Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜನಪದ ಸಾಹಿತ್ಯ ಎಲ್ಲಾ ಸಾಹಿತ್ಯದ ತಾಯಿಬೇರು: ಡಾ. ಜೆ. ಸೋಮಣ್ಣ*
  • *ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ*
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*
  • *ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು: ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*
  • *ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*
  • *ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*
  • *ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*
  • *ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*
  • *ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 19, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಸೆ.19: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ರೂ.59,53,671 ನಿವ್ವಳ ಲಾಭ ಗಳಿಸಿದೆ.

ಶನಿವಾರ ಇಲ್ಲಿನ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಂಘದ ಅಧ್ಯಕ್ಷ ಜೆರ್ಮಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.

ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ ಜೆರ್ಮಿ ಡಿಸೋಜ ಅವರು ಸಂಘದ ಪ್ರಗತಿಯ ಕುರಿತು ಮಾಹಿತಿ ನೀಡಿದರು. 2025-26ನೇ ಸಾಲಿನಲ್ಲಿ ಸಂಘದಲ್ಲಿ 1,999 ಮಂದಿ ಸದಸ್ಯರಿದ್ದು, ಸದಸ್ಯರ ಪಾಲು ಹಣ ರೂ.8,62,72,280 ಹಾಗೂ ಸರ್ಕಾರದ ಪಾಲು ಹಣ ರೂ.78,000 ಇದೆ ಎಂದು ತಿಳಿಸಿದರು.

ಸಂಘದ ಸಾಲ ಮರುಪಾವತಿ ಪ್ರಮಾಣ ಶೇ.98.50ರಷ್ಟಿದ್ದು, ಸರ್ಕಾರದ ಬಡ್ಡಿ ರಿಯಾಯಿತಿ ಯೋಜನೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಅಧ್ಯಕ್ಷರ ಮಾತಿಗೆ ಪ್ರತಿಕ್ರಿಯಿಸಿ ಮಾತನಾಡಿದ ಚಂದ್ರಶೇಖರ್ ಅವರು, ಸಂಘದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಶಿಕ್ಷಣದಲ್ಲಿ ಪ್ರತಿಭಾ ಪುರಸ್ಕಾರದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಪಡೆಯುವ ಮಕ್ಕಳಲ್ಲಿ ಮೊದಲ ಮೂರು ಸ್ಥಾನ ಪಡೆಯುವವರಿಗೆ ಪ್ರತಿಭಾ ಪುರಸ್ಕಾರ ನೀಡಬೇಕು ಎಂದು ಆಗ್ರಹಿಸಿದರು. ಅವರ ಮಾತಿಗೆ ಸದಸ್ಯರಾದ ಬಿ.ಜಿ.ಜವಹರ್, ಕರುಣ ಮತ್ತಿತರರು ಧ್ವನಿಗೂಡಿಸಿದರು.

ಈ ಹಿನ್ನೆಲೆಯಲ್ಲಿ ಸಂಘದ ಸದಸ್ಯರ ಮಕ್ಕಳು ಸರ್ಕಾರಿ ಕಾಲೇಜುಗಳಲ್ಲಿ ಪದವಿ ವ್ಯಾಸಂಗದಲ್ಲಿ ಮೊದಲ ಎರಡು ಸ್ಥಾನ ಪಡೆಯುವವರಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನಿಸಲಾಯಿತು.

ಸಂಘದ ಬೆಳವಣಿಗೆ ಮತ್ತು ಲಾಭದ ದೃಷ್ಟಿಯಿಂದ ಪ್ರತಿಯೊಬ್ಬ ಸದಸ್ಯರು ಸಂಘದ ವಿವಿಧ ಶಾಖೆಗಳಲ್ಲಿ ಕನಿಷ್ಠ ರೂ.5,000 ವಹಿವಾಟು ನಡೆಸಬೇಕು ಎಂದು ಜೆರ್ಮಿ ಡಿಸೋಜ ಮನವಿ ಮಾಡಿದರು.

