Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
  • *ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಾದಾಪುರ, NEWS DESK ಸೆ. 5: ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ವಿಶಾಖಪಟ್ಟಣಂ ಹಾಗೂ ಗೋದಾವರಿ ಗುಡ್ಡಗಾಡು ಪ್ರಾಂತ್ಯಗಳ ಮಾದರಿಯಲ್ಲಿ ಸಂವಿಧಾನದ 5ನೇ ಪರಿಚ್ಛೇದದ ಅಡಿಯಲ್ಲಿ ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡುವುದೊಂದೇ ಆದಿಮಸಂಜಾತ ಕೊಡವರು ಎದುರಿಸುತ್ತಿರುವ ಭೌಗೋಳಿಕ-ರಾಜಕೀಯ ದುರಂತಕ್ಕೆ ಪರಿಹಾರ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದರು.
ಮಾದಾಪುರದಲ್ಲಿ ಶನಿವಾರ ಆಯೋಜಿಸಿದ್ದ ಸಿಎನ್‌ಸಿಯ 2ನೇ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆದಿಮಸಂಜಾತ ಕೊಡವರನ್ನು ಸಂವಿಧಾನದ ಅಡಿಯಲ್ಲಿ ವಿಶಿಷ್ಟ ಪ್ರಕೃತಿ ಆರಾಧಕ ಧಾರ್ಮಿಕ ಸಮುದಾಯವೆಂದು ಗುರುತಿಸಿ, ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಸ್ವಯಂ-ಆಡಳಿತದ ಭದ್ರತೆ ನೀಡಿದರೆ ಮಾತ್ರ ಕೊಡವರ ಜಮೀನು, ಜಲ, ಸಂಸ್ಕೃತಿ, ಪರಂಪರೆ, ಪರಿಸರ ಮತ್ತು ಜೀವವೈವಿಧ್ಯವನ್ನು ರಕ್ಷಿಸಲು ಸಾಧ್ಯ ಎಂದರು.
ಕೊಡವರ ಪವಿತ್ರ ಕ್ಷೇತ್ರಗಳಾದ ಮಂದ್, ವಿಶಿಷ್ಟ ಕೊಡವ ವಂಶಾವಳಿ ಹಾಗೂ ಸಾಂಪ್ರದಾಯಿಕ ತಾಯ್ನಾಡಿನ ಇತಿಹಾಸವನ್ನು ಮುನ್ನೆಲೆಗೆ ತರಬೇಕು. 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ಪ್ರತ್ಯೇಕವಾಗಿ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.
ಸಿಎನ್‌ಸಿ ವತಿಯಿಂದ ಕೊಡವ ಪ್ರಾಂತದಾದ್ಯಂತ ಶಾಂತಿಯುತ ಮಾನವ ಸರಪಳಿ ಮೂಲಕ ಕೊಡವ ಜನಾಂಗೀಯ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸಂವಿಧಾನದ 371ನೇ ವಿಧಿ ಹಾಗೂ 5ನೇ ಮತ್ತು 6ನೇ ಪರಿಚ್ಛೇದಗಳ ಅಡಿಯಲ್ಲಿ ಸ್ವಯಂ ಆಡಳಿತ, ಮೂಲನಿವಾಸಿ ಸಮುದಾಯವಾಗಿ ಸಾಂವಿಧಾನಿಕ ರಕ್ಷಣೆ ಮತ್ತು ವಿಶೇಷ ಮನ್ನಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎನ್‌ಸಿ ಮುಂದಿಟ್ಟಿದೆ.
ಕೊಡವರ ಸಾಂಪ್ರದಾಯಿಕ ‘ಕೋವಿ-ತೋಕ್’ ಸಂಪ್ರದಾಯದ ಮುಂದುವರಿಕೆಗೆ ಸಂವಿಧಾನದ 25, 26 ಮತ್ತು 28ನೇ ವಿಧಿಗಳ ಅಡಿಯಲ್ಲಿ ರಕ್ಷಣೆ ನೀಡಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಿರುವ ‘ಸಂಘ’ ಕ್ಷೇತ್ರದ ಮಾದರಿಯಲ್ಲಿ ಕೊಡವರಿಗೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಪ್ರತ್ಯೇಕ ಶಾಸಕಾಂಗ ಪ್ರಾತಿನಿಧ್ಯ ನೀಡಬೇಕು ಎಂದು ನಾಚಪ್ಪ ಆಗ್ರಹಿಸಿದರು.
