
ಮಡಿಕೇರಿ NEWS DESK ಸೆ.1 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಲದ್ವಾನಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ಉತ್ತರಾಖಂಡ ಪೊಲೀಸರು ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್ಐಆರ್ ದಾಖಲಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧದ ಪ್ರಕರಣವು ದುರುದ್ದೇಶಪೂರಿತವಾಗಿದ್ದು, ಸೇಡಿನ ರಾಜಕಾರಣದ ಭಾಗವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಈ ಸಂಬoಧ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರ ಪತಿಗಳಿಗೆ ಮನವಿ ಸಲ್ಲಿಸಿ, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ವೀಕ್ಷಕ ಬ್ರಿಜೇಶ್, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯoಡ ವೀಣಾ ಅಚ್ಚಯ್ಯ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಸದಸ್ಯ ಆರ್.ಪಿ.ಚಂದ್ರಶೇಖರ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಟಾಟು ಮೊಣ್ಣಪ್ಪ, ರುಬೀನಾ, ಮಿನಾಜ್ ಪ್ರವೀಣ್, ಮೋಹನ್ ವಿ.ಜಿ, ತೆನ್ನಿರ ಮೈನಾ, ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಟಾಟು ಮೊಣ್ಣಪ್ಪ, ಕೆ.ಜಿ.ಪೀಟರ್, ಪ್ರಭು ರೈ, ದಿನೇಶ್ ಕೆ.ಆರ್., ಶೌಕತ್ ಆಲಿ ಸೇರಿದಂತೆ ಪಕ್ಷದ ವಿವಿಧ ಬ್ಲಾಕ್ ಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.