ಸಂಘದ ಹಿರಿಯ ಸದಸ್ಯ ಬಾಲಕೃಷ್ಣ ರೈ ಮಾತನಾಡಿ, ಕಳೆದ ಮಹಾಸಭೆಯಲ್ಲಿ ಅನೇಕ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸಮಜಾಯಿಷಿ ಉತ್ತರಗಳನ್ನು ಪಡೆದಿದ್ದೇವೆ. ಆದರೆ ಅವುಗಳನ್ನು ಯಾವುದೇ ದಾಖಲಾತಿ ಪುಸ್ತಕದಲ್ಲಿ ನಮೂದಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಬಿ.ಜಿ.ಜವಹರ್ ಅವರು, ಇತರ ಬ್ಯಾಂಕುಗಳಲ್ಲಿರುವ ರೀತಿಯಲ್ಲಿ ಎರಡನೇ ಹಾಗೂ ನಾಲ್ಕನೇ ಶನಿವಾರ ರಜೆ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆಯದಿದ್ದರೂ, ನಾವು ರಜೆ ಕೇಳಿದ್ದೇವೆ ಎಂಬ ರೀತಿಯಲ್ಲಿ ನಿರ್ಣಯ ನಮೂದಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಲೋಪವನ್ನು ಸರಿಪಡಿಸಿಕೊಳ್ಳುವ ಬಗ್ಗೆ ಅಧ್ಯಕ್ಷರು ಸಮಜಾಯಿಷಿ ನೀಡಿದರು.

ಸಂಘದ ಹಿರಿಯ ಸದಸ್ಯ ಕೆ.ಡಿ.ರಾಮಯ್ಯ ಮಾತನಾಡಿ, ಸಂಘದ ರೂ.59 ಲಕ್ಷ ಲಾಭದಲ್ಲಿ ರೂ.28 ಲಕ್ಷ ಬಾಡಿಗೆ ರೂಪದಲ್ಲಿ ಬಂದಿದೆ. ಉಳಿದ ಲಾಭಾಂಶ ಸಾಲದು. ಸಂಘದ ಆರ್ಥಿಕ ವ್ಯವಹಾರವನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ವಿವರಣೆ ನೀಡಿದ ಜೆರ್ಮಿ ಡಿಸೋಜ ಅವರು, ರೂ.19 ಲಕ್ಷ ಮಾತ್ರ ಬಾಡಿಗೆ ಬರುತ್ತಿದ್ದು, ರೂ.46 ಲಕ್ಷ ಆಡಳಿತಾತ್ಮಕ ವೆಚ್ಚವಾಗುತ್ತಿದೆ. ಈಗಾಗಲೇ ಕಾನ್‌ಬೈಲ್‌ನಲ್ಲಿ ರೂ.25 ಲಕ್ಷ ವ್ಯಯಿಸಿ ಗೋದಾಮು ನಿರ್ಮಿಸಲಾಗಿದೆ. ಸಂಘದ ಆರು ಶಾಖೆಗಳ ಮುಖಾಂತರ ವಾರ್ಷಿಕ ರೂ.15 ಲಕ್ಷ ಲಾಭ ಗಳಿಸಲಾಗುತ್ತಿದೆ ಎಂದು ತಿಳಿಸಿದರು.

ನಿರಖು ಠೇವಣಿಗಳ ಬಡ್ಡಿ ದರ ಕಡಿಮೆಯಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ನಿರಖು ಠೇವಣಿಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದರು. ಈಗಾಗಲೇ ಸಂಘದ ಕಲ್ಲೂರು ಶಾಖೆಯನ್ನು ನವೀಕರಣಗೊಳಿಸಿ ಗೋದಾಮು ಮತ್ತು ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕಾನ್‌ಬೈಲ್ ಶಾಖೆಯನ್ನು ಕೂಡ ನವೀಕರಣಗೊಳಿಸಿ ಗೋದಾಮು ಹಾಗೂ ಬ್ಯಾಂಕಿಂಗ್ ವ್ಯವಸ್ಥೆ ಆರಂಭಿಸಲಾಗುವುದು ಎಂದರು.

ವಾರ್ಷಿಕ ಮಹಾಸಭೆಯಲ್ಲಿ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.

