Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
  • *ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*
  • *ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*
  • *ಕೊಡಗಿನ ಹಸಿರು ಪರಿಸರ ಸಂರಕ್ಷಿಸಿದರೆ ಕಾವೇರಿ ಉಳಿಯಲಿದೆ: ಸಿ.ಪಿ.ಮುತ್ತಣ್ಣ*
  • *ರೂ.7.50 ಕೋಟಿ ಬಿಲ್ ಪಾವತಿಗೆ ಬಾಕಿ : ಸೆ.22 ರಿಂದ ಗುತ್ತಿಗೆದಾರರ ಅಹೋರಾತ್ರಿ ಪ್ರತಿಭಟನೆ*
  • *ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸೆಂಟ್ ಥಾಮಸ್ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ*
  • *ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಕೂಟಿ ಸವಾರನಿಗೆ ಗಾಯ*
  • *ಸುಂಟಿಕೊಪ್ಪದಲ್ಲಿ ಜಾದು ಪ್ರದರ್ಶನಕ್ಕೆ ಜನಮೆಚ್ಚುಗೆ*
  • *ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*

ಸೆಪ್ಟೆಂಬರ್ 19, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.19: ಸಾಹಿತ್ಯಾಭಿರುಚಿ ಬೆಳೆಸಲು ಮತ್ತು ಸಾಹಿತ್ಯ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸಲು ದತ್ತಿನಿಧಿ ಸ್ಥಾಪನೆ ಸಹಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲೂಕು ಹಾಗೂ ಎಂ.ಇ.ಎಸ್. ಪ್ರೌಢಶಾಲೆ, ಮೂರ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲೆಯ ಕಾವೇರಿ ಸಭಾಂಗಣದಲ್ಲಿ ನಡೆದ ಅವರೆಮಾದಂಡ ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ‘ಶಿಕ್ಷಣದ ಬೆಳಕು’ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಹಿತ್ಯ, ಸಮಾಜ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸುವುದು ಉತ್ತಮ ಪರಂಪರೆಯಾಗಿದೆ. ಇಂತಹ ದತ್ತಿನಿಧಿಗಳ ಮೂಲಕ ಸಾಹಿತ್ಯಾಸಕ್ತರಿಗೆ ಹಾಗೂ ಸಮಾಜದ ವಿವಿಧ ವರ್ಗಗಳಿಗೆ ಪ್ರೋತ್ಸಾಹ ನೀಡಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿ ಈಗಾಗಲೇ 3 ಸಾವಿರಕ್ಕೂ ಅಧಿಕ ದತ್ತಿನಿಧಿ ಕಾರ್ಯಕ್ರಮಗಳು ನಡೆದಿದ್ದು, ಕೊಡಗು ಜಿಲ್ಲೆಯಲ್ಲಿ 45 ದತ್ತಿನಿಧಿಗಳು ಸ್ಥಾಪನೆಯಾಗಿವೆ. ಶಾಲಾ-ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು, ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ರೂ.50 ಸಾವಿರ ದತ್ತಿನಿಧಿ ಸ್ಥಾಪಿಸಿರುವುದು ಶ್ಲಾಘನೀಯ ಕಾರ್ಯ ಎಂದರು.

ಅಂಗನವಾಡಿ ಶಿಕ್ಷಕರಿಗಾಗಿ ರೂ.50 ಸಾವಿರ ಮೊತ್ತದ ದತ್ತಿನಿಧಿ ಸ್ಥಾಪಿಸಿದ ಅವರೆಮಾದಂಡ ಶರಣ್ ಪೂಣಚ್ಚ ಅವರು ಮಾತನಾಡಿ, ಕನ್ನಡ ಭಾಷೆ ಹಾಗೂ ಸಾಹಿತ್ಯದ ಉಳಿವು ಮತ್ತು ಬೆಳವಣಿಗೆಗಾಗಿ ಮೂರ್ನಾಡು ಹೋಬಳಿ ಘಟಕ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬೆಗಾಲಿಡುವ ಮಗುವನ್ನು ಸಮಾಜಕ್ಕೆ ಪರಿಚಯಿಸುವವರು ಅಂಗನವಾಡಿ ಶಿಕ್ಷಕರು. ಮಗುವಿನ ಕೈಗೆ ಬಳಪ ಹಿಡಿಸಿ ಅಕ್ಷರ ಕಲಿಸುವ ಮೂಲಕ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರಿಗೆ ಸಣ್ಣ ಕಾಣಿಕೆಯಾಗಿ ಈ ದತ್ತಿನಿಧಿಯನ್ನು ಸ್ಥಾಪಿಸುತ್ತಿರುವುದಾಗಿ ಹೇಳಿದರು.

ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರ ಸೇವೆಯ ಮಹತ್ವವನ್ನು ವಿವರಿಸಿ ದತ್ತಿನಿಧಿ ಸ್ಥಾಪಿಸುವ ಕುರಿತು ತಿಳಿಸಿದಾಗ ಈ ಕಾರ್ಯ ಉತ್ತಮವೆನಿಸಿತು ಎಂದು ಶರಣ್ ಪೂಣಚ್ಚ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು, ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರು ಮಕ್ಕಳಲ್ಲಿ ಜ್ಞಾನದ ಬೀಜ ಬಿತ್ತುವ ಮಹತ್ವದ ಸೇವೆ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸಾಹಿತ್ಯಾಭಿರುಚಿ ಬೆಳೆಸುವ ಉದ್ದೇಶದಿಂದ ದತ್ತಿನಿಧಿ ಸ್ಥಾಪಿಸಿರುವುದು ಶ್ಲಾಘನಾರ್ಹ ಎಂದರು.

ಮೂರ್ನಾಡು ಹೋಬಳಿ ಘಟಕದಲ್ಲಿ ಇದು ಎರಡನೇ ದತ್ತಿನಿಧಿಯಾಗಿದ್ದು, ಈ ಹಿಂದೆ ಹೋಬಳಿಯ ಶಿಕ್ಷಕರಿಗಾಗಿ ದತ್ತಿನಿಧಿ ಸ್ಥಾಪಿಸಲಾಗಿತ್ತು ಎಂದು ತಿಳಿಸಿದರು.

ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರ ಸೇವೆಯನ್ನು ಆಧರಿಸಿ ನಿರ್ಮಿಸಲಾದ ‘ನಾಡ ಪೆದ ಆಶಾ’ ಕೊಡವ ಚಲನಚಿತ್ರವನ್ನು ಅವರಿಗೇ ಅರ್ಪಿಸಲಾಗಿತ್ತು. ಚಿತ್ರವು ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿಗೂ ಆಯ್ಕೆಯಾಗಿತ್ತು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹರಿಣಿ ವಿಜಯ್ ತಿಳಿಸಿದರು.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೂ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಸದಸ್ಯತ್ವ ಅರ್ಜಿಯನ್ನು ಕರವಂಡ ಸುಮಿತಾ ಪೊನ್ನಮ್ಮ ಅವರಿಗೆ ನೀಡಿ ಸದಸ್ಯತ್ವ ಸ್ವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ 30ಕ್ಕೂ ಅಧಿಕ ಮಂದಿ ಕನ್ನಡಾಭಿಮಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದುಕೊಂಡರು.

ಸವಿತಾ ಕೀರ್ತನ್ ಮಾತನಾಡಿ, ಕಳೆದ ವರ್ಷದ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮೂರ್ನಾಡು ಹೋಬಳಿ ಘಟಕವು ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸಿರುವುದನ್ನು ಸ್ಮರಿಸಿದರು. ಇದೀಗ ಕಥಾಸ್ಪರ್ಧೆ ಹಾಗೂ ದತ್ತಿನಿಧಿ ಸ್ಥಾಪನೆಯ ಮೂಲಕ ಅವರಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಕಾರ್ಯವನ್ನು ಮುಂದುವರಿಸಿರುವುದು ಶ್ಲಾಘನೀಯ ಎಂದರು.

‘ಶಿಕ್ಷಣದ ಬೆಳಕು’ ಕಥಾಸ್ಪರ್ಧೆ

ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಉದ್ದೇಶದಿಂದ ‘ಶಿಕ್ಷಣದ ಬೆಳಕು’ ವಿಷಯದಡಿ ಕಥಾಸ್ಪರ್ಧೆ ಆಯೋಜಿಸಲಾಗಿತ್ತು.

ಎಂ.ಇ.ಎಸ್. ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರಶಾಂತ್ ಎಸ್.ಡಿ. ಹಾಗೂ ಶಿಕ್ಷಕಿ, ಬರಹಗಾರ್ತಿ ಕೆ.ಜಿ. ರಮ್ಯಾ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಅವರು, ಬರೆಯುವ ಅಭ್ಯಾಸವನ್ನು ಮುಂದುವರಿಸುವಂತೆ ಪ್ರೋತ್ಸಾಹಿಸಿದರು.