ಕಾವೇರಿ ನದಿಯ ನೀರಿನಲ್ಲಿ ಕೊಡವರಿಗೆ ಸಿಂಹಪಾಲು ದೊರೆಯಬೇಕು. ತಲಕಾವೇರಿಯನ್ನು ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸಬೇಕು. ದೇವಟ್‌ಪರಂಬು ನರಮೇಧ ನಡೆದ ಸ್ಥಳ ಸೇರಿದಂತೆ ಕೊಡವರ ಐತಿಹಾಸಿಕ ದುರಂತಗಳ ನೆನಪಿಗಾಗಿ ಅಂತರರಾಷ್ಟ್ರೀಯ ನರಮೇಧ ಸ್ಮಾರಕ ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು.
ಕೊಡವರ ಪವಿತ್ರ ಮಂದ್‌ಗಳು, ದೇವರಕಾಡುಗಳು ಹಾಗೂ ಇತರ ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಬೇಕು. ಕೊಡವ ತಕ್ಕ್ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಐತಿಹಾಸಿಕವಾಗಿ ಕೊಡವರಿಂದ ಕಳೆದುಹೋದ ಪೂರ್ವಜರ ಭೂಮಿಯನ್ನು ಮೂಲನಿವಾಸಿಗಳ ಭೂಹಕ್ಕುಗಳ ಆಧಾರದ ಮೇಲೆ ಮರಳಿ ಕೊಡವರಿಗೇ ಹಸ್ತಾಂತರಿಸಬೇಕು ಎಂದು ಅವರು ಆಗ್ರಹಿಸಿದರು.
*ಕೊಡವ ಗುರುತಿನ ಪ್ರತ್ಯೇಕ ದಾಖಲಾತಿಗೆ ಒತ್ತಾಯ*
1871–72ರಿಂದ 1941ರ ಜನಗಣತಿಯವರೆಗೆ ಕೊಡವರನ್ನು ಪ್ರತ್ಯೇಕ ಜನಾಂಗೀಯ ಸಮುದಾಯವೆಂದು ಗುರುತಿಸಲಾಗುತ್ತಿತ್ತು. 1941ರ ನಂತರ ಈ ಅಸ್ಮಿತೆಯನ್ನು ಅಳಿಸಿ ದೊಡ್ಡ ಸಮುದಾಯಗಳೊಂದಿಗೆ ವಿಲೀನಗೊಳಿಸಲಾಗಿದ್ದು, ಇದರಿಂದ ಕೊಡವರು ತಮ್ಮ ಅಸ್ಮಿತೆಯನ್ನು ಕಳೆದುಕೊಳ್ಳುವಂತಾಯಿತು ಎಂದು ನಾಚಪ್ಪ ಹೇಳಿದರು.
1956ರವರೆಗೆ ‘ಪಾರ್ಟ್ ಸಿ’ ಕೊಡಗು ರಾಜ್ಯವಾಗಿ ಅಸ್ತಿತ್ವದಲ್ಲಿತ್ತು. ರಾಜ್ಯ ಪುನರ್ವಿಂಗಡಣಾ ಕಾಯ್ದೆಯಡಿ ಕೊಡಗನ್ನು ಕರ್ನಾಟಕಕ್ಕೆ ಸೇರಿಸಿರುವುದು ಕೊಡವರ ಪಾಲಿನ ಐತಿಹಾಸಿಕ ಅನ್ಯಾಯವಾಗಿದ್ದು, 1941ರ ಜನಗಣತಿಯಲ್ಲಿ ಕೊಡವ ಗುರುತಿನ ನಾಶ ಹಾಗೂ 1956ರ ವಿಲೀನವು ಕೊಡವರ ಅಸ್ಮಿತೆಗೆ ಗಂಭೀರ ಹೊಡೆತ ನೀಡಿದೆ ಎಂದು ಅವರು ಆರೋಪಿಸಿದರು.
*ಭೂ ಪರಿವರ್ತನೆ ವಿರುದ್ಧ ಆಕ್ರೋಶ*
ಕರ್ನಾಟಕ ಭೂ ಕಂದಾಯ ಹಾಗೂ ಭೂ ಸುಧಾರಣಾ ಕಾಯ್ದೆಗಳಿಗೆ ಮಾಡಲಾದ ತಿದ್ದುಪಡಿಗಳ ಪರಿಣಾಮ ಕೊಡಗಿನಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಭೂ ಪರಿವರ್ತನೆ ಹೆಚ್ಚಾಗಿದೆ. ಹೊರಗಿನ ಬಂಡವಾಳಶಾಹಿಗಳು, ವ್ಯಾಪಾರ ಸಂಸ್ಥೆಗಳು ಟೌನ್‌ಶಿಪ್‌, ರೆಸಾರ್ಟ್‌ಗಳು ಮತ್ತು ಲೇಔಟ್‌ಗಳಿಗಾಗಿ ಭೂಮಿ ಖರೀದಿಸುತ್ತಿರುವುದರಿಂದ ಕಾವೇರಿ ಜಲಮೂಲಗಳು, ಕೃಷಿ ಭೂಮಿ, ಕಾಫಿ ತೋಟಗಳು ಹಾಗೂ ನೈಸರ್ಗಿಕ ಪರಿಸರಕ್ಕೆ ಅಪಾಯ ಎದುರಾಗಿದೆ ಎಂದು ಅವರು ದೂರಿದರು.
