“ಆಪರೇಷನ್ ಕಮಲ” ಮತ್ತೆ ಚುರುಕು

ಬೆಂಗಳೂರು ಮೇ 31 : ಕೊರೋನಾ ಸಾಂಕ್ರಾಮಿಕದ ನಡುವೆ ರಾಜ್ಯ ರಾಜಕೀಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಇಂದು (ಮೇ 31) ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಂತೆ “ಆಪರೇಷನ್ ಕಮಲ” ಮತ್ತೆ ಚುರುಕಾಗಿದೆ.
ಕಾಂಗ್ರೆಸ್ ಮುಖಂಡ ಮತ್ತು ಟಿ ದಾಸರಹಳ್ಳಿ ಕ್ಷೇತ್ರದ ಬಿಬಿಎಂಪಿ ಸದಸ್ಯೆಯ ಪತಿ ತಿಮ್ಮನಂಜಯ್ಯ ಬಿಜೆಪಿಗೆ ಸೇರಿದರು.
ಟಿ ದಾಸರಹಳ್ಲಿಯ ಮಾಜಿ ಬಿಜೆಪಿ ಶಾಸಕ ಎಸ್ ಮುನಿರಾಜು ಕೊರೋನಾವೈರಸ್ ಕಾರಣದಿಂದಾಗಿ ಲಾಕ್ ಡೌನ್ ಸಮಯದಲ್ಲಿ ತೊಂದರೆಯಲ್ಲಿದ್ದ ಜನರಿಗೆ ಸಹಾಯ ಮಾಡಲು ಪಟ್ಟುಬಿಡದೆ ಕೆಲಸ ಮಾಡಿದರು. ಅವರು ಅನೇಕ ಜನರಿಗೆ ದಿನಸಿ ಮತ್ತು ತರಕಾರಿಗಳನ್ನು ಪೂರೈಸಿದ್ದರು. ಈ ಸಮಯದಲ್ಲಿ, ಅವರು ಕ್ಷೇತ್ರದ ‘ಆಪರೇಷನ್ ಕಮಲ’ಕ್ಕೆ ಸಕ್ರಿಯವಾಗಿ ಪ್ರಚೋದನೆಯನ್ನು ನೀಡಿದರು ಮತ್ತು ಪಕ್ಷಕ್ಕೆ ಸೇರಲು ತಿಮ್ಮನಂಜಯ್ಯನಬ್ವರನ್ನು ಸೆಳೆಯಲು ಯಶಸ್ವಿಯಾಗಿದ್ದಾಗಿ ಹೇಳಲಾಗಿದೆ.
ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುವ ನಗರದ ಪೀಣ್ಯ ಕೈಗಾರಿಕಾ ಪ್ರದೇಶದ ವಾರ್ಡ್ನಿಂದ ತಿಮ್ಮನಂಜಯ್ಯ ಅವರ ಪತ್ನಿ ಲಲಿತಾ ಸಧ್ಯ ಕ್ಷೇತ್ರದ ಕಾರ್ಪೋರೇಟರ್ ಆಗಿದ್ದಾರೆ.