ಕಥಾಸ್ಪರ್ಧೆಯಲ್ಲಿ ಜಯಂತಿ ಬಿ.ಬಿ. ಪ್ರಥಮ, ಕನ್ನಿಕ ಕೆ.ಎಂ. ದ್ವಿತೀಯ ಹಾಗೂ ಜಯಶ್ರೀ ಪಿ.ಜಿ. ತೃತೀಯ ಬಹುಮಾನ ಪಡೆದರು. ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ 21 ಸ್ಪರ್ಧಿಗಳಿಗೂ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ದತ್ತಿನಿಧಿ ಸ್ಥಾಪಿಸಿದ ಅವರೆಮಾದಂಡ ಶರಣ್ ಪೂಣಚ್ಚ ಅವರನ್ನು ಕಸಾಪ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಂ.ಇ.ಎಸ್. ಶಾಲೆಯ ಗೌರವ ಕಾರ್ಯದರ್ಶಿ ಪುದಿಯೋಕ್ಕಡ ಹರೀಶ್ ದೇವಯ್ಯ, ವಿಶೇಷ ಆಹ್ವಾನಿತ ಮಠದಮನೆ ಧನಂಜಯ, ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್, ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲೆ ದಂಬೆಕೋಡಿ ಸುಶೀಲ, ಈರಮಂಡ ವಿಜಯ್, ಸಂಘಟನೆ ಕಾರ್ಯದರ್ಶಿ ಅಬ್ದುಲ್ ಖಾದರ್, ಪದಾಧಿಕಾರಿ ಪುದಿಯೊಕ್ಕಡ ರಮ್ಯ ವಿಪನ್, ಮಹಮ್ಮದ್ ಕಡಂಗ, ತೇಲಪಂಡ ಗುಲ್ಶನ್, ದಿನೇಶ್ ಪೆಗ್ಗೋಳಿ, ಮಹಿಳಾ ಪ್ರತಿನಿಧಿ ಮೀನಾಕ್ಷಿ ಕೇಶವ್, ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ,  ಮರಗೋಡು ಶ್ರೀ ಗಣಪತಿ ದೇವಸ್ಥಾನ ಭಜನಾ ಮಂಡಳಿಯ ಸದಸ್ಯರು ಸೇರಿದಂತೆ ಕಸಾಪ ಸದಸ್ಯರು, ಅಂಗನವಾಡಿ ಶಿಕ್ಷಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ಮೂರ್ನಾಡು ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ಎಂ.ಇ.ಎಸ್. ಪ್ರೌಢಶಾಲೆಯ ಶಿಕ್ಷಕಿ ಮಂಗಳ ನೆರವೇರಿಸಿದರು. ಮುಖ್ಯಶಿಕ್ಷಕಿ ಸುಜಾತ ಎಂ.ಎಂ. ಸ್ವಾಗತಿಸಿದರು. ಕಥಾಸ್ಪರ್ಧೆಯ ಬಹುಮಾನ ವಿತರಣೆಯನ್ನು ಕಸಾಪ ಸಂಘಟನೆ ಕಾರ್ಯದರ್ಶಿ ಕೊಂಪುಳಿರ ಮಮತಾ ನೆರವೇರಿಸಿದರು. ಕಥಾಸ್ಪರ್ಧೆಯ ತೀರ್ಪುಗಾರರಾದ ಪ್ರಶಾಂತ್ ಎಸ್.ಡಿ. ಹಾಗೂ ಕೆ.ಜಿ. ರಮ್ಯಾ ಅವರ ಪರಿಚಯವನ್ನು ಕಸಾಪ ಮೂರ್ನಾಡು ಹೋಬಳಿ ಘಟಕದ ಸಹ ಕಾರ್ಯದರ್ಶಿ ಅಪ್ಪಚಂಡ ಸುಚಿತ ಹಾಗೂ ಪದಾಧಿಕಾರಿ ಭಾರತಿ ಬಿ.ಎಲ್. ಅವರು ನೆರವೇರಿಸಿದರು. ದತ್ತಿನಿಧಿ ಸ್ಥಾಪಕರ ಪರಿಚಯವನ್ನು ಅವರೆಮಾದಂಡ ಆಶಾರವರು ಮಾಡಿದರು. ಖಜಾಂಚಿ ಮಡೆಯಂಡ ಸೂರಜ್ ವಂದಿಸಿದರು.

ವಿದ್ಯಾರ್ಥಿಗಳ ಸ್ವಾಗತ ನೃತ್ಯ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, ಸೆ.19 NEWS DESK : ಮೂರ್ನಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕರ…

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*

ಸೆಪ್ಟೆಂಬರ್ 19, 2026

*ಕೊಡಗಿನ ಹಸಿರು ಪರಿಸರ ಸಂರಕ್ಷಿಸಿದರೆ ಕಾವೇರಿ ಉಳಿಯಲಿದೆ: ಸಿ.ಪಿ.ಮುತ್ತಣ್ಣ*

ಸೆಪ್ಟೆಂಬರ್ 19, 2026

*ರೂ.7.50 ಕೋಟಿ ಬಿಲ್ ಪಾವತಿಗೆ ಬಾಕಿ : ಸೆ.22 ರಿಂದ ಗುತ್ತಿಗೆದಾರರ ಅಹೋರಾತ್ರಿ ಪ್ರತಿಭಟನೆ*

ಸೆಪ್ಟೆಂಬರ್ 19, 2026

*ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸೆಂಟ್ ಥಾಮಸ್ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 19, 2026

*ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಕೂಟಿ ಸವಾರನಿಗೆ ಗಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಜಾದು ಪ್ರದರ್ಶನಕ್ಕೆ ಜನಮೆಚ್ಚುಗೆ*

ಸೆಪ್ಟೆಂಬರ್ 19, 2026

*ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*

ಸೆಪ್ಟೆಂಬರ್ 19, 2026

*ಕಬಡ್ಡಿಯಿಂದ ಧೈರ್ಯ, ಶಿಸ್ತು, ನಾಯಕತ್ವ ಗುಣ ವೃದ್ಧಿ: ಎ.ಆರ್. ಮುತ್ತಣ್ಣ*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.