, ಶ್ರೀ ಕೃಷ್ಣ ಯುವಕ, ಸಂಘ ಅಯ್ಯಂಗೇರಿ- 9632062107

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಮನವಿ*

ಆಗಷ್ಟ್ 14, 2026

*ಆ.17 ರಂದು ಸಿಎನ್‌ಸಿ ‘ಕೊಡವ ಜನಸಂಪರ್ಕ ಅಭಿಯಾನ’ ಮರೇನಾಡಿನ ಬಿರುನಾಣಿಯಿಂದ ಆರಂಭ*

ಆಗಷ್ಟ್ 14, 2026

*ಎನ್‌ಎಂಸಿಯಲ್ಲಿ ಸಂಭ್ರಮದ ಆಟಿ ಆಚರಣೆ : ಸಂಸ್ಕೃತಿ – ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕೆಲಸ ಯುವಜನತೆಯಿಂದಾಗಲಿ” : ಕೆ.ಸಿ.ಅಕ್ಷಯ್ *

ಆಗಷ್ಟ್ 13, 2026

*ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಮನವಿ*

ಆಗಷ್ಟ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.14 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆ.16 ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನ ಹಾಗೂ…

*ಆ.17 ರಂದು ಸಿಎನ್‌ಸಿ ‘ಕೊಡವ ಜನಸಂಪರ್ಕ ಅಭಿಯಾನ’ ಮರೇನಾಡಿನ ಬಿರುನಾಣಿಯಿಂದ ಆರಂಭ*

ಆಗಷ್ಟ್ 14, 2026

*ಎನ್‌ಎಂಸಿಯಲ್ಲಿ ಸಂಭ್ರಮದ ಆಟಿ ಆಚರಣೆ : ಸಂಸ್ಕೃತಿ – ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕೆಲಸ ಯುವಜನತೆಯಿಂದಾಗಲಿ” : ಕೆ.ಸಿ.ಅಕ್ಷಯ್ *

ಆಗಷ್ಟ್ 13, 2026

*ಆ.15 ರಂದು ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 13, 2026

*ಆ.14 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಕೊಡಗಿಗೆ ಭೇಟಿ*

ಆಗಷ್ಟ್ 13, 2026

*ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ*

ಆಗಷ್ಟ್ 13, 2026

*ಆ.18 ರಂದು ಮಿನಿ ಉದ್ಯೋಗ ಮೇಳ*

ಆಗಷ್ಟ್ 13, 2026

*ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*

ಆಗಷ್ಟ್ 13, 2026

*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಆಗಷ್ಟ್ 13, 2026

*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*

ಆಗಷ್ಟ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.