Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.28 : ಕಸ್ತೂರಿ ರಂಗನ್ ವರದಿ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲ. ವರದಿ ಜಾರಿಯಿಂದ ಕೊಡಗಿನ ಕಾಫಿ ಬೆಳೆಗಾರರಿಗೆ ಯಾವುದೇ ತೊಂದರೆಗಳೂ ಇಲ್ಲ. ಈ ವರದಿಯಿಂದ ಕಾವೇರಿ ನೀರನ್ನು ಬಳಸುವ ರಾಜ್ಯದ ಎಲ್ಲಾ ಜನರಿಗೆ ಲಾಭವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರಕಾರ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನ ಭಾರತದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಕೇಂದ್ರ ಮತ್ತು ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಅಗತ್ಯವಿಲ್ಲದ ಅಂಶಗಳನ್ನು ಕೈಬಿಡಲು ಪ್ರಯತ್ನಿಸಬೇಕು. ಆ ಮೂಲಕ ಜನರ ಆತಂಕವನ್ನು ದೂರ ಮಾಡಬೇಕು ಎಂದರು.
ಕಸ್ತೂರಿ ರಂಗನ್ ವರದಿಯಲ್ಲಿ ಕೊಡಗಿನ 53 ಗ್ರಾಮಗಳನ್ನು ಸೂಕ್ಷö್ಮ ಪರಿಸರ ವಲಯಕ್ಕೆ ಒಳಪಡಿಸಲಾಗಿದೆ. ಇದರಲ್ಲಿ ಮಡಿಕೇರಿ ತಾಲ್ಲೂಕಿನ 22 ಗ್ರಾಮಗಳು, ಸೋಮವಾರಪೇಟೆ ತಾಲ್ಲೂಕಿನ 10 ಮತ್ತು ವಿರಾಜಪೇಟೆ ತಾಲ್ಲೂಕಿನ 21 ಗ್ರಾಮಗಳು ಬರುತ್ತವೆ. ಈ ಗ್ರಾಮಗಳನ್ನು ಅರಣ್ಯಕ್ಕೆ ಸೇರ್ಪಡೆ ಮಾಡಲಾಗುತ್ತದೆ, ಗ್ರಾಮಸ್ಥರು ಗ್ರಾಮವನ್ನು ಬಿಡಬೇಕಾಗುತ್ತದೆ ಎನ್ನುವ ತಪ್ಪು ಮಾಹಿತಿ ರವಾನೆಯಾಗುತ್ತಿದೆ. ಆದರೆ ವರದಿಯಲ್ಲಿ ಈ ರೀತಿಯ ಯಾವುದೇ ವಿಚಾರ ಅಡಕವಾಗಿಲ್ಲ, ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿದರು.
ಕಾಫಿ ತೋಟಗಳ ನಿರ್ವಹಣೆ, ಕಾಫಿ ಕಣ, ಗೋದಾಮುಗಳ ನಿರ್ಮಾಣ, ನೆರಳಿನ ನಿರ್ವಹಣೆ, ಸ್ವಂತ ಮನೆಗಳ ನಿರ್ಮಾಣಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ್ಲ. ಪರಿಸರಕ್ಕೆ ವಿರುದ್ಧವಾದ “ಟೌನ್ ಶಿಪ್”ಗಳ ನಿರ್ಮಾಣ ಹಾಗೂ ಬೃಹತ್ ಯೋಜನೆಗಳ ಜಾರಿಗೆ ಮಾತ್ರ ಅವಕಾಶ ಸಿಗುವುದಿಲ್ಲ. ಮುಂದಿನ ಭವಿಷ್ಯಕ್ಕಾಗಿ ಕೊಡಗು ಜಿಲ್ಲೆಯ ಪರಿಸರ ಸಂರಕ್ಷಣೆ ಅತ್ಯಗತ್ಯವೆಂದು ತಿಳಿಸಿದರು.
