
ಮಡಿಕೇರಿ NEWS DESK ಆ.20 : ಯುವಶಕ್ತಿಗೆ ಸ್ಫೂರ್ತಿಯಾಗಿದ್ದ ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ನಿಲುವು ಸ್ಪಷ್ಟವಾಗಿತ್ತು. ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಆಡಳಿತದ ಮೌಲ್ಯಗಳು ಬಡವರ ಪರವಾಗಿತ್ತು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಬಣ್ಣಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಸಂಯುಕ್ತಾಶ್ರಯದಲ್ಲಿ ರಾಜೀವ್ ಗಾಂಧಿ ಅವರ 84ನೇ ಜನ್ಮ ದಿನಾಚರಣೆ ಮತ್ತು ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಟಿ.ಪಿ.ರಮೇಶ್ ಅವರು ದೇಶದ 18 ವರ್ಷದ ಯುವಕರಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ ಯುವ ಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಿದ ರಾಜೀವ್ ಗಾಂಧಿ ಅವರ ಆದರ್ಶ ಇತರರಿಗೆ ಮಾದರಿಯಾಗಿದೆ. ಬಡವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದ ದೇವರಾಜ ಅರಸು ಅವರ ಮೌಲ್ಯಗಳು ಶ್ರೇಷ್ಠವಾಗಿತ್ತು ಎಂದರು.
ಪಕ್ಷದ ಕಛೇರಿಯಲ್ಲಿ ನಡೆದ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಯೋಜಕ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ ಹಂಸ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಜಿ ಮೋಹನ್, ಮಡಿಕೇರಿ ನಗರ ಕಾಂಗ್ರೆಸ್ನ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಅವರುಗಳು ರಾಜೀವ್ ಗಾಂಧಿ ಮತ್ತು ದೇವರಾಜ ಅರಸರ ಕುರಿತು ಮಾತನಾಡಿದರು. ಸಭೆಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ನಗರಾಧ್ಯಕ್ಷ ಜಿ.ಸಿ.ಜಗದೀಶ್ ಡಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಮೂಡ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್, ನಗರ ಉಪಾಧ್ಯಕ್ಷ ಮುನೀರ್ ಮಾಚರ್, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಪ್ರಧಾನ ಕಾರ್ಯದರ್ಶಿ ಪವಿತ್ರ, ಮೂಡಾ ಸದಸ್ಯರಾದ ಆರ್.ಪಿ.ಚಂದ್ರಶೇಖರ್ ಮತ್ತು ಮಿನಾಜ್ ಪ್ರವೀಣ್, ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿ ಫ್ಯಾನ್ಸಿ ಪಾರ್ವತಿ, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಉಪಾದ್ಯಕ್ಷೆ ಲೀಲಾ ಶೇಷಮ್ಮ, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್, ಪ್ರಮುಖರಾದ ಕೋಚನ ಹರಿಪ್ರಸಾದ್, ಮೇರಜನ ಕಿರಣ್, ವಸಂತ್ ಭಟ್, ಜಿ.ಆರ್.ರಾಜು, ರಿಯಾಜುದ್ದೀನ್, ಕೌಶರ್, ಸುಬ್ರಮಣಿ ಹೆಚ್.ಕೆ, ವಿಮಲ, ಮುಮ್ತಾಜ್ ಬೇಗಂ, ಧನಲಕ್ಷ್ಮಿ, ಕೀರ್ತನ, ಆಸಿಫ್, ಹ್ಯಾರಿಸ್, ಶಯ್ನಾಜ್, ಸುನಂದ, ಹಬೀಬ್, ಹುಸೇನ್, ಶರಣ್, ಆಶಾ ಮತ್ತಿತರರು ಉಪಸ್ಥಿತರಿದ್ದರು. ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಸ್ವಾಗತಿಸಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ವಂದಿಸಿದರು. ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಣ್ಣು ಹಂಪಲನ್ನು ವಿತರಿಸಿದರು.









