
ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು ಪೊಲೀಸ್ ಉಪಾಧೀಕ್ಷಕರು ಹಾಗೂ ಮೂವರು ಪೊಲೀಸ್ ನಿರೀಕ್ಷಕರನ್ನು ಅಭಿನಂದಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಉತ್ತಮ ಕಾರ್ಯಕ್ಷಮತೆ, ಕರ್ತವ್ಯನಿಷ್ಠೆ ಹಾಗೂ ಜವಾಬ್ದಾರಿಯುತ ಸೇವೆಯನ್ನು ಪರಿಗಣಿಸಿ, ಆರು ಮಂದಿ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಇಂದು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಅಧಿಕಾರಿಗಳ ಉತ್ತಮ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದ ಎಸ್ಪಿ ಬಿಂದುಮಣಿ, ಇದೇ ರೀತಿಯ ವೃತ್ತಿಪರತೆ ಮತ್ತು ಬದ್ಧತೆಯಿಂದ ಮುಂದೆಯೂ ಸಾರ್ವಜನಿಕರ ಸುರಕ್ಷತೆ ಹಾಗೂ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರೋತ್ಸಾಹಿಸಿದರು. ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿರುವುದು ಇತರ ಪೊಲೀಸ್ ಸಿಬ್ಬಂದಿಗೂ ಮತ್ತಷ್ಟು ಉತ್ಸಾಹ ಹಾಗೂ ಪ್ರೇರಣೆ ನೀಡಲಿದೆ.