ಕೀಟನಾಶಕಗಳು, ಕಳೆೆ ನಾಶಕಗಳ ಬಳಕೆಗೂ ಯಾವುದೇ ಅಡ್ಡಿ ಇಲ್ಲ. ಇದಕ್ಕೆ ಬದಲಾಗಿ ಹಸಿರ ಪರಿಸರದ ನಡುವೆ ಇರುವ ಕಲ್ಲು ಗಣಿಗಾರಿಕೆಗಳು ವರದಿ ಜಾರಿಯಾದ ಐದು ವರ್ಷಗಳ ಒಳಗಾಗಿ ಮುಚ್ಚಲ್ಪಡಬೇಕಾಗುತ್ತದೆ. ಈ ನಿಯಮ ಅಗತ್ಯವಾಗಿ ಬೇಕಾಗಿದೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿಯ ಸೂಕ್ಷö್ಮ ಪರಿಸರ ವಲಯಕ್ಕೆ ಒಳಪಟ್ಟ ಗ್ರ‍್ರಾಮಗಳ ಜನತೆಗೆ “ಆರ್ಥಿಕ ಪ್ರೋತ್ಸಾಹ ಧನ”ವನ್ನು ನೀಡಲಾಗುತ್ತದೆ. ಆದರೆ, ಇಂತಹ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಯತ್ನ ನಡೆಸಿಲ್ಲ. ಕೊಡಗಿನ ಪರಿಸರವನ್ನು ಟೌನ್ ಶಿಪ್‌ನಿಂದ, ಮಾರಕ ಯೋಜನೆಗಳಿಂದ ತಡೆಗಟ್ಟುವ ಸಲುವಾಗಿ ಇಡೀ ಜಿಲ್ಲೆಗೆ ಯೋಜನೆಯನ್ನು ಅನ್ವಯಿಸಬೇಕು ಮತ್ತು ಇಲ್ಲಿನ ನಿವಾಸಿಗಳೆಲ್ಲರಿಗೂ ಆರ್ಥಿಕ ಪ್ರೋತ್ಸಾಹ ಧನ ದೊರಕುವಂತಾಗಬೇಕು ಎಂದು ಸಿ.ಪಿ.ಮುತ್ತಣ್ಣ ತಿಳಿಸಿದರು.
ಕೊಡಗಿನ ಭೂದೃಶ್ಯವು ಅನಿಯಂತ್ರಿತ ನಗರೀಕರಣದಿಂದ ಹಾನಿಗೊಳಗಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಾಣಿಜ್ಯ ಉದ್ದೇಶದ ಭೂ ಪರಿವರ್ತನೆ ಹಾಗೂ ಅತಿಯಾದ ನಗರೀಕರಣಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಕೊಡಗಿನಲ್ಲಿ ಸ್ಥಳೀಯ ಸಮುದಾಯಗಳನ್ನು ಹೊರತುಪಡಿಸಿ ಇತರರು ದೊಡ್ಡ ಪ್ರಮಾಣದಲ್ಲಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯಲು ಬಲವಾದ ನಿರ್ಬಂಧಗಳನ್ನು ವಿಧಿಸಬೇಕು. ಭೂ ಮಾರಾಟವನ್ನು ಜಮ್ಮಾ ಹಿಡುವಳಿದಾರರು ಹಾಗೂ ಗುರುತಿಸಲ್ಪಟ್ಟ ಸ್ಥಳೀಯರಿಗೆ ಸೀಮಿತಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು.
ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ಕೈಗೊಳ್ಳಲು ಉದ್ದೇಶಿಸಿರುವ ಸುಮಾರು 94 ಎಕರೆ ವಿಸ್ತೀರ್ಣದ ಬೃಹತ್ ಯೋಜನೆಯನ್ನು ಮರುಪರಿಶೀಲಿಸಬೇಕು. ಇಂತಹ ಯೋಜನೆ ಕೊಡಗಿನ ಪರಿಸರ ಮತ್ತು ವಿಶೇಷವಾಗಿ ಮಡಿಕೇರಿ ಜನತೆಗೆ ಭವಿಷ್ಯದಲ್ಲಿ ಸಮಸ್ಯೆ ಉಂಟು ಮಾಡಬಹುದು.
