Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಒತ್ತಾಯಿಸಿ ಕೊಡಗು ಕಾಂಗ್ರೆಸ್ ಪ್ರತಿಭಟನೆ*
  • *ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*
  • *ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*

ಸೆಪ್ಟೆಂಬರ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.1 : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ (ಮಲ ಹೊರುವ ಕಾರ್ಮಿಕರು) ಸಮಗ್ರ ಸಮೀಕ್ಷೆ, ಗುರುತಿಸುವಿಕೆ, ಪುನರ್ವಸತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಆ.24ರಿಂದ ಸೆ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಜಾಥಾ ಇಂದು ಕೊಡಗು ಜಿಲ್ಲೆಯನ್ನು ತಲುಪಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿಪತ್ರ ಸಲ್ಲಿಸಿದರು. ಪಿ.ಇ.ಎಂ.ಎಸ್.ಆರ್. ಕಾಯ್ದೆ 2013ರಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ ಸಮಗ್ರ ಹಾಗೂ ಪಾರದರ್ಶಕ ಸಮೀಕ್ಷೆ ನಡೆಸಿ, ಗುರುತಿಸಲ್ಪಟ್ಟ ಪ್ರತಿಯೊಬ್ಬರಿಗೂ ಸಂಪೂರ್ಣ ಪುನರ್ವಸತಿ ಕಲ್ಪಿಸಬೇಕು ಎಂದು ಸಮಿತಿಯ ಪ್ರಮುಖರು ಒತ್ತಾಯಿಸಿದರು. ಮನೆ ಅಥವಾ ನಿವೇಶನವಿಲ್ಲದ ಕುಟುಂಬಗಳಿಗೆ ಉಚಿತ ನಿವೇಶನ ಅಥವಾ ಪಕ್ಕಾ ಮನೆ, ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ಶಾಶ್ವತ ಪರ್ಯಾಯ ಉದ್ಯೋಗ, ಸ್ವಯಂ ಉದ್ಯೋಗಕ್ಕೆ ಕೌಶಲ್ಯ ತರಬೇತಿ, ಉಪಕರಣ, ಬಂಡವಾಳ ಹಾಗೂ ಆರ್ಥಿಕ ನೆರವು ನೀಡಬೇಕು. ಗುರುತಿಸಲ್ಪಟ್ಟ ಕುಟುಂಬಗಳಿಗೆ ಆರೋಗ್ಯ ವಿಮೆ ಮತ್ತು ಆರೋಗ್ಯ ಕಾರ್ಡ್, ಕೆಲಸ ಮಾಡಲು ಅಸಮರ್ಥರಿಗೆ ಮಾಸಿಕ ಪಿಂಚಣಿ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ ವಸತಿ ಶಾಲೆ, ಉನ್ನತ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ವಿದ್ಯಾರ್ಥಿವೇತನ ಕಲ್ಪಿಸಬೇಕು. ಸಫಾಯಿಕರ್ಮಚಾರಿ ಮತ್ತು ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ ವಸತಿ ಪ್ರದೇಶಗಳಲ್ಲಿ ಮಕ್ಕಳಿಗಾಗಿ ‘ಭೀಮ ಶಾಲೆ’ ಕಲಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಮಲದಗುಂಡಿಗಳಲ್ಲಿ ಉಸಿರುಗಟ್ಟಿ ಮೃತಪಟ್ಟವರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ಹಾಗೂ ಸೂಕ್ತ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಬೇಕು. ವೃತ್ತಿಯಲ್ಲಿ ಮುಂದುವರಿಯಲು ಇಚ್ಛಿಸುವವರಿಗೆ ಆಧುನಿಕ ಯಂತ್ರೋಪಕರಣಗಳನ್ನು ಉಚಿತವಾಗಿ ನೀಡಿ ತರಬೇತಿ ನೀಡಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳ ನಿರ್ವಹಣಾ ಕಾರ್ಯಗಳನ್ನು ಗುರುತಿಸಲ್ಪಟ್ಟ ಸ್ಕ್ರಾವೆಂಜರ್ ಕುಟುಂಬಗಳಿಗೆ ನೀಡಬೇಕು ಎಂದು ಮನವಿ ಮಾಡಿದರು. ಕರ್ನಾಟಕ ರಾಜ್ಯ ಸಫಾಯಿಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ಅಗತ್ಯ ಅನುದಾನ ಒದಗಿಸಿ, ಸ್ಕಾçವೆಂಜರ್ ಗಳ ಪುನರ್ವಸತಿಗಾಗಿ ಪ್ರತ್ಯೇಕ ಕೋಶ ರಚಿಸಬೇಕು. ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಎಲ್ಲ ಬೇಡಿಕೆಗಳ ಕುರಿತು ಚರ್ಚಿಸಲು ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ ರಾಜ್ಯ ಮೇಲ್ವಿಚಾರಣಾ ಸಮಿತಿಯ ಸಭೆಯನ್ನು ತಕ್ಷಣ ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ರಾಜ್ಯ ಸಂಚಾಲಕ ಡಾ.ಕೆ.ವಿ.ಓಬಳೇಶ, ಸದಸ್ಯ ಡಾ.ಆರ್.ವಿ.ಚಂದ್ರಶೇಖರ್ ಹಾಗೂ ಕೊಡಗು ಜಿಲ್ಲಾಧ್ಯಕ್ಷ ರಂಗಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಒತ್ತಾಯಿಸಿ ಕೊಡಗು ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 1, 2026

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.1 : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ (ಮಲ ಹೊರುವ ಕಾರ್ಮಿಕರು) ಸಮಗ್ರ ಸಮೀಕ್ಷೆ, ಗುರುತಿಸುವಿಕೆ, ಪುನರ್ವಸತಿ…

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.