ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ

ಮಡಿಕೇರಿ ಜು.02 : ಪ್ರಸಕ್ತ(2020-21)ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು.
ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು. ಈ ಯೋಜನೆಯ ವಿಮೆ ನೊಂದಣಿ ಅಂತಿಮ ದಿನಾಂಕ ಜೂನ್, 30 ಆಗಿತ್ತು, ಆದರೆ ದಿನಾಂಕವನ್ನು ಜುಲೈ, 10 ರವರೆಗೆ ಮುಂದೂಡಲಾಗಿದೆ.
2020-21 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ
ಕಾಳು ಮೆಣಸು ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ (ರೂ. ಗಳಲ್ಲಿ) ರೂ.47,000, ಪ್ರತಿ ಹೆಕ್ಟೇರ್ ಗೆ ವಿಮಾ ಕಂತು(ಶೇ.30) ರೂ. ಗಳಲ್ಲಿ14,100, ರೈತರು ಪಾವತಿಸಬೇಕಾಗಿರುವ ಕಂತು(ಶೇ.5)) ರೂ. ಗಳಲ್ಲಿ ರೂ. 2,350.
ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ (ರೂ. ಗಳಲ್ಲಿ) ರೂ.1,28,000, ಪ್ರತಿ ಹೆಕ್ಟೇರ್ ಗೆ ವಿಮಾ ಕಂತು(ಶೇ.30) ರೂ. ಗಳಲ್ಲಿ 38,400, ರೈತರು ಪಾವತಿಸಬೇಕಾಗಿರುವ ಕಂತು(ಶೇ.5)) ರೂ. ಗಳಲ್ಲಿ ರೂ. 6,400.
ಹೆಚ್ಚಿನ ಮಾಹಿತಿಗೆ ರೈತರು ಕೂಡಲೇ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು, ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು(ಸಿಎಸ್ಸಿ) ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.
