
ಮಡಿಕೇರಿ ಸೆ.4 NEWS DESK : ಹೆರವಾನಾಡು ಗ್ರಾಮದ ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹಗ್ಗ ಜಗ್ಗಾಟ, ಓಟ, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು ಸೇರಿದಂತೆ ಸಾಂಪ್ರದಾಯಿಕ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳು, ಮಹಿಳೆಯರು, ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ಕ್ರೀಡಾ ಚಟುವಟಿಕೆಗಳನ್ನು ಸಂಯೋಜಿಸುವ ಮೂಲಕ ಯುವ ಪೀಳಿಗೆಗೆ ಕೊಡವ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಪ್ರಯತ್ನ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿಯ ಅಧ್ಯಕ್ಷರಾದ ಚಂದ್ರ ಉಡೋತ್, ಕಾರ್ಯದರ್ಶಿ ನವೀನ್, ಖಜಾಂಚಿ ಶಬರಿ, ಸಹ ಖಜಾಂಚಿ ದಿನೇಶ್, ಪದಾಧಿಕಾರಿಗಳಾದ ರಘು, ಜಗನ್ನಾಥ್, ರಾಜು, ಕಿಶು, ಮಾಜಿ ಕಾರ್ಯದರ್ಶಿ ಕೇಶಿನಿ ಹಾಗೂ ಊರಿನ ಹಿರಿಯರು, ಯುವಕರು ಹಾಗೂ ಮಕ್ಕಳು ಭಾಗವಹಿಸಿ ಕೈಲ್ ಪೊಳ್ದ್ ಆಚರಣೆಯನ್ನು ಯಶಸ್ವಿಗೊಳಿಸಿದರು.








