ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಭೇಟಿ

12/08/2020

ಮಡಿಕೇರಿ ಆ. 12 : ಜಿಲ್ಲೆಯಲ್ಲಿ ಸುರಿದ ಮಹಾ ಮಳೆಯಿಂದ ಸಂಕಷ್ಟಕ್ಕೊಳಗಾಗಿರುವ ಪ್ರವಾಹ ಪೀಡಿತ ಪ್ರದೇಶ ಹಾಗೂ ಸಂತ್ರಸ್ತರ ಮನೆಗಳಿಗೆ ಕಾಂಗ್ರೆಸ್‍ನ ಪ್ರಮುಖರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ನೇತೃತ್ವದಲ್ಲಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ನಂತರ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ತಹಶೀಲ್ದಾರರಿಗೆ ಕರೆ ಮಾಡಿ ಜನರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ಹೇಳಿದರು. ಅಲ್ಲದೇ ಶಾಶ್ವತ ತಡೆಗೋಡೆ ನಿರ್ಮಿಸಿದಲ್ಲಿ ಇಡೀ ಗ್ರಾಮವನ್ನೇ ಸುರಕ್ಷಿತವಾಗಿಡಲು ಸಾಧ್ಯ ಎಂದು ಸಲಹೆ ನೀಡಿದರು.
ನಿಯೋಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪುಣಚ್ಚ, ಕದನೂರು ಮಾಜಿ ಪಂಚಾಯತ್ ಸದಸ್ಯ ಹನಿಫ್, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿನೇಶ್, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ ಸುರೇಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಕೆ.ಎಂ ಬಾವ, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್, ಪ್ರಧಾನ ಕಾರ್ಯದರ್ಶಿ ಜಾನ್ಸನ್, ನಗರ ಅಧ್ಯಕ್ಷ ಮೋಹನ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ಡಿಸಿಸಿ ಸದಸ್ಯರಾದ ಮಹಮ್ಮದ್ ರಫಿ, ಕೊಣ್ಣಂಗೇರಿ ವಲಯ ಅಧ್ಯಕ್ಷ ಸದಲಿ, ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಂದಾಯಿ, ವಲಯ ಸಂಯೋಜಕ ಹೆಚ್.ಯು ನಾಸೀರ್, ಬೇತ್ರಿ ಕಾಕೊಟುಪಾರಂಬು ಪಂಚಾಯಿತಿ ವಲಯ ಅಧ್ಯಕ್ಷ ಅನಿಲ್, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷೆ ಪೆÇನ್ನಕ್ಕಿ, ವಲಯ ಸಂಯೋಜಕ ಪ್ರವೀಣ್, ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಹಾಗೂ ಪ್ರಮುಖರಾದ ಶಬ್ಬೀರ್, ಸಲೀಂ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.