ಕೊಡಗು ಜಿಲ್ಲಾ ಬಿಜೆಪಿಯಿಂದ ಸ್ವಾತಂತ್ರ್ಯ ದಿನ ಆಚರಣೆ
15/08/2020

ಮಡಿಕೇರಿ ಆ. 15 : ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಧ್ವಜಾರೋಹಣ ನೆರವೇರಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಸತೀಶ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರ ಅಧ್ಯಕ್ಷ ಮನು ಮಂಜುನಾಥ್, ಪ್ರದಾನ ಕಾರ್ಯದರ್ಶಿ ಕೆ. ಎಂ. ಅಪ್ಪಣ್ಣ, ಕಾರ್ಯಾಲಯ ಕಾರ್ಯದರ್ಶಿ ಜಗದೀಶ್, ಮಹಿಳಾ ಮೋರ್ಚಾದ ಸವಿತಾ ರಾಕೇಶ್, ಶ್ವೇತ ಪ್ರಶಾಂತ್, ಎಸ್.ಸಿ. ಮೋರ್ಚಾದ ಗಣೇಶ್, ಎಸ್.ಟಿ. ಮೋರ್ಚಾ ದ ನಾಗೇಶ್, ಕೆ.ಎಸ್. ರಮೇಶ್ ಹಾಗೂ ಮತ್ತಿತರರು ಹಾಜರಿದ್ದರು.