ಎಸ್‌ಎಸ್‌ಎಲ್‌ಸಿ ವಿಭಾಗದಲ್ಲಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾ, ದೇಚಮ್ಮ ಮತ್ತು ಸೌಮ್ಯ ಎಸ್.ಜೆ. ಅವರು ಮೊದಲ ಮೂರು ಬಹುಮಾನಗಳನ್ನು ಪಡೆದರು.

ಪಿಯುಸಿ ವಿಭಾಗದಲ್ಲಿ ಕಲಾ ವಿಭಾಗದಲ್ಲಿ ರಕ್ಷಿತ ಮತ್ತು ಪಲ್ಲವಿ, ವಾಣಿಜ್ಯ ವಿಭಾಗದಲ್ಲಿ ಅಪ್ರೀನ್ ಮತ್ತು ಯಶವಂತ್ ಕೆ.ಎನ್., ವಿಜ್ಞಾನ ವಿಭಾಗದಲ್ಲಿ ದೀಪಕ್ ಕೆ.ಆರ್. ಮತ್ತು ಶಿಫಾ ಬಹುಮಾನಗಳನ್ನು ಪಡೆದರು.

ಸಭೆಯ ಆರಂಭದಲ್ಲಿ 2025-26ನೇ ಸಾಲಿನಲ್ಲಿ ಮೃತಪಟ್ಟ ಸದಸ್ಯರಿಗೆ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.

ವಿಶೇಷವಾಗಿ ಸಹಕಾರ ರತ್ನ ಎಂ.ಎನ್.ಕೊಮರಪ್ಪ ಅವರ ನಾಲ್ಕು ದಶಕಗಳ ಸಹಕಾರಿ ಸೇವೆಯನ್ನು ಸಂಘದ ಮಾಜಿ ಅಧ್ಯಕ್ಷ ಎನ್.ಸಿ.ಕ್ಲೆವ್ ಪೊನ್ನಪ್ಪ ಸ್ಮರಿಸಿ ಮಾತನಾಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪಿ.ಪಿ.ಉದಯಕುಮಾರ್, ನಿರ್ದೇಶಕರಾದ ಎನ್.ಸಿ.ಪೊನ್ನಪ್ಪ, ಡಿ.ಬಿ.ರಮೇಶ್ ಚಂಗಪ್ಪ, ಕೆ.ಎಸ್.ಮಂಜುನಾಥ್, ಡಿ.ಕೆ.ಗಂಗಾಧರ, ಡಾ.ಶಶಿಕಾಂತ ರೈ, ಕೆ.ಪಿ.ಜಗನ್ನಾಥ್, ಕೆ.ಆರ್.ಮಂಜುನಾಥ್, ಡಿ.ಎಚ್.ಚಂದ್ರಶೇಖರ್, ಬಿ.ಕೆ.ದಯಾನಂದ, ಪಿ.ಪಿ.ಲೀಲಾವತಿ, ಕೆ.ವಿ.ರಮ್ಯ ಹಾಗೂ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೊದಲಿಗೆ ಅಕ್ಷತಾ ಯೋಗೇಶ್ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷ ಕೆ.ಎಸ್.ಮಂಜುನಾಥ್ ಸ್ವಾಗತಿಸಿದರು. ನಿರ್ದೇಶಕ ಡಾ.ಶಶಿಕಾಂತ ರೈ ನಿರೂಪಿಸಿದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನಪದ ಸಾಹಿತ್ಯ ಎಲ್ಲಾ ಸಾಹಿತ್ಯದ ತಾಯಿಬೇರು: ಡಾ. ಜೆ. ಸೋಮಣ್ಣ*

ಸೆಪ್ಟೆಂಬರ್ 19, 2026

*ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ*

ಸೆಪ್ಟೆಂಬರ್ 19, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.19: ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಅಕ್ಟೋಬರ್ 18ರಂದು…

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು: ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 19, 2026

*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*

ಸೆಪ್ಟೆಂಬರ್ 19, 2026

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 2026

*ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*

ಸೆಪ್ಟೆಂಬರ್ 18, 2026

*ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*

ಸೆಪ್ಟೆಂಬರ್ 18, 2026

*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*

ಸೆಪ್ಟೆಂಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.