ಗಡಿ ಬಂದ್ : ವಿವರ ಕೇಳಿದ ಕೋರ್ಟ್

15/08/2020

ಬೆಂಗಳೂರು ಆ.15 : ಶಿಷ್ಟಾಚಾರದ ಕಾರಣ ನೆರೆಯ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಅನೇಕಲ್ ಮತ್ತು ಹೊಸೂರು ತಾಲೂಕಿನ ಅಸಂಘಟಿತ ವಲಯದ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಹೈಕೋರ್ಟ್ ಗೆ ಸಲ್ಲಿಸಲಾಗಿದೆ. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕರ್ನಾಟಕ ಸರ್ಕಾರದಿಂದ ವಿವರಣೆ ಬಯಸಿದೆ.
ವೃತ್ತಿಯಲ್ಲಿ ವಕೀಲರಾಗಿರುವ ಎಂ.ಇಂದಿರಾ ಪ್ರಿಯಾದರ್ಶಿನಿ ಈ ಅರ್ಜಿ ಸಲ್ಲಿಸಿದ್ದು, ರಾಜ್ಯಕ್ಕೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಬೇಕೆಂದು ಸರ್ಕಾರ ಕಡ್ಡಾಯ ಮಾಡಿರುವುದರಿಂದ ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಹೊಸೂರು ಮತ್ತು ಅನೇಕಲ್ ತಾಲೂಕಿನ ನೂರಾರು ಜನರು ತಮ್ಮ ದಿನನಿತ್ಯದ ಬದುಕಿಗಾಗಿ ತೀವ್ರ ತೊಂದರೆ ಎದುರಿಸುವಂತಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಉದ್ಯೋಗಿಗಳು ನೀಡಿರುವ ಐಡಿ ಕಾರ್ಡ್ ಗಳನ್ನು ಅಪ್ ಲೋಡ್ ಮಾಡಿದ ನಂತರ ಇ-ಪಾಸುಗಳು ದೊರೆಯುತ್ತಿವೆ. ಆದರೆ, ಅಸಂಘಟಿತ ವಲಯದ ಕಾರ್ಮಿಕರಿಗೆ ಯಾವುದೇ ರೀತಿಯ ಕಾರ್ಡ್ ಗಳನ್ನು ನೀಡಿಲ್ಲ. ಇದರಿಂದಾಗಿ ಅಂತರ್ ರಾಜ್ಯ ಗಡಿಯಲ್ಲಿ ಅವರ ಚಲಿಸುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಅವರು ವಾದಿಸಿದರು.