ಭಯೋತ್ಪಾದಕರನ್ನು ನಿಗ್ರಹಿಸಿದ ಮೂವರಿಗೆ ಶೌರ್ಯ ಚಕ್ರ ಪ್ರಶಸ್ತಿ

14/08/2020

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಾಗಿ ಮೂವರಿಗೆ ಶೌರ್ಯ ಚಕ್ರ ಸೇರಿದಂತೆ ಸೈನ್ಯದ ಶೌರ್ಯ ಪ್ರಶಸ್ತಿಗಳನ್ನು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ ಘೋಷಿಸಿದ್ದಾರೆ.
ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ವಿಶಾಖ್ ನಾಯರ್ ಅವರಿಗೆ ಶೌರ್ಯ ಚಕ್ರ ಗೌರವ ಸಂದಿದೆ.
ಇದರೊಡನೆ ಲೆಫ್ಟಿನೆಂಟ್ ಕೊಲೋನಲ್ ಕ್ರಿಶನ್ ಸಿಂಗ್ ರಾವತ್, ಮೇಜರ್ ಅನಿಲ್ ಅರಸ್ ಹಾಗೂ ಹವಾಲ್ದಾರ್ ಅಲೋಕ್ ಕುಮಾರ್ ದುಬೆ ಸೇನೆಯಲ್ಲಿದ್ದು ಶೌರ್ಯ ಚಕ್ರ ಗೌರವಕ್ಕೆ ಪಾತ್ರರಾದ ಮೂವರು ವೀರರಾಗಿದ್ದಾರೆ.