ಕೊಡಗಿನ ವಿವಿಧ ಭಾಗಗಳಲ್ಲಿ ಬೆಟ್ಟಗುಡ್ಡಗಳನ್ನು ಕೊರೆದು, ಬ್ಲಾಸ್ಟಿಂಗ್ ನಡೆಸಿ ನೈಸರ್ಗಿಕ ಹಳ್ಳ, ಕೊಳ್ಳ, ತೊರೆ ಹಾಗೂ ಸಿಹಿನೀರಿನ ಬುಗ್ಗೆಗಳಿಗೆ ಹಾನಿ ಮಾಡಲಾಗುತ್ತಿದೆ. ಕೊಡಗಿನ ಪರಿಸರ ಮತ್ತು ಕಾವೇರಿ ಜಲಾನಯನ ಪ್ರದೇಶವನ್ನು ಸಂರಕ್ಷಿಸಲು ವಾಣಿಜ್ಯ ಉದ್ದೇಶದ ಭೂ ಪರಿವರ್ತನೆಗೆ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದರು.
ಕೊಡವ ನೆಲ, ಜಲ, ಪರಿಸರ ಹಾಗೂ ಜೀವವೈವಿಧ್ಯವನ್ನು ರಕ್ಷಿಸಲು ಕೊಡವಲ್ಯಾಂಡ್‌ಗೆ ಸ್ವಯಂ-ಶಾಸಕಾಂಗ ಭದ್ರತೆಯೊಂದಿಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಈ ಉದ್ದೇಶದಿಂದ ಸಿಎನ್‌ಸಿ ಜನಜಾಗೃತಿ ಆಂದೋಲನವನ್ನು ಮುಂದುವರಿಸಲಿದೆ ಎಂದು ನಾಚಪ್ಪ ಹೇಳಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ್ದವರು ಗುರು-ಕಾರೋಣರು, ಸೂರ್ಯ-ಚಂದ್ರರು, ಭೂಮಿತಾಯಿ, ವನದೇವತೆ, ಜಲದೇವತೆ ಕಾವೇರಿ ಹಾಗೂ ಭಾರತದ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಸಿಎನ್‌ಸಿಯ ಹೋರಾಟಕ್ಕೆ ಬೆಂಬಲಿಸುವ ಸಂಕಲ್ಪ ಮಾಡಿದರು. ರಾಷ್ಟ್ರಗೀತೆ ‘ಜನ ಗಣ ಮನ’ ಗಾಯನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ಉದ್ದಿನಾಡಂಡ ಮುತ್ತಕ್ಕಿ, ಪಾಸುರ ರಜನಿ ರಾಜ, ಮೇದರ ಪ್ರತೀಕ ಕಂಠಿ, ಕನ್ನಿಕಂಡ ಜಾನಕಿ, ಬಾಳೆಯಡ ಪೊನ್ನಮ್ಮ, ಮಂಡಿರ ಪೂವಮ್ಮ ಸೇರಿದಂತೆ ಹಲವು ಪ್ರಮುಖರು ಹಾಗೂ ಸಿಎನ್‌ಸಿ ಬೆಂಬಲಿಗರು ಪಾಲ್ಗೊಂಡಿದ್ದರು.
*ಸೆ.19ರಂದು ಚೆಟ್ಟಳ್ಳಿಯಲ್ಲಿ ಮಾನವ ಸರಪಳಿ*
ಸಿಎನ್‌ಸಿ ವತಿಯಿಂದ ಮುಂದಿನ ಮಾನವ ಸರಪಳಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 19ರಂದು ಚೆಟ್ಟಳ್ಳಿಯಲ್ಲಿ ಆಯೋಜಿಸಲಾಗುವುದು ಎಂದು  ನಾಚಪ್ಪ ಹೇಳಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 5: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ, ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ…

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.