Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.25 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.1 ರಂದು 31ನೇ ವರ್ಷದ ಕೈಲ್ ಪೊವ್ದ್ ಆಚರಣೆ ಮಡಿಕೇರಿಯ ಹೊರವಲಯದ ಕ್ಯಾಪಿಟಲ್ ವಿಲೇಜ್ ಮಂದ್ ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಕೊಡವಲ್ಯಾಂಡ್ ಹಕ್ಕುಗಳ ನಿರ್ಣಯಕ್ಕಾಗಿ, ಕೊಡವ ಜನಾಂಗೀಯ ಸಾಂಸ್ಕೃತಿಕ ಪರಂಪರೆ ಮತ್ತು ಸಮರ ಪರಂಪರೆಯನ್ನು ಪ್ರದರ್ಶಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ್ಯಾಷನಲ್ ಫ್ರಂಟ್ ಫಾರ್ ನ್ಯೂ ಸ್ಟೇಟ್ಸ್ ಅಧ್ಯಕ್ಷರು ಹಾಗೂ ಉತ್ತರಾಂಧ್ರ ಪ್ರತ್ಯೇಕ ರಾಜ್ಯ ಚಳವಳಿಯ ಮುಖಂಡರಾದ ಮೆಟ್ಟಾ ರಾಮರಾವ್, ಐಆರ್‌ಎಸ್ (ನಿವೃತ್ತ), ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ವೈದ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಡಾ.ಮಾತಂಡ ಅಯ್ಯಪ್ಪ ಗೌರವ ಅತಿಥಿಯಾಗಿ ಹಾಗೂ ಚೋಪ್ರಾ ಫೌಂಡೇಶನ್ ನ ಸಿಇಒ ಬಲ್ಯಾಟಂಡ ಕವೇರ್ ಪೂಣಚ್ಚ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಾಧವಿ ಮೆಟ್ಟಾ ರಾಮರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಎನ್.ಯು.ನಾಚಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಜಾನಪದ ಪುಷ್ಪ ‘ತೋಕ್ ಪೂವ್’ ಬಳಸಿ ಬಂದೂಕುಗಳನ್ನು ಅಲಂಕರಿಸಿ ಪೂರ್ವಜರಿಗೆ ತರ್ಪಣ ಅರ್ಪಿಸುವ ಆಚರಣೆ ನಡೆಯಲಿದೆ. ಕೊಡವರ ಸಾಂಪ್ರದಾಯಿಕ ಬಂದೂಕು, ಆಯುಧಗಳು ಹಾಗೂ ಪೂರ್ವಜರ ಪರಂಪರೆಯನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಗುವುದು. ಸಿಎನ್‌ಸಿಯ ಪ್ರಮುಖ ಬೇಡಿಕೆಗಳಾದ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ವಿಶೇಷ ಜನಾಂಗೀಯ ವರ್ಗೀಕರಣ, ಕೊಡವ ತಕ್ಕ್ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ, ಬಂದೂಕು/ತೋಕ್ ಆಚರಣೆಗೆ ಧಾರ್ಮಿಕ ರಕ್ಷಣೆ, ಕೊಡವರ ಅಮೂರ್ತ ಸಾಂಸ್ಕೃತಿಕ ಪರಂಪರೆಗೆ ಯುನೆಸ್ಕೋ ಮಾನ್ಯತೆ, ಕಾವೇರಿ ನದಿಗೆ ಕಾನೂನುಬದ್ಧ ವ್ಯಕ್ತಿ ಸ್ಥಾನಮಾನ ಹಾಗೂ ತಲಕಾವೇರಿಯನ್ನು ಪವಿತ್ರ ಯಾತ್ರಾ ಕೇಂದ್ರವಾಗಿ ಘೋಷಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಇದೇ ಸಂದರ್ಭ ಮಂಡಿಸಲಾಗುವುದು. ಇದರೊAದಿಗೆ ದೇವಟ್‌ಪರಂಬು ಸೇರಿದಂತೆ ಐತಿಹಾಸಿಕ ಸ್ಥಳಗಳಲ್ಲಿ ಸ್ಮಾರಕಗಳ ನಿರ್ಮಾಣ, ಕೊಡವ ಪ್ರದೇಶದಲ್ಲಿ ಇನ್ನರ್ ಲೈನ್ ಪರ್ಮಿಟ್ ಜಾರಿ, ಕೊಡವರಿಗೆ ಪ್ರತ್ಯೇಕ ಸಂಸದೀಯ ಹಾಗೂ ವಿಧಾನಸಭಾ ಕ್ಷೇತ್ರದ ಬೇಡಿಕೆ ಮತ್ತು ಪಾರಂಪರಿಕ ಭೂಮಿಗಳ ಮರುಸ್ಥಾಪನೆಯನ್ನೂ ಪ್ರತಿಪಾದಿಸಲಾಗುವುದು.