ಅದೇ ರೀತಿ ಪೊನ್ನಂಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಘೋಷಿಸುವ ಹಾಗೂ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ವ್ಯಾಪ್ತಿಗೆ ಸೇರಿಸುವ ಪ್ರಸ್ತಾವನೆಯನ್ನು ಮರುಪರಿಶೀಲಿಸಬೇಕು. ಇದರಿಂದ ನಗರೀಕರಣಕ್ಕೆ ಮತ್ತಷ್ಟು ಉತ್ತೇಜನ ದೊರೆತು ಸ್ಥಳೀಯ ಸಮುದಾಯಗಳು ಅಂಚಿಗೆ ಸರಿಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ಕೊಡಗಿನ ಜನರಿಗೆ ಪರಿಸರ ಸೇವೆಗಳಿಗೆ ಸೂಕ್ತ ಪ್ರತಿಫಲ ದೊರೆಯುವ ವ್ಯವಸ್ಥೆ ರೂಪಿಸಬೇಕು. ಕಾಫಿ ಮತ್ತು ಮೆಣಸಿಗೆ ಉತ್ತಮ ಬೆಲೆ ದೊರೆಯುವಂತೆ ಪರಿಣಾಮಕಾರಿ ಕಾರ್ಯವಿಧಾನಗಳನ್ನು ಜಾರಿಗೆ ತರಬೇಕು. ಇದರೊಂದಿಗೆ ಮಾನವ- ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕರ್ನಾಟಕ ಅರಣ್ಯ ಇಲಾಖೆ ಸೂಕ್ತ ಮಾರ್ಗಸೂಚಿ ರೂಪಿಸಬೇಕು. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.
ಕೊಡಗಿನ ಮೂಲಕ ಬಹುಪಥ ಹೆದ್ದಾರಿಗಳು ಹಾಗೂ ರೈಲು ಮಾರ್ಗಗಳನ್ನು ನಿರ್ಮಿಸುವ ಪ್ರಸ್ತಾವನೆಗಳನ್ನು ಕೈಬಿಡಬೇಕು. ಮೈಸೂರು-ಕುಶಾಲನಗರ ರೈಲ್ವೆ ಯೋಜನೆಯನ್ನೂ ಕೈಬಿಟ್ಟು, ಆ ಹಣವನ್ನು ಕೊಡಗಿನ ಸುಸ್ಥಿರ ಅಭಿವೃದ್ಧಿಗೆ ಬಳಸಬೇಕು. ಕೊಡಗಿನಲ್ಲಿ ಮಾಲಿನ್ಯಕಾರಕ ಕೈಗಾರಿಕೆಗಳು ಅಥವಾ ಪರಿಸರಕ್ಕೆ ಹಾನಿಕಾರಕ ಸ್ಥಾವರಗಳ ಸ್ಥಾಪನೆಗೆ ನಿಷೇಧ ಹೇರಬೇಕು. ಜಿಲ್ಲೆಯ ಜನರಿಗೆ 24 ಗಂಟೆ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಫ್ರಾಂಕ್ಲಿನ್, ಗೋಪಿನಾಥ್ ತಿಮ್ಮಯ್ಯ ಹಾಗೂ ಶಾನ್ ಬೋಪಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.28 : ಮಡಿಕೇರಿ ದಸರಾ ಸಮಿತಿ ನಗರದ ಇತಿಹಾಸ ಪ್ರಸಿದ್ಧ ಪೇಟೆ ಶ್ರೀ ರಾಮ ಮಂದಿರದಲ್ಲಿ…

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.