ಪ್ರತಿಕೂಲ ಹವಾಮಾನ : ತಲಕಾವೇರಿಯಲ್ಲಿ ಮುಂದುವರೆದ ಶೋಧ ಕಾರ್ಯ
12/08/2020

ಮಡಿಕೇರಿ, ಆ. 12 : ತಲಕಾವೇರಿ ಭೂಕುಸಿತ ಸ್ಥಳದಲ್ಲಿ ಕಾಣೆಯಾಗಿರುವ ಮೂವರ ಹುಡುಕಾಟ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಆರಕ್ಷಕ ಉಪ ಅಧೀಕ್ಷಕರು, ಮಡಿಕೇರಿ ವಿಭಾಗ ರವರ ನೇತೃತ್ವದಲ್ಲಿ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಪೊಲೀಸ್, ಅಗ್ನಿಶಾಮಕ, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್. ಮತ್ತು ಅರಣ್ಯ ಇಲಾಖೆಯ ರಕ್ಷಣಾ ತಂಡಗಳು ಸ್ಥಳದಲ್ಲೇ ಇದ್ದು, ಕಾರ್ಯಾಚರಣೆಯಲ್ಲಿ ತೊಡಗಿರುತ್ತದೆ.