ಕೊಡವ ಸಮುದಾಯಕ್ಕೆ ಸಂವಿಧಾನಾತ್ಮಕ ರಕ್ಷಣೆ ಅಗತ್ಯವಿದ್ದು, ಸಮುದಾಯದ ಸಾಂಸ್ಕೃತಿಕ ಹಾಗೂ ಜನಾಂಗೀಯ ಅಸ್ತಿತ್ವವನ್ನು ಅಖಂಡವಾಗಿ ಉಳಿಸುವುದು ಸಿಎನ್‌ಸಿ ಉದ್ದೇಶವಾಗಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಆಯುಧ ಪೂಜೆ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಸಾಂಪ್ರದಾಯಿಕ ಕೊಡವ ಶೈಲಿಯ ಭೋಜನ ಕೂಟವಿರುತ್ತದೆ. ಎಲ್ಲಾ ಕೊಡವರು ಹಾಗೂ ಕೊಡವತಿಯರು ಬಂದೂಕು ಹಾಗೂ ಒಡಿಕತ್ತಿಯೊಂದಿಗೆ ಸಾಮೂಹಿಕ ಪವಿತ್ರ ಪೂಜೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. *‘ಕೊಡವ’ ನಾಮಕರಣ ಮರುಸ್ಥಾಪನೆಗೆ ನ್ಯಾಯಾಂಗ ಹೋರಾಟ* ‘ಕೊಡಗರು’ ಬದಲಿಗೆ ಶಾಸ್ತ್ರೀಯ ಹಾಗೂ ಸಾಂವಿಧಾನಿಕ ‘ಕೊಡವ’ ನಾಮಕರಣವನ್ನು ಮರುಸ್ಥಾಪಿಸಲು ಸಿಎನ್‌ಸಿ ನಿರಂತರ ಕಾನೂನು ಹೋರಾಟ ನಡೆಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಡಾ. ದ್ವಾರಕಾನಾಥ್ ಆಯೋಗದ ಮುಂದೆ ಐತಿಹಾಸಿಕ, ಮಾನವಶಾಸ್ತ್ರೀಯ ಹಾಗೂ ಜನಾಂಗೀಯ ದಾಖಲೆಗಳ ಆಧಾರದಲ್ಲಿ ವಾದ ಮಂಡಿಸಲಾಗಿದ್ದು, ನಂತರ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ.
2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರ ಪ್ರತ್ಯೇಕ ಗಣತಿ, UNDRIP ಹಾಗೂ ಸಂವಿಧಾನದ 5ನೇ ಮತ್ತು 6ನೇ ಪರಿಚ್ಛೇದಗಳ ಅಡಿಯಲ್ಲಿ ರಕ್ಷಣೆ ಮತ್ತು ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಹಕ್ಕೊತ್ತಾಯಕ್ಕೆ ಈ ನಾಮಕರಣ ಮರುಸ್ಥಾಪನೆ ಆಧಾರವಾಗಲಿದೆ ಎಂದು ಎನ್.ಯು.ನಾಚಪ್ಪ ಅಭಿಪ್ರಾಯಪಟ್ಟಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.25 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.1 ರಂದು 31ನೇ ವರ್ಷದ ಕೈಲ್…

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.